AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSU Privatisation: ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳ ಖಾಸಗೀಕರಣ ಪ್ರಸ್ತಾವಕ್ಕೆ ಷೇರು ಮಾರ್ಕೆಟ್ ಪ್ರತಿಕ್ರಿಯೆ ಹೇಗಿದೆ?

ಕೇಂದ್ರ ಬಜೆಟ್ 2022ರಲ್ಲಿ ಸಾರ್ವಜನಿಕ ಸಂಸ್ಥೆಗಳ ಖಾಸಗೀಕರಣದ ಘೋಷಣೆಗೆ ಷೇರುಪೇಟೆಯಲ್ಲಿನ ಪಿಎಸ್​ಯು ಸೂಚ್ಯಂಕವು ಪ್ರತಿಕ್ರಿಯೆ ನೀಡಿದ್ದು ಹೇಗೆ ಎಂಬ ಮಾಹಿತಿ ಇಲ್ಲಿದೆ.

PSU Privatisation: ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳ ಖಾಸಗೀಕರಣ ಪ್ರಸ್ತಾವಕ್ಕೆ ಷೇರು ಮಾರ್ಕೆಟ್ ಪ್ರತಿಕ್ರಿಯೆ ಹೇಗಿದೆ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Feb 01, 2022 | 11:33 AM

Share

ಕೇಂದ್ರ ಬಜೆಟ್​ 2022ರ ಮಂಡನೆ ವೇಳೆ ಹಣಕಾಸು ಸಚಿವೆ ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳ ಖಾಸಗೀಕರಣದ (Privatisation) ಬಗ್ಗೆ ಪ್ರಸ್ತಾವ ಮಾಡಿದ್ದಾರೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಎಲ್​ಐಸಿ ಐಪಿಒ ಮತ್ತು ಇಸ್ಪಾತ್ ನೀಲಾಂಚಲ್ ಅನ್ನು ಟಾಟಾ ಸ್ಟೀಲ್​ಗೆ ವಹಿಸುವ ಬಗ್ಗೆ ಕೂಡ ತಿಳಿಸಿದ್ದಾರೆ. ಇದರಿಂದಾಗಿ ಷೇರು ಮಾರುಕಟ್ಟೆಯಲ್ಲಿ ಸಾರ್ವಜನಿಕ ಸ್ವಾಮ್ಯದ ಕಂಪೆನಿಗಳ ಷೇರಿನ ಬೆಲೆಯಲ್ಲಿ ಹೆಚ್ಚಳವಾಗಿದೆ. ಬಿಎಸ್​ಇ ಪಿಎಸ್​ಯು ಸೂಚ್ಯಂಕವು ಈ ಹಿಂದಿನ ಟ್ರೇಡಿಂಗ್ ಸೆಷನ್​ನಲ್ಲಿ 9020.21 ಪಾಯಿಂಟ್ಸ್​​ನೊಂದಿಗೆ ವಹಿವಾಟು ಮುಕ್ತಾಯಗೊಳಿಸಿತ್ತು. ಇಂದು ಆರಂಭವಾಗಿದ್ದು 9113.04 ಪಾಯಿಂಟ್ಸ್​​ಗೆ. ಆ ನಂತರ ದಿನದ ಗರಿಷ್ಠ ಮಟ್ಟ 9114.15 ಪಾಯಿಂಟ್ಸ್ ತಲುಪಿತು.

ಅಂದ ಹಾಗೆ ಬಿಎಸ್​ಇ ಪಿಎಸ್​ಯು ಸೂಚ್ಯಂಕದ ವಾರ್ಷಿಕ ಕನಿಷ್ಠ ಮಟ್ಟ 5724.42 ಪಾಯಿಂಟ್ಸ್​ ಆಗಿದ್ದು, ಗರಿಷ್ಠ ಮಟ್ಟ 9,358.78 ಪಾಯಿಂಟ್ಸ್ ಆಗಿದೆ. ಇತ್ತೀಚೆಗೆ ಏರ್​ ಇಂಡಿಯಾವನ್ನು ಯಶಸ್ವಿಯಾಗಿ ಟಾಟಾ ಸಮೂಹಕ್ಕೆ ವರ್ಗಾವಣೆ ಮಾಡಿ ಮುಗಿಸಿರುವುದು ದೊಡ್ಡ ಮಟ್ಟದ ಆತ್ಮವಿಶ್ವಾಸ ನೀಡಿದೆ. ಸಾಲದ ಸುಳಿಯಲ್ಲಿ ಸಿಲುಕಿದ್ದ ಏರ್​ ಇಂಡಿಯಾದ ಷೇರಿನ ಪಾಲನ್ನು ಮಾರಾಟ ಮಾಡಿದ್ದು, ಇದೀಗ ಎಲ್​ಐಸಿ ಐಪಿಒ ಪ್ರಸಕ್ತ ಹಣಕಾಸು ವರ್ಷದಲ್ಲಿ ಅತಿ ದೊಡ್ಡ ನಿರೀಕ್ಷೆ ಆಗಿದೆ.

ಎಲ್​ಐಸಿ ಐಪಿಒ ಭಾರತದ ಇತಿಹಾಸದಲ್ಲೇ ಅತಿ ದೊಡ್ಡ ಐಪಿಒ ಆಗಿದೆ. ಇದರ ಜತೆಗೆ ಇತರ ಸಾರ್ವಜನಿಕ ಸ್ವಾಮ್ಯದ ಷೇರುಗಳ ಮಾರಾಟ ಕೂಡ 2022-23ರ ಹಣಕಾಸು ವರ್ಷದಲ್ಲಿ ಮಾಡಲಾಗುವುದು. ಈ ಲೇಖನವನ್ನು ಸಿದ್ಧ ಮಾಡುವ ಹೊತ್ತಿಗೆ ಅಲ್ಪ ಪ್ರಮಾಣದ ಇಳಿಕೆಯೊಂದಿಗೆ 9,019.46 ಪಾಯಿಂಟ್ಸ್​ನಲ್ಲಿ ವಹಿವಾಟು ನಡೆಸುತ್ತಿತ್ತು.

ಇದನ್ನೂ ಓದಿ: Air India: ಟಾಟಾ ಸಮೂಹಕ್ಕೆ ಏರ್​ ಇಂಡಿಯಾ ಹಸ್ತಾಂತರಿಸುವ ಕಾರ್ಯ ಸಂಪೂರ್ಣ ಎಂದು ಘೋಷಿಸಿದ ತುಹಿನ್ ಕಾಂತ್ ಪಾಂಡೆ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ