AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2023: ರಾಜ್ಯ ಬಜೆಟ್​ನಲ್ಲಿ ಅಲ್ಪಸಂಖ್ಯಾತರಿಗೆ ಭರ್ಜರಿ ಉಡುಗೊರೆ, 29 ಕಡೆ ಎ.ಪಿ.ಜೆ ಕಲಾಂ ವಸತಿ ಶಾಲೆ

ರಾಜ್ಯದ 29 ಸ್ಥಳಗಳಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗಾಗಿ 6 ರಿಂದ 12ನೇ ತರಗತಿಯವರೆಗೆ ಸಿ.ಬಿ.ಎಸ್.ಇ. ಪಠ್ಯಕ್ರಮದೊಂದಿಗೆ ಎ.ಪಿ.ಜೆ ಕಲಾಂ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ.

Karnataka Budget 2023: ರಾಜ್ಯ ಬಜೆಟ್​ನಲ್ಲಿ ಅಲ್ಪಸಂಖ್ಯಾತರಿಗೆ ಭರ್ಜರಿ ಉಡುಗೊರೆ, 29 ಕಡೆ ಎ.ಪಿ.ಜೆ ಕಲಾಂ ವಸತಿ ಶಾಲೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Feb 17, 2023 | 2:54 PM

Share

ಬೆಂಗಳೂರು: ಬಸವರಾಜ ಬೊಮ್ಮಾಯಿ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಳಿಕ 2ನೇ ಬಾರಿಗೆ ಬಜೆಟ್ ಮಂಡನೆ ಮಾಡಿದ್ದಾರೆ. ಚುನಾವಣೆ ಹೊತ್ತಲ್ಲಿ ಸಿಎಂ ಬೊಮ್ಮಾಯಿ ತಮ್ಮ ಬಜೆಟ್​ನಲ್ಲಿ ಭರಪೂರ ಕೊಡುಗೆ ನೀಡಿದ್ದಾರೆ. ಈ ಬಾರಿ ಬರೋಬ್ಬರಿ 3.9 ಲಕ್ಷ ಕೋಟಿ ಗಾತ್ರದ ಬಜೆಟ್​ ಮಂಡನೆ ಮಾಡಿದ್ದು ಅಲ್ಪಸಂಖ್ಯಾತರಿಗೆ ಭರ್ಜರಿ ಉಡುಗೊರೆ ನೀಡಿದ್ದಾರೆ.

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಬೊಮ್ಮಾಯಿ ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ

  1. ರಾಜ್ಯದ 29 ಸ್ಥಳಗಳಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗಾಗಿ 6 ರಿಂದ 12ನೇ ತರಗತಿಯವರೆಗೆ ಸಿ.ಬಿ.ಎಸ್.ಇ. ಪಠ್ಯಕ್ರಮದೊಂದಿಗೆ ಎ.ಪಿ.ಜೆ ಕಲಾಂ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ. ಸದರಿ ಶಾಲೆಗಳನ್ನು 25 ಕೋಟಿ ರೂ. ಗಳ ವೆಚ್ಚದಲ್ಲಿ ನಿರ್ವಹಣೆಯನ್ನು ಮಾಡಲಾಗುತ್ತಿದೆ.
  2. ಪ್ರಸಕ್ತ ಸಾಲಿನಲ್ಲಿ 96 ಕೋಟಿ ರೂ. ಅನುದಾನದಲ್ಲಿ ಅಲ್ಪಸಂಖ್ಯಾತರ ಇಲಾಖೆ ವ್ಯಾಪ್ತಿಯ 31 ವಸತಿ ಶಾಲೆಗಳು, ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಕಟ್ಟಡಗಳನ್ನು ನಿರ್ಮಿಸಲಾಗಿದ್ದು, ಇದರಿಂದ ಸುಮಾರು 7,800 ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.
  3. “ಅಲ್ಪಸಂಖ್ಯಾತರ ನಿರ್ದೇಶನಾಲಯದಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಆತ್ಮ ರಕ್ಷಣೆ ತರಬೇತಿಯನ್ನು ನೀಡಲು 2 ಕೋಟಿ ರೂ ಒದಗಿಸಲಾಗುವುದು.
  4. ಅಲ್ಪಸಂಖ್ಯಾತರ ಪದವೀಧರ ಮಹಿಳೆಯರು ಉತ್ತಮ ಉದ್ಯೋಗಾವಕಾಶ ಪಡೆಯಲು ಹಾಗೂ ಸ್ವಂತ ಉದ್ದಿಮೆ ಪ್ರಾರಂಭಿಸಲು ಪ್ರತಿಷ್ಠಿತ ಸಂಸ್ಥೆಯಾದ ಐ.ಐ.ಎಂ.ಬಿ. (IIMB) ಬೆಂಗಳೂರಿನಲ್ಲಿ 300 ಅಭ್ಯರ್ಥಿಗಳಿಗೆ ಉದ್ಯಮಶೀಲತಾ ತರಬೇತಿಯನ್ನು 3 ಕೋಟಿ ರೂ. ವೆಚ್ಚದಲ್ಲಿ ನೀಡಲಾಗುವುದು.
  5. ರಾಜ್ಯದಲ್ಲಿ 40,000 ಕ್ಕಿಂತಲೂ ಹೆಚ್ಚು ವಕ್ಫ್ಆಸ್ತಿಗಳಿದ್ದು, ಇವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ 2023-24 ನೇ ಸಾಲಿನಲ್ಲಿ 10 ಕೋಟಿ ರೂ. ಮತ್ತು ಖಬರಸ್ತಾನ್‌ಗಳ ಅಭಿವೃದ್ಧಿಗಾಗಿ 10 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು.
  6. ಅಲ್ಪಸಂಖ್ಯಾತರಲ್ಲಿ ಅತೀ ಹಿಂದುಳಿದ ಪಿಂಜಾರ, ದರ್ವೇಸು ಮತ್ತು ನದಾಫ್ ಸಮುದಾಯಗಳ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಎಲ್ಲಾ ಯೋಜನೆಗಳಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುವುದು.
  7. ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ ಕಳೆದ ಆಯವ್ಯಯದಲ್ಲಿ 60 ಕೋಟಿ ರೂ. ಒದಗಿಸಲಾಗಿದ್ದು, ಪ್ರಸಕ್ತ ಆಯವ್ಯಯದಲ್ಲಿ ಈ ಮೊತ್ತವನ್ನು ಹೆಚ್ಚಿಸಿ 110 ಕೋಟಿ ರೂ. ಒದಗಿದಲಾಗುವುದು.

Published On - 2:54 pm, Fri, 17 February 23

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ