AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದಾಯ ತೆರಿಗೆ ಸ್ಲ್ಯಾಬ್ ದರ, ಎಕ್ಸೆಂಪ್ಷನ್ ಮಿತಿಯಲ್ಲಿ ಬದಲಾವಣೆ ನಿರೀಕ್ಷಿಸುತ್ತಿರುವವರಿಗೆ ಕಾದಿದೆ ನಿರಾಸೆ

Union Budget 2024: ಈ ಬಾರಿಯ ಬಜೆಟ್​ನಲ್ಲಿ ಸಾಕಷ್ಟು ತೆರಿಗೆ ರಿಯಾಯಿತಿಗಳನ್ನು ಸರ್ಕಾರ ನೀಡಬಹುದು ಎಂದು ಹಲವರು ನಂಬಿದ್ದಾರೆ. ಈ ನಿರೀಕ್ಷೆ ಪ್ರತೀ ವರ್ಷದಂತೆ ನೀರ ಮೇಲಿನ ಹೋಮದಂತೆ ಎನ್ನುವಂತಹ ಸುದ್ದಿಯೊಂದು ಕೇಳಿಬರುತ್ತಿದೆ. ಈ ಸುದ್ದಿ ಪ್ರಕಾರ ಇನ್ಕಮ್ ಟ್ಯಾಕ್ಸ್ ಸ್ಲ್ಯಾಬ್ ದರದಲ್ಲಾಗಲೀ, ಎಕ್ಸೆಂಪ್ಷನ್ ಲಿಮಿಟ್​ನಲ್ಲಾಗಲೀ ಬದಲಾವಣೆ ಆಗುವ ಸಾಧ್ಯತೆ ಇಲ್ಲ.

ಆದಾಯ ತೆರಿಗೆ ಸ್ಲ್ಯಾಬ್ ದರ, ಎಕ್ಸೆಂಪ್ಷನ್ ಮಿತಿಯಲ್ಲಿ ಬದಲಾವಣೆ ನಿರೀಕ್ಷಿಸುತ್ತಿರುವವರಿಗೆ ಕಾದಿದೆ ನಿರಾಸೆ
ಆದಾಯ ತೆರಿಗೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 11, 2024 | 5:54 PM

Share

ನವದೆಹಲಿ, ಜುಲೈ 11: ಮುಂಗಡ ಪತ್ರ ಮಂಡನೆಗೆ ದಿನಗಣನೆ ನಡೆದಿರುವ ಸಂದರ್ಭದಲ್ಲಿ ನಿರೀಕ್ಷೆಗಳು, ಅಪೇಕ್ಷೆಗಳ ಪಟ್ಟಿ ಬೆಳೆಯುತ್ತಲೇ ಇದೆ. ಪ್ರತಿ ವರ್ಷದ ನಿರೀಕ್ಷೆಗಳಲ್ಲಿ ಆದಾಯ ತೆರಿಗೆಯದ್ದು ಒಂದು ಇದ್ದೇ ಇರುತ್ತದೆ. ಈ ಬಾರಿ ಮೈತ್ರಿ ಅವಲಂಬಿತ ಸರ್ಕಾರ ಅಸ್ತಿತ್ವಕ್ಕೆ ಬಂದಿರುವುದರಿಂದ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳುವುದು ಅನುಮಾನ ಎನ್ನಲಾಗುತ್ತಿತ್ತು. ಅದರಲ್ಲೂ ಆದಾಯ ತೆರಿಗೆ ದರವನ್ನು ಬಜೆಟ್​ನಲ್ಲಿ ಪರಿಷ್ಕರಿಸಬಹುದು ಎಂದು ಹೇಳಲಾಗುತ್ತಿತ್ತು. ಆದರೆ, ವರದಿಗಳ ಪ್ರಕಾರ ಈ ವರ್ಷವೂ ಆದಾಯ ತೆರಿಗೆ ಪಾವತಿದಾರರಿಗೆ ನಿರಾಸೆ ಕಾದಿದೆ. ಅದರಲ್ಲೂ ಸಂಬಳದ ಆದಾಯ ಪಡೆಯುವ ಮಧ್ಯಮವರ್ಗದವರಿಗೆ ನಿರಾಸೆ ಮುಂದುವರಿಯಬಹುದು.

ಈ ಬಾರಿ ಆದಾಯ ತೆರಿಗೆ ದರದಲ್ಲಿ ಇಳಿಕೆ ಮಾಡಬೇಕು ಎನ್ನುವ ಒತ್ತಾಯ ತೆರಿಗೆ ಪಾವತಿದಾರರಿಂದ ಮಾತ್ರವಲ್ಲ, ಉದ್ಯಮ ವಲಯದ ಮುಖಂಡರಿಂದಲೂ ಬಂದಿದೆ. ಟ್ಯಾಕ್ಸ್ ರಿಲೀಫ್ ಸಿಕ್ಕರೆ ಜನರ ಕೈಯಲ್ಲಿ ಹೆಚ್ಚಿನ ಉಳಿತಾಯ ಹಣ ಇರುತ್ತದೆ. ಇದರಿಂದ ಮಾರುಕಟ್ಟೆಯಲ್ಲಿ ಖರೀದಿ ಅಥವಾ ಉಪಭೋಗ ಹೆಚ್ಚುತ್ತದೆ. ಇದು ವಿವಿಧ ಉದ್ದಿಮೆಗಳಿಗೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂಬ ವಾದ ಇದೆ.

ಟ್ಯಾಕ್ಸ್ ಸ್ಲಾಬ್ ದರದಲ್ಲಿ ಬದಲಾವಣೆ ಮಾಡುವುದಕ್ಕಿಂತ ಹೆಚ್ಚಾಗಿ ಸೆಕ್ಷನ್ 80ಸಿ ಅಡಿಯಲ್ಲಿ ಸಿಗುವ ತೆರಿಗೆ ವಿನಾಯಿತಿ ಮಿತಿಯನ್ನು ಹೆಚ್ಚಿಸಬೇಕು ಎನ್ನುವ ಕೂಗಂತೂ ಬಲವಾಗಿ ಕೇಳಿಬರುತ್ತಿದೆ. ದುರದೃಷ್ಟಕ್ಕೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೋದಿ 3.0 ಸರ್ಕಾರದ ಮೊದಲ ಬಜೆಟ್​ನಲ್ಲಿ ಈ ರಿಯಾಯಿತಿ ನೀಡುವ ಗೋಜಿಗೆ ಹೋಗುವ ಸಾಧ್ಯತೆ ಇಲ್ಲ ಎಂದು ಎಕನಾಮಿಕ್ ಟೈಮ್ಸ್ ಪತ್ರಿಕೆಯ ವರದಿಯೊಂದರಲ್ಲಿ ಅಂದಾಜು ಮಾಡಲಾಗಿದೆ.

ಇದನ್ನೂ ಓದಿ: ಕೇಂದ್ರ ಬಜೆಟ್ 2024: ಮಹಿಳೆಯರಿಗೆ ವಿಶೇಷ ತೆರಿಗೆ ಲಾಭ ಸಿಗುತ್ತದಾ? ನಿರೀಕ್ಷೆಗಳಿವು…

ಹೊಸ ತೆರಿಗೆ ವ್ಯವಸ್ಥೆಯಲ್ಲಿ ಸದ್ಯ 3 ಲಕ್ಷ ರೂವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿ ಅಥವಾ ಟ್ಯಾಕ್ಸ್ ಎಕ್ಸೆಂಪ್ಷನ್ ಇದೆ. 3ರಿಂದ 5 ಲಕ್ಷ ರೂವರೆಗಿನ ಆದಾಯಕ್ಕೆ ಶೇ. 5ರಷ್ಟು ತೆರಿಗೆ; 6ರಿಂದ 9 ಲಕ್ಷ ರೂ ಆದಾಯಕ್ಕೆ ಶೇ. 10ರಷ್ಟು ತೆರಿಗೆ; 9ರಿಂದ 12 ಲಕ್ಷ ರೂ ಆದಾಯಕ್ಕೆ ಶೇ. 15ರಷ್ಟು ತೆರಿಗೆ; 12ರಿಂದ 15 ಲಕ್ಷ ರೂ ಆದಾಯಕ್ಕೆ ಶೇ. 20ರಷ್ಟು ತೆರಿಗೆ, ಮತ್ತು 15 ಲಕ್ಷ ರೂ ಮೇಲ್ಪಟ್ಟ ಆದಾಯಕ್ಕೆ ಶೇ. 30ರಷ್ಟು ತೆರಿಗೆ ಇದೆ.

ಇನ್ನಷ್ಟು ಬಜೆಟ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ