AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Income Tax: ಬಜೆಟ್​ನಲ್ಲಿ ಬಂಪರ್ ಗಿಫ್ಟ್; 12 ಲಕ್ಷ ರೂವರೆಗಿನ ಆದಾಯಕ್ಕೆ ತೆರಿಗೆ ಇಲ್ಲ; ಇಲ್ಲಿದೆ ಟ್ಯಾಕ್ಸ್ ಸ್ಲಾಬ್ ದರಗಳ ಪಟ್ಟಿ

Income tax new slab rates announced: 2025ರ ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಮಧ್ಯಮವರ್ಗದವರಿಗೆ ರಿಲೀಫ್ ನೀಡಿದ್ದಾರೆ. 12 ಲಕ್ಷ ರೂ ಒಳಗಿನ ವಾರ್ಷಿಕ ಆದಾಯ ಪಡೆಯುತ್ತಿರುವವರು ಆದಾಯ ತೆರಿಗೆ ಪಾವತಿಸುವ ಅವಶ್ಯಕತೆ ಇರುವುದಿಲ್ಲ. ಹೊಸ ಟ್ಯಾಕ್ಸ್ ರಿಜೈಮ್​ನಲ್ಲಿ ನಾಲ್ಕು ಲಕ್ಷ ರೂವರೆಗಿನ ಆದಾಯಕ್ಕೆ ವಿನಾಯಿತಿ ನೀಡಲಾಗಿದೆ. 24 ಲಕ್ಷ ರೂ ಮೇಲ್ಪಟ್ಟ ಆದಾಯಕ್ಕೆ ಗರಿಷ್ಠ ಶೇ. 30ರಷ್ಟು ತೆರಿಗೆ ಹಾಕಲಾಗುತ್ತದೆ.

Income Tax: ಬಜೆಟ್​ನಲ್ಲಿ ಬಂಪರ್ ಗಿಫ್ಟ್; 12 ಲಕ್ಷ ರೂವರೆಗಿನ ಆದಾಯಕ್ಕೆ ತೆರಿಗೆ ಇಲ್ಲ; ಇಲ್ಲಿದೆ ಟ್ಯಾಕ್ಸ್ ಸ್ಲಾಬ್ ದರಗಳ ಪಟ್ಟಿ
ಆದಾಯ ತೆರಿಗೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Feb 01, 2025 | 1:03 PM

Share

ನವದೆಹಲಿ, ಫೆಬ್ರುವರಿ 1: ನಿರೀಕ್ಷೆಯಂತೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಎಂಟನೇ ಬಜೆಟ್​ನಲ್ಲಿ (Union Budget 2025) ಮಧ್ಯಮವರ್ಗದವರ ಬಹುಬೇಡಿಕೆಯನ್ನು ನೆರವೇರಿಸಿದ್ದಾರೆ. ಆದಾಯ ತೆರಿಗೆಯ ಹೊರೆಯನ್ನು ಇಳಿಸಿದ್ದಾರೆ. ಅದರಂತೆ 12 ಲಕ್ಷ ರೂವರೆಗಿನ ಆದಾಯ ಹೊಂದಿರುವವರು ಯಾವುದೇ ತೆರಿಗೆ ಕಟ್ಟುವ ಅವಶ್ಯಕತೆ ಇಲ್ಲ. 4 ಲಕ್ಷ ರೂವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ.

ಹೊಸ ಟ್ಯಾಕ್ಸ್ ಸ್ಲಾಬ್ ದರಗಳು

  • 0-4 ಲಕ್ಷ ರೂ: ತೆರಿಗೆ ಇಲ್ಲ
  • 4-8 ಲಕ್ಷ ರೂ: ಶೇ. 5 ತೆರಿಗೆ
  • 8-12 ಲಕ್ಷ ರೂ: ಶೇ. 10 ತೆರಿಗೆ
  • 12-16 ಲಕ್ಷ ರೂ: ಶೇ. 15 ತೆರಿಗೆ
  • 16-20 ಲಕ್ಷ ರೂ: ಶೇ. 20 ತೆರಿಗೆ
  • 20-24 ಲಕ್ಷ ರೂ: ಶೇ. 25 ತೆರಿಗೆ
  • 24 ಲಕ್ಷ ರೂ ಮೇಲ್ಪಟ್ಟು: ಶೇ. 30 ತೆರಿಗೆ

ಇದನ್ನೂ ಓದಿ: Budget PDF Download: ಕೇಂದ್ರ ಬಜೆಟ್ 2025: ಪಿಡಿಎಫ್ ಪ್ರತಿ ಡೌನ್​ಲೋಡ್ ಮಾಡಿ

ಇಲ್ಲಿ ಸೆಕ್ಷನ್ 87ಎ ಅಡಿಯಲ್ಲಿ ರಿಬೇಟ್ ನೀಡಲಾಗುತ್ತದೆ. ಇದನ್ನು ಈ ಬಾರಿ ಮತ್ತಷ್ಟು ಹೆಚ್ಚಿಸಲಾಗಿದೆ. ಈ ಹಿಂದೆ 7 ಲಕ್ಷ ರೂವರೆಗಿನ ಆದಾಯಕ್ಕೆ ಟ್ಯಾಕ್ಸ್ ರಿಬೇಟ್ ನೀಡಲಾಗುತ್ತಿತ್ತು. ಈಗ ಈ ಪ್ರಕಾರ 12 ಲಕ್ಷ ರುವರೆಗಿನ ಆದಾಯಕ್ಕೆ ತೆರಿಗೆ ಕಟ್ಟುವ ಅವಶ್ಯಕತೆ ಇರುವುದಿಲ್ಲ.

ಹಿರಿಯ ನಾಗರಿಕರಿಗೆ ಸಿಗುವ ಬಡ್ಡಿ ಆದಾಯದಲ್ಲಿ ಟ್ಯಾಕ್ಸ್ ಡಿಡಕ್ಷನ್ ಮಿತಿಯನ್ನು 1 ಲಕ್ಷ ರೂಗೆ ಹೆಚ್ಚಿಸಲಾಗಿದೆ. ಅಂದರೆ, ಠೇವಣಿಗಳಿಂದ ವರ್ಷಕ್ಕೆ ಸಿಗುವ 1 ಲಕ್ಷ ರೂವರೆಗಿನ ಬಡ್ಡಿ ಆದಾಯಕ್ಕೆ ಟ್ಯಾಕ್ಸ್ ವಿನಾಯಿತಿ ಸಿಗುತ್ತದೆ.

ಬಾಡಿಗೆಗಳಿಂದ ಬರುವ ಆದಾಯಕ್ಕೆ ವಾರ್ಷಿಕ ಟಿಡಿಎಸ್ ಮಿತಿಯನ್ನು 2.4 ಲಕ್ಷ ರೂನಿಂದ 6 ಲಕ್ಷ ರೂಗೆ ಏರಿಸಲಾಗಿದೆ.

ಬಜೆಟ್ ಹೈಲೈಟ್ಸ್​ಗೆ ಇಲ್ಲಿ ಕ್ಲಿಕ್ ಮಾಡಿ

ಇನ್ನಷ್ಟು ಬಜೆಟ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:49 pm, Sat, 1 February 25

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ