Agriculture, Horticulture Budget 2023: ಸಿದ್ಧರಾಮಯ್ಯ ಬಜೆಟ್​ನಲ್ಲಿ ರೈತರ ಜೀವಾಳ ಕೃಷಿ ಮತ್ತು ತೋಟಗಾರಿಕೆಗೆ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ

ಕೃಷಿ ಮತ್ತು ತೋಟಗಾರಿಕೆ ಬಜೆಟ್​: ಸಿಎಂ ಸಿದ್ಧರಾಮಯ್ಯ ಅವರು ವಿಧಾನಸಭೆಯಲ್ಲಿ ಇಂದು ದಾಖಲೆಯ 14ನೇ ಬಜೆಟ್​ನ್ನು ಮಂಡಿಸಿದ್ದಾರೆ. ಹಾಗಾದರೆ ಈ ಬಜೆಟ್​ನಲ್ಲಿ ಕೃಷಿ ಮತ್ತು ತೋಟಗಾರಿಕೆ ಹೆಚ್ಚಿನ ಒತ್ತು ನೀಡಿದ್ದಾರೆ. ಈ ಕುರಿತಾದ ಪ್ರಮುಖ ಘೋಷಣೆಗಳು ಹೀಗಿವೆ.

Agriculture, Horticulture Budget 2023: ಸಿದ್ಧರಾಮಯ್ಯ ಬಜೆಟ್​ನಲ್ಲಿ ರೈತರ ಜೀವಾಳ ಕೃಷಿ ಮತ್ತು ತೋಟಗಾರಿಕೆಗೆ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ
ಸಿಎಂ ಸಿದ್ಧರಾಮಯ್ಯ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Jul 07, 2023 | 3:45 PM

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರು ವಿಧಾನಸಭೆಯಲ್ಲಿ ಇಂದು ದಾಖಲೆಯ 14ನೇ ಬಜೆಟ್ (Karnataka Budget 2023) ​ನ್ನು ಮಂಡಿಸಿದ್ದಾರೆ. ಎತ್ತೆಮ್ಮೆ ಹೂಡುವುದು, ಉತ್ತೊಮ್ಮೆ ಹರಗುವುದು. ಬಿತ್ತೊಮ್ಮೆ ಹರಗಿ, ಕಳೆತೆಗೆದರಾ ಬೆಳೆಯು, ಎತ್ತುಗೈಯುದ್ದ ಸರ್ವಜ್ಞ ವಚನ ಹೇಳಿದ ಸಿಎಂ ಸಿದ್ಧರಾಮಯ್ಯ 2023-24ರ ಬಜೆಟ್​ನಲ್ಲಿ ಕೃಷಿ ಮತ್ತು ತೋಟಗಾರಿಕೆ ಇಲಾಖೆಗೆ ಒಟ್ಟು 5,743.68 ಕೋಟಿ ರೂ. ಮೀಸಲಿಡುವ ಮೂಲಕ ಹೆಚ್ಚಿನ ಒತ್ತು ನೀಡಿದ್ದಾರೆ. ಈ ಕುರಿತಾದ ಪ್ರಮುಖ ಘೋಷಣೆಗಳು ಹೀಗಿವೆ.

ನಮ್ಮ ಸರ್ಕಾರ ಹಿಂದೆ ಜಾರಿಗೊಳಿಸಿದ್ದ ಕೃಷಿ ಭಾಗ್ಯ ಯೋಜನೆಯು ಅತ್ಯಂತ ಜನಪ್ರಿಯ ಹಾಗೂ ಉಪಯುಕ್ತವಾಗಿತ್ತು. ಈ ಯೋಜನೆಯನ್ನು ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯೊಂದಿಗೆ ಸಂಯೋಜಿಸಿ 100 ಕೋಟಿ ರೂ. ವೆಚ್ಚದಲ್ಲಿ ಮರು ಜಾರಿಗೊಳಿಸುವುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದರು.

ಇದನ್ನೂ ಓದಿ: Karnataka Budget 2023: ಸಿದ್ದರಾಮಯ್ಯ ಬಜೆಟ್​​ನಲ್ಲಿ ಯಾವುದಕ್ಕೆಲ್ಲ ತೆರಿಗೆ ಹೆಚ್ಚಳ? ಇಲ್ಲಿದೆ ವಿವರ

  • ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಕೃಷಿ ಮಾರುಕಟ್ಟೆಗೆ ಸಂಬಂಧಿಸಿದ ವಲಯಗಳಲ್ಲಿ ನಾವೀನ್ಯತೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು ʻನವೋದ್ಯಮʼ ಎಂಬ ಹೊಸ ಯೋಜನೆಯಡಿ 10 ಕೋಟಿ ರೂ. ಒದಗಿಸಲಾಗುವುದು.
  • ರೈತರು ಬೆಳೆದ ಉತ್ಪನ್ನಗಳನ್ನು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅನುಕೂಲವಾಗುವಂತೆ ʻನಂದಿನಿʼ ಮಾದರಿಯಲ್ಲಿ ರೈತ ಉತ್ಪನ್ನಗಳಿಗೆ ಏಕೀಕೃತ ಬ್ರಾಂಡಿಂಗ್‌ ವ್ಯವಸ್ಥೆ ರೂಪಿಸಲು 10 ಕೋಟಿ ರೂ. ಒದಗಿಸುವುದು.
  • ರೈತ ಉತ್ಪಾದಕ ಸಂಸ್ಥೆಗಳನ್ನು ಬಲಪಡಿಸಲು ಹಿಂದುಳಿದ ತಾಲ್ಲೂಕುಗಳ 100 ರೈತ ಉತ್ಪಾದಕ ಸಂಸ್ಥೆಗಳಿಗೆ ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕುಗಳು ನೀಡುವ ತಲಾ 20 ಲಕ್ಷ ರೂ. ವರೆಗಿನ ಸಾಲಕ್ಕೆ ಶೇ.4 ರ ಬಡ್ಡಿ ಸಹಾಯಧನ ಸೌಲಭ್ಯ.
  • ರೈತ ಉತ್ಪಾದಕ ಸಂಸ್ಥೆಗಳ ಉತ್ಪನ್ನಗಳನ್ನು ರಫ್ತು ಮಾಡಲು ಅನುಕೂಲವಾಗುವಂತೆ ಗೋದಾಮು, ಶೀತಲಗೃಹ ನಿರ್ಮಾಣ ಮತ್ತು ಇತರ ಮೂಲಸೌಕರ್ಯ ಸೃಜನೆಗೆ ಯೋಜನಾ ವೆಚ್ಚದ ಗರಿಷ್ಠ ಶೇ. 20ರಷ್ಟು, ಒಂದು ಕೋಟಿ ರೂ. ಮೀರದಂತೆ ಬೀಜ ಬಂಡವಾಳ (Seed Capital) ಒದಗಿಸುವುದು.
  • ರಾಜ್ಯದಲ್ಲಿ ಬೆಳೆದ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಫ್ತನ್ನು ಉತ್ತೇಜಿಸಲು ಕೆಪೆಕ್‌ ಸಂಸ್ಥೆಯ ಮೂಲಕ ರೈತ ಉತ್ಪಾದಕ ಸಂಸ್ಥೆಗಳು, ನವೋದ್ಯಮಿಗಳು (Startups) ಮತ್ತು ಕಿರು ಆಹಾರ ಸಂಸ್ಕರಣಾ ಉದ್ದಿಮೆದಾರರಿಗೆ ಬೆಂಬಲ ನೀಡಲು ಐದು ಕೋಟಿ ರೂ. ನೆರವು ನೀಡುವುದು.
  • ಕೃಷಿ ಯಾಂತ್ರೀಕರಣಕ್ಕೆ ಪ್ರೋತ್ಸಾಹ: ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಬಲಪಡಿಸಲು 100 ಹೈಟೆಕ್​​ ಹಾರ್ವೆಸ್ಟರ್​​ ಹಬ್​ ಸ್ಥಾಪನೆಗೆ 50 ಕೋಟಿ ರೂ. ಅನುದಾನ ನೀಡಲಾಗಿದೆ.

ಇದನ್ನೂ ಓದಿ: Tax Target: ಬಜೆಟ್​ಗಾಗಿ ಕರ್ನಾಟಕ ಸರ್ಕಾರ ಎಲ್ಲಿಂದ ಆದಾಯ ಸೃಷ್ಟಿಸುತ್ತದೆ? ಇಲ್ಲಿದೆ ವಿವಿಧ ಇಲಾಖೆಗಳಿಗೆ ಸರ್ಕಾರ ನೀಡಿರುವ ತೆರಿಗೆ ಗುರಿ

ತೋಟಗಾರಿಕಾ ವಲಯ

  • ರೈತರ ಆದಾಯವನ್ನು ಹೆಚ್ಚಿಸುವುದರಲ್ಲಿ ತೋಟಗಾರಿಕಾ ಬೆಳೆಗಳು ಪ್ರಮುಖ ಪಾತ್ರ ವಹಿಸುತ್ತವೆ. ತೋಟಗಾರಿಕಾ ವಲಯದಲ್ಲಿನ ರಾಜ್ಯದ ಸಾಮರ್ಥ್ಯವನ್ನು ಹೆಚ್ಚಿಸಲು ತೆಂಗು, ಅಡಿಕೆ, ದ್ರಾಕ್ಷಿ, ದಾಳಿಂಬೆ, ಮಾವು ಮತ್ತಿತರ ಹಣ್ಣು, ತರಕಾರಿ, ಹೂವುಗಳು ಸೇರಿದಂತೆ ತೋಟಗಾರಿಕಾ ಬೆಳೆಗಳ ಉತ್ಪಾದನೆ, ಸಂಸ್ಕರಣೆ, ಬ್ರಾಂಡಿಂಗ್ ಮತ್ತು ರಫ್ತಿಗೆ ಹೆಚ್ಚಿನ ಒತ್ತು ನೀಡಲಾಗುವುದು.
  • 2023-24ನೇ ಸಾಲಿನಲ್ಲಿ ಐದು ಕೋಟಿ ರೂ. ವೆಚ್ಚದಲ್ಲಿ ರೋಗ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುವುದು. ತೋಟಗಾರಿಕಾ ಉತ್ಪನ್ನಗಳ ಸಂಸ್ಕರಣೆಗಾಗಿ ಎಂಟು ಶೀತಲ ಘಟಕಗಳ ನಿರ್ಮಾಣ.
  • ಅನನ್ಯವಾದ ರುಚಿ ಮತ್ತು ಕಂಪನ್ನು ಹೊಂದಿರುವ ಚಿಕ್ಕಮಗಳೂರು, ಕೊಡಗು ಮತ್ತು ಬಾಬಾ ಬುಡನಗಿರಿಯ ಅರೇಬಿಕಾ ಕಾಫಿ ವೈವಿಧ್ಯಗಳು GI Tag ಹೊಂದಿವೆ. ರಾಜ್ಯದ ಕಾಫಿಯನ್ನು ಇನ್ನಷ್ಟು ಪ್ರಚುರಪಡಿಸಿ ಜನಪ್ರಿಯಗೊಳಿಸಲು ಮತ್ತು ಕಾಫಿ ಎಕೋ ಟೂರಿಸಂ ಅನ್ನು ಉತ್ತೇಜಿಸಲು ಕರ್ನಾಟಕದ ಕಾಫಿಗೆ ಬ್ರಾಂಡಿಂಗ್‌ ಮಾಡಲು ಕ್ರಮ ವಹಿಸಲಾಗುವುದು.
  • ವಿಶೇಷ ಕಂಪು, ರುಚಿ ಮತ್ತು ಸೊಗಡಿನಿಂದ ಜನಮನದಲ್ಲಿ ನೆಲೆಸಿರುವ ಮೈಸೂರು ಮಲ್ಲಿಗೆ, ನಂಜನಗೂಡು ರಸಬಾಳೆ ಹಾಗೂ ಮೈಸೂರು ವೀಳ್ಯದೆಲೆಗಳು GI Tag ಗಳನ್ನು ಪಡೆದಿವೆ. ಇವುಗಳ ಉತ್ಪಾದನೆ, ಸಂಶೋಧನೆ, ಮಾರುಕಟ್ಟೆ ಮತ್ತು ಬ್ರಾಂಡಿಂಗ್‌ ಉತ್ತೇಜಿಸಲು ನೂತನ ಕಾರ್ಯಕ್ರಮವನ್ನು ರೂಪಿಸಲಾಗುವುದು.
  • ವಾಣಿಜ್ಯ ಹೂವಿನ ರಫ್ತಿನಲ್ಲಿ ಕರ್ನಾಟಕ ಅಗ್ರಸ್ಥಾನ ಹೊಂದುವ ಸಾಮರ್ಥ್ಯ ಹೊಂದಿದ್ದು, ಇವುಗಳ ತಳಿಗಳ ಕೊರತೆ ನಿವಾರಿಸಲು ಅಂತಹ ತಳಿಗಳನ್ನು ಆಮದು ಮಾಡಿಕೊಂಡು ರೈತರಿಗೆ ಕೈಗೆಟಕುವ ದರದಲ್ಲಿ ಒದಗಿಸಲು ಕ್ರಮವಹಿಸಲಾಗುವುದು.
  • ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತೋಟಗಾರಿಕಾ ಕ್ಷೇತ್ರದ ಪ್ರಾಯೋಗಿಕ ಅರಿವು ಮೂಡಿಸಲು ʻವಿದ್ಯಾರ್ಥಿಗಳಿಗಾಗಿ ತೋಟಗಾರಿಕೆʼ ಯೋಜನೆಯನ್ನು ಜಾರಿಗೊಳಿಸಲಾಗುವುದು.

ಇನ್ನಷ್ಟು ಕರ್ನಾಟಕ ಬಜೆಟ್ 2023 ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Published On - 3:20 pm, Fri, 7 July 23

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು