Budget 2024: ಪಿಎಂ ಕಿಸಾನ್ ಸ್ಕೀಮ್: ಮಹಿಳಾ ಫಲಾನುಭವಿಗಳಿಗೆ ಹಣ ಡಬಲ್; ಬಜೆಟ್​ನಲ್ಲಿ ಘೋಷಣೆ ಸಾಧ್ಯತೆ

PM Kisan Scheme Update In Budget: ಈ ಬಾರಿಯ ಮಧ್ಯಂತರ ಬಜೆಟ್​ನಲ್ಲಿ ಪಿಎಂ ಕಿಸಾನ್ ಯೋಜನೆಯ ಮಹಿಳಾ ಫಲಾನುಭವಿಗಳಿಗೆ ಹಣದ ನೆರವನ್ನು ದ್ವಿಗುಣಗೊಳಿಸುವ ಸಾಧ್ಯತೆ ಇದೆ. ಫೆಬ್ರುವರಿ 1ರಂದು ಬಜೆಟ್ ಮಂಡನೆಯಾಗಲಿದ್ದು, ಜನವರಿ 31ರಿಂದ ಫೆಬ್ರುವರಿ 9ರವರೆಗೆ ಬಜೆಟ್ ಅಧಿವೇಶನ ನಡೆಯಲಿದೆ. ಜನವರಿ 31ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್​ನಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

Budget 2024: ಪಿಎಂ ಕಿಸಾನ್ ಸ್ಕೀಮ್: ಮಹಿಳಾ ಫಲಾನುಭವಿಗಳಿಗೆ ಹಣ ಡಬಲ್; ಬಜೆಟ್​ನಲ್ಲಿ ಘೋಷಣೆ ಸಾಧ್ಯತೆ
ಕೃಷಿಕ ಮಹಿಳೆ
Follow us
|

Updated on:Jan 11, 2024 | 2:45 PM

ನವದೆಹಲಿ, ಜನವರಿ 11: ಈ ಬಾರಿಯ ಮಧ್ಯಂತರ ಬಜೆಟ್​ನಲ್ಲಿ ಮಹತ್ವದ ಘೋಷಣೆಗಳ ಸಾಧ್ಯತೆ ಬಹಳ ಕಡಿಮೆ. ಆದರೆ, ಕೃಷಿಕ ಮಹಿಳೆಯರಿಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ಧನ ಸಹಾಯ ದ್ವಿಗುಣಗೊಳ್ಳಬಹುದು ಎನ್ನಲಾಗುತ್ತಿದೆ. ಫೆಬ್ರುವರಿ 1ರ ಬಜೆಟ್​ನಲ್ಲಿ ಈ ಬಗ್ಗೆ ಮಹತ್ವದ ನಿರ್ಧಾರ ಬರಬಹುದು ಎಂದು ವರದಿಗಳು ಹೇಳುತ್ತಿವೆ.

ಪಿಎಂ ಕಿಸಾನ್ ಯೋಜನೆಯಲ್ಲಿ ಈಗ ವರ್ಷಕ್ಕೆ 6,000 ರೂ ರೂ ನೀಡಲಾಗುತ್ತಿದೆ. ಮಹಿಳಾ ಕೃಷಿಕರಿಗೆ ಇದು 12,000 ರೂಗೆ ಹೆಚ್ಚಾಗಬಹುದು. ಅಂದರೆ, ಜಮೀನು ಮಾಲಕತ್ವ ಹೊಂದಿರುವ ಮಹಿಳೆಯರಿಗೆ ಹೆಚ್ಚಿನ ಧನಸಹಾಯ ಸಿಗಬಹುದು. ಇದು ಬಿಟ್ಟರೆ ಬೇರೆ ಮಧ್ಯಂತರ ಬಜೆಟ್​ನಲ್ಲಿ ಪ್ರಮುಖ ನಿರ್ಧಾರ ಬರುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.

ಇದನ್ನೂ ಓದಿ: ಫೆಬ್ರುವರಿ 1ರ ಬಜೆಟ್: ರಫ್ತು ಸುಂಕ, ರೈಲ್ವೆ, ಕೃಷಿ ವಿಚಾರದಲ್ಲಿ ಸಂಭವನೀಯ ಘೋಷಣೆಗಳೇನು? ಇಲ್ಲಿದೆ ಡೀಟೇಲ್ಸ್

ಹಿಂದೆ ಕೆಲ ವರದಿಗಳ ಪ್ರಕಾರ ಪಿಎಂ ಕಿಸಾನ್ ಯೋಜನೆಯಲ್ಲಿ ಹಣದ ಮೊತ್ತವನ್ನು ಸರ್ಕಾರ ಹೆಚ್ಚಿಸಲು ಯೋಜಿಸಿದೆ ಎಂದು ಹೇಳಲಾಗಿತ್ತು. 6,000 ರೂ ಇರುವ ಧನಸಹಾಯದ ಮೊತ್ತವನ್ನು 8,000 ರೂಗೆ ಹೆಚ್ಚಿಸಬಹುದು ಎನ್ನಲಾಗಿತ್ತು. ಸರ್ಕಾರ ಈ ಯೋಜನೆಯ ಸರ್ವ ಫಲಾನುಭವಿಗಳಿಗೂ ನೆರವು ಹೆಚ್ಚಿಸುತ್ತದಾ? ಅಥವಾ ಮಹಿಳಾ ಕೃಷಿಕರನ್ನು ಮಾತ್ರವೇ ಗುರಿ ಮಾಡಿ ಸಹಾಯ ನೀಡುತ್ತದಾ ಸ್ಪಷ್ಟವಾಗಿಲ್ಲ.

ಜನವರಿ 31ರಿಂದ ಫೆಬ್ರುವರಿ 9ರವರೆಗೆ ಬಜೆಟ್ ಅಧಿವೇಶನ

ಬಜೆಟ್ ಮಂಡನೆಗೆ ಒಂದು ದಿನ ಮುಂಚೆ, ಅಂದರೆ, ಜನವರಿ 31ರಂದ ಬಜೆಟ್ ಅಧಿವೇಶನ ಆರಂಭವಾಗುತ್ತದೆ. ಅಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್​ನಲ್ಲಿ ಜಂಟಿ ಅಧಿವೇಶನ (Joint session) ಉದ್ದೇಶಿಸಿ ಭಾಷಣ ಮಾಡುತ್ತಾರೆ. ಅದಾದ ಮರುದಿನ, ಫೆಬ್ರುವರಿ 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ ಬಜೆಟ್ ಮಂಡನೆ ನಡೆಯಲಿದೆ.

ಇದನ್ನೂ ಓದಿ: Union Budget: ಮುಂಬರುವ ಮಧ್ಯಂತರ ಬಜೆಟ್​ನಲ್ಲಿ ಟ್ಯಾಕ್ಸ್ ರಿಬೇಟ್ 7.5 ಲಕ್ಷ ರೂಗೆ ಹೆಚ್ಚಿಸುವ ಸಾಧ್ಯತೆ ಇಲ್ಲ: ವರದಿ

ಇಂಡಿಯಾ ಟುಡೇ ವರದಿ ಪ್ರಕಾರ, ಬಜೆಟ್ ಅಧಿವೇಶನ ಫೆಬ್ರುವರಿ 9ರವರೆಗೆ ನಡೆಯಲಿದೆ. ಜನವರಿ 31ರಂದು ಆರಂಭವಾಗಿ 11 ದಿನಗಳ ಅವಧಿಯವರೆಗೆ ಅಧಿವೇಶನ ನಡೆಯುವ ಸಾಧ್ಯತೆ ಇದೆ.

ಇನ್ನಷ್ಟು ಬಜೆಟ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:56 pm, Thu, 11 January 24

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ