AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Income Tax: ಬಜೆಟ್​ನಲ್ಲಿ ಬಂಪರ್ ಗಿಫ್ಟ್; 12 ಲಕ್ಷ ರೂವರೆಗಿನ ಆದಾಯಕ್ಕೆ ತೆರಿಗೆ ಇಲ್ಲ; ಇಲ್ಲಿದೆ ಟ್ಯಾಕ್ಸ್ ಸ್ಲಾಬ್ ದರಗಳ ಪಟ್ಟಿ

Income tax new slab rates announced: 2025ರ ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಮಧ್ಯಮವರ್ಗದವರಿಗೆ ರಿಲೀಫ್ ನೀಡಿದ್ದಾರೆ. 12 ಲಕ್ಷ ರೂ ಒಳಗಿನ ವಾರ್ಷಿಕ ಆದಾಯ ಪಡೆಯುತ್ತಿರುವವರು ಆದಾಯ ತೆರಿಗೆ ಪಾವತಿಸುವ ಅವಶ್ಯಕತೆ ಇರುವುದಿಲ್ಲ. ಹೊಸ ಟ್ಯಾಕ್ಸ್ ರಿಜೈಮ್​ನಲ್ಲಿ ನಾಲ್ಕು ಲಕ್ಷ ರೂವರೆಗಿನ ಆದಾಯಕ್ಕೆ ವಿನಾಯಿತಿ ನೀಡಲಾಗಿದೆ. 24 ಲಕ್ಷ ರೂ ಮೇಲ್ಪಟ್ಟ ಆದಾಯಕ್ಕೆ ಗರಿಷ್ಠ ಶೇ. 30ರಷ್ಟು ತೆರಿಗೆ ಹಾಕಲಾಗುತ್ತದೆ.

Income Tax: ಬಜೆಟ್​ನಲ್ಲಿ ಬಂಪರ್ ಗಿಫ್ಟ್; 12 ಲಕ್ಷ ರೂವರೆಗಿನ ಆದಾಯಕ್ಕೆ ತೆರಿಗೆ ಇಲ್ಲ; ಇಲ್ಲಿದೆ ಟ್ಯಾಕ್ಸ್ ಸ್ಲಾಬ್ ದರಗಳ ಪಟ್ಟಿ
ಆದಾಯ ತೆರಿಗೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Feb 01, 2025 | 1:03 PM

Share

ನವದೆಹಲಿ, ಫೆಬ್ರುವರಿ 1: ನಿರೀಕ್ಷೆಯಂತೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಎಂಟನೇ ಬಜೆಟ್​ನಲ್ಲಿ (Union Budget 2025) ಮಧ್ಯಮವರ್ಗದವರ ಬಹುಬೇಡಿಕೆಯನ್ನು ನೆರವೇರಿಸಿದ್ದಾರೆ. ಆದಾಯ ತೆರಿಗೆಯ ಹೊರೆಯನ್ನು ಇಳಿಸಿದ್ದಾರೆ. ಅದರಂತೆ 12 ಲಕ್ಷ ರೂವರೆಗಿನ ಆದಾಯ ಹೊಂದಿರುವವರು ಯಾವುದೇ ತೆರಿಗೆ ಕಟ್ಟುವ ಅವಶ್ಯಕತೆ ಇಲ್ಲ. 4 ಲಕ್ಷ ರೂವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ.

ಹೊಸ ಟ್ಯಾಕ್ಸ್ ಸ್ಲಾಬ್ ದರಗಳು

  • 0-4 ಲಕ್ಷ ರೂ: ತೆರಿಗೆ ಇಲ್ಲ
  • 4-8 ಲಕ್ಷ ರೂ: ಶೇ. 5 ತೆರಿಗೆ
  • 8-12 ಲಕ್ಷ ರೂ: ಶೇ. 10 ತೆರಿಗೆ
  • 12-16 ಲಕ್ಷ ರೂ: ಶೇ. 15 ತೆರಿಗೆ
  • 16-20 ಲಕ್ಷ ರೂ: ಶೇ. 20 ತೆರಿಗೆ
  • 20-24 ಲಕ್ಷ ರೂ: ಶೇ. 25 ತೆರಿಗೆ
  • 24 ಲಕ್ಷ ರೂ ಮೇಲ್ಪಟ್ಟು: ಶೇ. 30 ತೆರಿಗೆ

ಇದನ್ನೂ ಓದಿ: Budget PDF Download: ಕೇಂದ್ರ ಬಜೆಟ್ 2025: ಪಿಡಿಎಫ್ ಪ್ರತಿ ಡೌನ್​ಲೋಡ್ ಮಾಡಿ

ಇಲ್ಲಿ ಸೆಕ್ಷನ್ 87ಎ ಅಡಿಯಲ್ಲಿ ರಿಬೇಟ್ ನೀಡಲಾಗುತ್ತದೆ. ಇದನ್ನು ಈ ಬಾರಿ ಮತ್ತಷ್ಟು ಹೆಚ್ಚಿಸಲಾಗಿದೆ. ಈ ಹಿಂದೆ 7 ಲಕ್ಷ ರೂವರೆಗಿನ ಆದಾಯಕ್ಕೆ ಟ್ಯಾಕ್ಸ್ ರಿಬೇಟ್ ನೀಡಲಾಗುತ್ತಿತ್ತು. ಈಗ ಈ ಪ್ರಕಾರ 12 ಲಕ್ಷ ರುವರೆಗಿನ ಆದಾಯಕ್ಕೆ ತೆರಿಗೆ ಕಟ್ಟುವ ಅವಶ್ಯಕತೆ ಇರುವುದಿಲ್ಲ.

ಹಿರಿಯ ನಾಗರಿಕರಿಗೆ ಸಿಗುವ ಬಡ್ಡಿ ಆದಾಯದಲ್ಲಿ ಟ್ಯಾಕ್ಸ್ ಡಿಡಕ್ಷನ್ ಮಿತಿಯನ್ನು 1 ಲಕ್ಷ ರೂಗೆ ಹೆಚ್ಚಿಸಲಾಗಿದೆ. ಅಂದರೆ, ಠೇವಣಿಗಳಿಂದ ವರ್ಷಕ್ಕೆ ಸಿಗುವ 1 ಲಕ್ಷ ರೂವರೆಗಿನ ಬಡ್ಡಿ ಆದಾಯಕ್ಕೆ ಟ್ಯಾಕ್ಸ್ ವಿನಾಯಿತಿ ಸಿಗುತ್ತದೆ.

ಬಾಡಿಗೆಗಳಿಂದ ಬರುವ ಆದಾಯಕ್ಕೆ ವಾರ್ಷಿಕ ಟಿಡಿಎಸ್ ಮಿತಿಯನ್ನು 2.4 ಲಕ್ಷ ರೂನಿಂದ 6 ಲಕ್ಷ ರೂಗೆ ಏರಿಸಲಾಗಿದೆ.

ಬಜೆಟ್ ಹೈಲೈಟ್ಸ್​ಗೆ ಇಲ್ಲಿ ಕ್ಲಿಕ್ ಮಾಡಿ

ಇನ್ನಷ್ಟು ಬಜೆಟ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:49 pm, Sat, 1 February 25

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ