AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆ. 1ಕ್ಕೆ ಮಧ್ಯಂತರ ಬಜೆಟ್ ಮಂಡನೆ; ಜನವರಿ 31ರಿಂದ ಫೆಬ್ರುವರಿ 9ರವರೆಗೆ ಬಜೆಟ್ ಅಧಿವೇಶನ: ವರದಿ

Interim Budget 2024: ಈ ಬಾರಿಯ ಮಧ್ಯಂತರ ಬಜೆಟ್​ಗೆ ಜನವರಿ 31ರಿಂದ ಫೆಬ್ರುವರಿ 9ವರೆಗೆ ಅಧಿವೇಶನ ನಡೆಯಲಿದೆ. ಫೆಬ್ರುವರಿ 1ರಂದು ಬಜೆಟ್ ಮಂಡನೆ ಆಗಲಿದೆ. ನಿರ್ಮಲಾ ಸೀತಾರಾಮನ್ ಅವರು ಐದನೇ ಬಾರಿ ಬಜೆಟ್ ಮಂಡನೆ ಮಾಡುವ ಸಾಧ್ಯತೆ ಇದೆ. ಬಜೆಟ್​ಗೆ ಮುಂಚೆ ಆರ್ಥಿಕ ಸಮೀಕ್ಷೆ ಬದಲು ಭಾರತದ ಆರ್ಥಿಕ ಸ್ಥಿತಿಗತಿ ಕುರಿತ ಸಂಕ್ಷಿಪ್ತ ವರದಿ ಪ್ರಸ್ತುಪಡಿಸುವ ನಿರೀಕ್ಷೆ ಇದೆ.

ಫೆ. 1ಕ್ಕೆ ಮಧ್ಯಂತರ ಬಜೆಟ್ ಮಂಡನೆ; ಜನವರಿ 31ರಿಂದ ಫೆಬ್ರುವರಿ 9ರವರೆಗೆ ಬಜೆಟ್ ಅಧಿವೇಶನ: ವರದಿ
ನಿರ್ಮಲಾ ಸೀತಾರಾಮನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 11, 2024 | 3:04 PM

Share

ನವದೆಹಲಿ, ಜನವರಿ 11: ನರೇಂದ್ರ ಮೋದಿ ನೇತೃತ್ವದ ಎನ್​ಡಿಎ-2 ಸರ್ಕಾರದ ಕೊನೆಯ ಬಜೆಟ್ ಫೆಬ್ರುವರಿ 1ರಂದು (Interim Budget) ಮಂಡನೆಯಾಗಲಿದೆ. ಬಜೆಟ್ ಮಂಡನೆಗೆ ಒಂದು ದಿನ ಮುಂಚೆ, ಅಂದರೆ, ಜನವರಿ 31ರಂದ ಬಜೆಟ್ ಅಧಿವೇಶನ ಆರಂಭವಾಗುತ್ತದೆ. ಅಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್​ನಲ್ಲಿ ಜಂಟಿ ಅಧಿವೇಶನ (Joint session) ಉದ್ದೇಶಿಸಿ ಭಾಷಣ ಮಾಡುತ್ತಾರೆ. ಅದಾದ ಮರುದಿನ, ಫೆಬ್ರುವರಿ 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ ಬಜೆಟ್ ಮಂಡನೆ ನಡೆಯಲಿದೆ.

ಇಂಡಿಯಾ ಟುಡೇ ವರದಿ ಪ್ರಕಾರ, ಬಜೆಟ್ ಅಧಿವೇಶನ ಫೆಬ್ರುವರಿ 9ರವರೆಗೆ ನಡೆಯಲಿದೆ. ಜನವರಿ 31ರಂದು ಆರಂಭವಾಗಿ 11 ದಿನಗಳ ಅವಧಿಯವರೆಗೆ ಅಧಿವೇಶನ ನಡೆಯುವ ಸಾಧ್ಯತೆ ಇದೆ. ಈ ಬಜೆಟ್​ನಲ್ಲಿ ದೊಡ್ಡ ಮಟ್ಟದ ಘೋಷಣೆಗಳು ಬರದೇ ಹೋದರೂ ಒಂದಷ್ಟು ಮಹತ್ವದ ನಿರ್ಧಾರಗಳನ್ನು ಘೋಷಿಸಬಹುದು ಎನ್ನಲಾಗಿದೆ.

ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆಗಳು ಇರುವುದರಿಂದ ಅದಕ್ಕೆ ಮುಂಚಿನ ಬಜೆಟ್ ಮಧ್ಯಂತರ ಬಜೆಟ್ ಆಗಿರುತ್ತದೆ. ಚುನಾವಣೆ ಬಳಿಕ ಹೊಸ ಸರ್ಕಾರ ಬಂದು ಜುಲೈ ತಿಂಗಳಲ್ಲಿ ಪೂರ್ಣಪ್ರಮಾಣದ ಬಜೆಟ್ ಮಂಡನೆ ಆಗಬಹುದು. ಅಲ್ಲಿಯವರೆಗೆ ಸರ್ಕಾರದ ಅಗತ್ಯ ವೆಚ್ಚಗಳಿಗೆ ಸಮ್ಮತಿ ನೀಡಲು ಮತ್ತು ಆರ್ಥಿಕತೆಗೆ ಬೇಕಾದ ಹಣ ವಿನಿಯೋಗ ಸರಾಗವಾಗಿ ನಡೆಯಲು ಮಧ್ಯಂತರ ಬಜೆಟ್ ಮತ್ತು ವೋಟ್ ಆನ್ ಅಕೌಂಟ್ ಇರುತ್ತದೆ.

ಇದನ್ನೂ ಓದಿ: Budget 2024: ಪಿಎಂ ಕಿಸಾನ್ ಸ್ಕೀಮ್: ಮಹಿಳಾ ಫಲಾನುಭವಿಗಳಿಗೆ ಹಣ ಡಬಲ್; ಬಜೆಟ್​ನಲ್ಲಿ ಘೋಷಣೆ ಸಾಧ್ಯತೆ

ಮಧ್ಯಂತರ ಬಜೆಟ್​ನಲ್ಲಿ ದೊಡ್ಡ ಯೋಜನೆಗಳ ಘೋಷಣೆ ಮಾಡುವಂತಿಲ್ಲ. ಚುನಾವಣೆಯಲ್ಲಿ ಜನರನ್ನು ಉದ್ದೇಶಪೂರ್ವಕವಾಗಿ ಪ್ರಭಾವಿತಗೊಳಿಸುವುದನ್ನು ತಪ್ಪಿಸಲು ಈ ನಿರ್ಬಂಧ ಹಾಕಲಾಗಿದೆ. ಹಾಗೆಯೇ, ಆರ್ಥಿಕ ಸಮೀಕ್ಷೆಯನ್ನೂ ಇಂಟರೆಮ್ ಬಜೆಟ್​ನಲ್ಲಿ ಪ್ರಸ್ತುಪಡಿಸುವಂತಿಲ್ಲ. ಆದಾಗ್ಯೂ ಸಮಗ್ರ ಆರ್ಥಿಕ ಸಮೀಕ್ಷೆ ಬದಲು 2024-25ರ ವರ್ಷಕ್ಕೆ ಭಾರತೀಯ ಆರ್ಥಿಕತೆಯ ಸ್ಥಿತಿಗತಿ ಕುರಿತ ಮಾಹಿತಿಪತ್ರವನ್ನು ಪ್ರಸ್ತುಪಡಿಸುವ ಸಾಧ್ಯತೆ ಇದೆ. ಇದ ಬಜೆಟ್ ಮಂಡನೆಗೆ ಮುನ್ನ ನಡೆಯಬಹುದು.

ಇನ್ನಷ್ಟು ಬಜೆಟ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ