AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಮುಂಗಡಪತ್ರ 2023: ಬೊಮ್ಮಾಯಿ ಬಜೆಟ್​ನಲ್ಲಿ ಕ್ರೀಡಾ ವಲಯಕ್ಕೆ ಸಿಕ್ಕಿದ್ದೇನು? ಇಲ್ಲಿದೆ ವಿವರ

Karnataka Budget 2023: ಗ್ರಾಮೀಣ ಮತ್ತು ಸಾಂಪ್ರದಾಯಿಕ ಕ್ರೀಡೆಗಳಾದ ಖೋ-ಖೋ, ಕುಸ್ತಿ, ಕಬಡ್ಡಿ, ಕಂಬಳ, ಎತ್ತಿನಗಾಡಿ ಓಟ ಮುಂತಾದವುಗಳನ್ನು ಇಂದಿನ ಮಕ್ಕಳಿಗೆ ಪರಿಚಯಿಸುವ ನಿಟ್ಟಿನಲ್ಲಿಯೂ ಬೊಮ್ಮಾಯಿ ಹೆಜ್ಜೆ ಇಟ್ಟಿದ್ದಾರೆ.

ಕರ್ನಾಟಕ ಮುಂಗಡಪತ್ರ 2023: ಬೊಮ್ಮಾಯಿ ಬಜೆಟ್​ನಲ್ಲಿ ಕ್ರೀಡಾ ವಲಯಕ್ಕೆ ಸಿಕ್ಕಿದ್ದೇನು? ಇಲ್ಲಿದೆ ವಿವರ
ಕರ್ನಾಟಕ ಬಜೆಟ್
ಪೃಥ್ವಿಶಂಕರ
| Updated By: Digi Tech Desk|

Updated on:Feb 17, 2023 | 2:51 PM

Share

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಈ ಸರ್ಕಾರದ ಕೊನೆಯ ಬಜೆಟ್ (Budget) ಮಂಡಿಸುತ್ತಿದ್ದಾರೆ. ಬೊಮ್ಮಾಯಿ ಅವರು ಮಂಡನೆ ಮಾಡುತ್ತಿರುವ ಎರಡನೇ ಬಜೆಟ್ ಆಗಿದೆ. 3.09 ಲಕ್ಷ ಕೋಟಿ ಗಾತ್ರದ ಬಜೆಟ್ ಇದಾಗಿದ್ದು, ವಿವಿದ ಕ್ಷೇತ್ರಗಳಿಗೆ ಬರಪೂರ ಅನುದಾನ ನೀಡಲಾಗಿದೆ. ಇದರಲ್ಲಿ ಕ್ರೀಡಾ ವಲಯವೂ ಸೇರಿದ್ದು, ರಾಜ್ಯದ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಮುಖ್ಯಮಂತ್ರಿಗಳು ನಾನಾ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಇದರೊಂದಿಗೆ ಗ್ರಾಮೀಣ ಮತ್ತು ಸಾಂಪ್ರದಾಯಿಕ ಕ್ರೀಡೆಗಳಾದ ಖೋ-ಖೋ, ಕುಸ್ತಿ, ಕಬಡ್ಡಿ, ಕಂಬಳ, ಎತ್ತಿನಗಾಡಿ ಓಟ ಮುಂತಾದವುಗಳನ್ನು ಇಂದಿನ ಮಕ್ಕಳಿಗೆ ಪರಿಚಯಿಸುವ ನಿಟ್ಟಿನಲ್ಲಿಯೂ ಬೊಮ್ಮಾಯಿ ಹೆಜ್ಜೆ ಇಟ್ಟಿದ್ದಾರೆ. ಹಾಗಿದ್ದರೆ ಬೊಮ್ಮಾಯಿ ಮಂಡಿಸಿದ ಬಜೆಟ್​ನಲ್ಲಿ ಕ್ರೀಡಾ ವಿಭಾಗಕ್ಕೆ ಸಿಕ್ಕಿದ್ದೇನು ಎಂಬುದರ ಪೂರ್ಣ ವಿವರ ಇಲ್ಲಿದೆ.

  1. ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣ, ಮಂಡ್ಯ ಮತ್ತು ಉಡುಪಿ ಜಿಲ್ಲಾ ಕ್ರೀಡಾಂಗಣಗಳಲ್ಲಿ ಸುಸಜ್ಜಿತ ಕ್ರೀಡಾ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
  2. ಮುಂದಿನ ವರ್ಷಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕ್ರೀಡಾಂಗಣಗಳ ಸಮಗ್ರ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುವುದು. ಈ ಕ್ರೀಡಾಂಗಣಗಳಲ್ಲಿ ಮಹಿಳೆಯರು ಮತ್ತು ವಿಶೇಷಚೇತನರಿಗೆ ಸೂಕ್ತ ಸೌಕರ್ಯಗಳು ಹಾಗೂ ಯುವಜನರಿಗೆ ಹೊರಾಂಗಣ ಜಿಮ್ ಸೌಲಭ್ಯಗಳನ್ನು ಒದಗಿಸಲಾಗುವುದು. ಈ ಉದ್ದೇಶಕ್ಕಾಗಿ ಪ್ರಸಕ್ತ ಸಾಲಿನಲ್ಲಿ 100 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.
  3. ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ರೂಪಿಸುವ ಅಧಿಕೃತವಾಗಿ ನೋಂದಣಿಯಾಗಿರುವ ಖಾಸಗಿ ಕ್ರೀಡಾ ಸಂಸ್ಥೆಗಳಿಗೆ 25 ಲಕ್ಷ ರೂ. ಗಳವರೆಗೆ ಪ್ರೋತ್ಸಾಹಧನವನ್ನು ನೀಡಲಾಗುವುದು.
  4. ಬಾಸ್ಕೆಟ್ ಬಾಲ್ ಮತ್ತು ವಾಲಿ ಬಾಲ್ ಕ್ರೀಡೆಗಳನ್ನು ಹೆಚ್ಚಿನ ಸಂಖ್ಯೆಯ ಮಕ್ಕಳಿಗೆ ಪರಿಚಯಿಸಲು ಹೊಸ ಅಂಕಣಗಳನ್ನು ಮತ್ತು ತರಬೇತಿ ಕೇಂದ್ರಗಳನ್ನು ನಿರ್ಮಿಸಲಾಗುವುದು.
  5. ಗ್ರಾಮೀಣ ಮತ್ತು ಸಾಂಪ್ರದಾಯಿಕ ಕ್ರೀಡೆಗಳಾದ ಖೋ-ಖೋ, ಕುಸ್ತಿ, ಕಬಡ್ಡಿ, ಕಂಬಳ, ಎತ್ತಿನಗಾಡಿ ಓಟ ಮುಂತಾದವುಗಳನ್ನು ಇಂದಿನ ಮಕ್ಕಳಿಗೆ ಪರಿಚಯಿಸಲು ಮತ್ತು ಉತ್ತೇಜಿಸಲು ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಗ್ರಾಮೀಣ ಕ್ರೀಡಾಕೂಟಗಳನ್ನು ಆಯೋಜಿಸಲಾಗುವುದು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಸಜ್ಜಿತವಾದ ಕ್ರೀಡಾ ಅಂಕಣವನ್ನು ನರೇಗಾ ಯೋಜನೆಯಡಿ 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು.
  6. ರಾಜ್ಯದ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಐದು ಯುವ ಜನರಿಗೆ ಪ್ರಸಕ್ತ ಸಾಲಿನಿಂದ ಸ್ವಾಮಿ ವಿವೇಕಾನಂದ ಯುವ ಪ್ರಶಸ್ತಿ ನೀಡಲಾಗುವುದು.
  7. ಒಲಿಂಪಿಕ್ಸ್ ಮತ್ತು ಇತರ ಅಂತರರಾಷ್ಟ್ರೀಯ ಕ್ರೀಡೆಗಳಲ್ಲಿ ಪದಕ ಪಡೆಯುವ ಉದ್ದೇಶಕ್ಕೆ ಅತ್ಯುನ್ನತ ತರಬೇತಿ ಹಾಗೂ ಸಲಕರಣೆಗಳನ್ನು ಪಡೆಯಲು ಅನುವಾಗುವಂತೆ 50 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಒಲಿಂಪಿಕ್ ಕನಸಿನ ಯೋಜನಾ ನಿಧಿ ಸ್ಥಾಪಿಸಲಾಗುವುದು. ಈ ಯೋಜನೆಯಡಿ 12 ರಿಂದ 19 ವರ್ಷ ವಯೋಮಾನದ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸಿದ ಯುವ ಪ್ರತಿಭಾವಂತ ಕ್ರೀಡಾಪಟುಗಳ ಪ್ರಾಯೋಜನೆ ಮಾಡಲಾಗುವುದು.

ಕರ್ನಾಟಕ ಬಜೆಟ್ ಲೈವ್ ಅಪ್ಡೇಟ್ಸ್

ಕರ್ನಾಟಕ ಬಜೆಟ್​ನ ಮತ್ತಷ್ಟು ಸುದ್ದಿಗಳು

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:05 pm, Fri, 17 February 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!