AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗೆ ಎಷ್ಟು ವೇತನ ಇದ್ದರೆ ಎಷ್ಟು ಟ್ಯಾಕ್ಸ್? ಈಗೆಷ್ಟು ತೆರಿಗೆ ವಿನಾಯಿತಿ ಸಿಕ್ತು? ಇಲ್ಲಿದೆ ವಿವರ

ಮಧ್ಯಮ ವರ್ಗದವರಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2025 ರ ಬಜೆಟ್‌ನಲ್ಲಿ ಭರ್ಜರಿ ಕೊಡುಗೆ ನೀಡಿದ್ದಾರೆ. ವೇತನ ವರ್ಗಕ್ಕೆ ಆದಾಯ ತೆರಿಗೆ ವಿನಾಯಿತಿ ಹೆಚ್ಚಿಸುವ ಮೂಲಕ ದೊಡ್ಡ ಉಡುಗೊರೆ ನೀಡಿದ್ದಾರೆ. ಈಗ ದೇಶದಲ್ಲಿ 12 ಲಕ್ಷ ರೂ.ವರೆಗಿನ ವೇತನಕ್ಕೆ ಆದಾಯ ತೆರಿಗೆ ವಿನಾಯಿತಿ ಸಿಗಲಿದೆ. ಅಲ್ಲದೆ, 75,000 ರೂ.ಗಳ ಸ್ಟ್ಯಾಂಡರ್ಡ್ ಡಿಡಕ್ಷನ್ ಲಾಭವೂ ಸಿಗಲಿದೆ. ಹೊಸ ತೆರಿಗೆ ವ್ಯವಸ್ಥೆಯಿಂದ ವೇತನ ವರ್ಗಕ್ಕೆ ಎಷ್ಟು ಪ್ರಯೋಜನವಾಗಲಿದೆ ಎಂಬ ಹಣಕಾಸು ಲೆಕ್ಕಾಚಾರ ಇಲ್ಲಿದೆ.

ನಿಮಗೆ ಎಷ್ಟು ವೇತನ ಇದ್ದರೆ ಎಷ್ಟು ಟ್ಯಾಕ್ಸ್? ಈಗೆಷ್ಟು ತೆರಿಗೆ ವಿನಾಯಿತಿ ಸಿಕ್ತು? ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Ganapathi Sharma
|

Updated on:Feb 01, 2025 | 4:55 PM

Share

ನವದೆಹಲಿ, ಫೆಬ್ರವರಿ 1: ಮಧ್ಯಮ ವರ್ಗದವರು, ವೇತನ ವರ್ಗದವರು ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಕೇಂದ್ರ ಸರ್ಕಾರ ಹೆಚ್ಚಿಸಬಹುದು ಎಂಬ ನಿರೀಕ್ಷೆಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಿಜವಾಗಿಸಿದ್ದಾರೆ. 12 ಲಕ್ಷ ರೂ. ವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿ ಪಡೆಯುವ ಅವಕಾಶವನ್ನು ಅವರು 2025ರ ಬಜೆಟ್​​ನಲ್ಲಿ ಒದಗಿಸಿಕೊಟ್ಟಿದ್ದಾರೆ.

ಇಷ್ಟೇ ಅಲ್ಲದೆ, ಆದಾಯ ತೆರಿಗೆ ವ್ಯವಸ್ಥೆಯನ್ನು ಸರಳೀಕರಿಸಿ ಹೊಸ ಕಾನೂನು ರೂಪಿಸುವ ಘೋಷಣೆಯನ್ನೂ ಮಾಡಿದ್ದಾರೆ. ಮುಂದಿನ ವಾರ ಹೊಸ ಮಸೂದೆ ಮಂಡನೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದೀಗ 12 ಲಕ್ಷ ರೂಪಾಯಿ ವರೆಗಿನ ಆದಾಯವನ್ನು ಈಗ ತೆರಿಗೆ ಮುಕ್ತಗೊಳಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿರುವುದರಿಂದ ಎಷ್ಟು ವೇತನ ಇದ್ದವರಿಗೆ ಎಷ್ಟು ತೆರಿಗೆ ವಿನಾಯಿತಿ ದೊರೆಯಲಿದೆ, ದುಡ್ಡು ಉಳಿಯಲಿದೆ ಎಂಬ ವಿವರ ಇಲ್ಲಿದೆ.

ನಿಮಗೆ ಇಷ್ಟು ವೇತನ ಇದ್ದರೆ ತೆರಿಗೆ ಇಲ್ಲ!

ಹೊಸ ತೆರಿಗೆ ವ್ಯವಸ್ಥೆಯ ಪ್ರಕಾರ ವಾರ್ಷಿಕ 12 ಲಕ್ಷ ರೂಪಾಯಿ ವರೆಗೆ ಆದಾಯ ಇದ್ದರೆ ತೆರಿಗೆ ವಿನಾಯಿತಿ ಪಡೆಯಬಹುದು. ಹೊಸ ತೆರಿಗೆ ವ್ಯವಸ್ಥೆಯ ಪ್ರಕಾರ 8 ಲಕ್ಷ ರೂ.ವರೆಗೆ ಆದಾಯ ಇರುವವರಿಗೆ 30,000 ರೂ. ಉಳಿತಾಯವಾಗಲಿದೆ ಎಂದು ಬಜೆಟ್​​​ನಲ್ಲಿ ತಿಳಿಸಲಾಗಿದೆ. 9 ಲಕ್ಷ ರೂಪಾಯಿ ಆದಾಯ ಇರುವವರಿಗೆ 40,000 ರೂ. ಮತ್ತು 10 ಲಕ್ಷ ರೂ. ಆದಾಯ ಇರುವವರಿಗೆ 50,000 ರೂಪಾಯಿ ಉಳಿತಾಯವಾಗಲಿದೆ

ಇದನ್ನೂ ಓದಿ: ಆದಾಯ ತೆರಿಗೆಗೆ ಹೊಸ ಕಾನೂನು, ಮುಂದಿನ ವಾರ ಮಸೂದೆ ಮಂಡನೆ; ನಿರ್ಮಲಾ ಸೀತಾರಾಮನ್ ಘೋಷಣೆ

ತೆರಿಗೆ ಪಾವತಿಯಲ್ಲಿ ಎಷ್ಟು ಉಳಿತಾಯವಾಯ್ತು? ಇಲ್ಲಿದೆ ಲೆಕ್ಕಾಚಾರ

ಹೊಸ ಆದಾಯ ತೆರಿಗೆ ನಿಯಮದ ಪ್ರಕಾರ, 11 ಲಕ್ಷ ರೂಪಾಯಿ ಆದಾಯ ಇದ್ದವರಿಗೆ 65,000 ರೂ. ಉಳಿತಾಯವಾಗಲಿದೆ. 12 ಲಕ್ಷ ರೂ. ಆದಾಯ ಇದ್ದರೆ 80,000 ರೂ. ಉಳಿತಾಯವಾಗಲಿದೆ. 16 ಲಕ್ಷ ರೂ. ಆದಾಯ ಇದ್ದರೆ 50,000 ರೂ. ಉಳಿತಾಯವಾಗಲಿದೆ. 20 ಲಕ್ಷ ರೂ. ಆದಾಯ ಇದ್ದರೆ 50,000 ರೂ. ಉಳಿತಾಯವಾಗಲಿದೆ.

ಆದಾಯ ಉಳಿತಾಯ
8 ಲಕ್ಷ ರೂ. ವರೆಗೆ 30,000 ರೂ.
9 ಲಕ್ಷ ರೂ. 40,000 ರೂ.
10 ಲಕ್ಷ ರೂ. 50,000 ರೂ.
11 ಲಕ್ಷ ರೂ. 65,000 ರೂ.
12 ಲಕ್ಷ ರೂ. 80,000 ರೂ.
16 ಲಕ್ಷ ರೂ. 50,000 ರೂ.
20 ಲಕ್ಷ ರೂ. 90,000 ರೂ.
24 ಲಕ್ಷ ರೂ. 1.10 ಲಕ್ಷ ರೂ.
50 ಲಕ್ಷ ರೂ. 1.10 ಲಕ್ಷ ರೂ.

ಹೊಸ ಆದಾಯ ತೆರಿಗೆ ವ್ಯವಸ್ಥೆಯ ಪ್ರಕಾರ, 24 ಲಕ್ಷ ರೂ. ಆದಾಯ ಇದ್ದರೆ 1.10 ಲಕ್ಷ ರೂ. ತೆರಿಗೆ ಉಳಿತಾಯವಾಗಲಿದೆ. 50 ಲಕ್ಷ ರೂ. ಆದಾಯ ಇದ್ದರೆ 1.10 ಲಕ್ಷ ರೂ. ತೆರಿಗೆ ಉಳಿತಾಯವಾಗಲಿದೆ ಎಂದು ನಿರ್ಮಲಾ ಸೀತಾರಾಮನ್ ಬಜೆಟ್​​ನಲ್ಲಿ ತಿಳಿಸಿದ್ದಾರೆ.

ಬಜೆಟ್ ಸಂಬಂಧಿತ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:16 pm, Sat, 1 February 25

ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ