AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಬಜೆಟ್​: ಪ್ರತಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ, ಆರ್ಥಿಕ ಶಿಸ್ತಿನಿಂದ ಸರ್​ಪ್ಲಸ್ ಬಜೆಟ್ ಮಂಡಿಸಿದ್ದೇವೆ; ಬೊಮ್ಮಾಯಿ

ಕಳೆದ ಬಜೆಟ್​​​ನಲ್ಲಿ ಉಲ್ಲೇಖಿಸಿರುವ ಯೋಜನೆಗಳು ಅನುಷ್ಠಾನ ಆಗಿಲ್ಲ ಎಂಬ ಪ್ರತಿಪಕ್ಷಗಳ ಆರೋಪ ಸುಳ್ಳು. ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿ ಎಲ್ಲ ಅಂಕಿಅಂಶ ನೀಡಿದ್ದೇವೆ, ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಕರ್ನಾಟಕ ಬಜೆಟ್​: ಪ್ರತಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ, ಆರ್ಥಿಕ ಶಿಸ್ತಿನಿಂದ ಸರ್​ಪ್ಲಸ್ ಬಜೆಟ್ ಮಂಡಿಸಿದ್ದೇವೆ; ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಗಣಪತಿ ಶರ್ಮಾ
| Edited By: |

Updated on:Feb 17, 2023 | 2:48 PM

Share

ಬೆಂಗಳೂರು: ಸಾಲದ ಪ್ರಮಾಣವನ್ನು ಕಡಿಮೆ ಮಾಡಿ ಆರ್ಥಿಕ ಶಿಸ್ತನ್ನು ಕಾಪಾಡಿಕೊಳ್ಳುವ ಮೂಲಕ ಮಿಗತೆ (ಸರ್​ಪ್ಲಸ್) ಬಜೆಟ್ (Karnataka Budget 2023) ಮಂಡನೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು. ಬಜೆಟ್ ಮಂಡನೆ ಮಾಡಿದ ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಹಿಂದಿನ ಯಾವ ಸರ್ಕಾರವೂ ಈ ಸಾಧನೆ ಮಾಡಿಲ್ಲ. ಹಿಂದೆ ಜಾರಿಗೊಳಿಸಿದ್ದ ಅನೇಕ ಯೋಜನೆಗಳು ಅನುಷ್ಠಾನಗೊಳ್ಳುತ್ತಿದ್ದು, ಪ್ರಗತಿಯ ಹಾದಿಯಲ್ಲಿದೆ. ಕಳೆದ ಬಾರಿಯ ಬಜೆಟ್​​ನಲ್ಲಿ ಏನು ಹೇಳಿದ್ದೆವೋ ಅದೇ ರೀತಿ ವೆಚ್ಚವನ್ನು ಹೆಚ್ಚು ಮಾಡಿದ್ದೇವೆ. ಉದಾಹರಣೆಗೆ; ರೆವೆನ್ಯೂ ಎಕ್ಸ್​ಪೆಂಡಿಚರ್, ಕ್ಯಾಪಿಟಲ್ ಎಕ್ಸ್​ಪೆಂಡಿಚರ್ ಕೂಡ ಹೆಚ್ಚಾಗಿದೆ. ಯಾವ ಯೋಜನೆಯಲ್ಲಿ ಎಷ್ಟು ಖರ್ಚಾಗಿದೆ ಎಂಬ ಬಗ್ಗೆ ಮಾಹಿತಿ ನೀಡುತ್ತಿದ್ದೇವೆ ಎಂದು ಹೇಳಿದರು.

ಕಳೆದ ಬಜೆಟ್​​​ನಲ್ಲಿ ಉಲ್ಲೇಖಿಸಿರುವ ಯೋಜನೆಗಳು ಅನುಷ್ಠಾನ ಆಗಿಲ್ಲ ಎಂಬ ಪ್ರತಿಪಕ್ಷಗಳ ಆರೋಪ ಸುಳ್ಳು. ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿ ಎಲ್ಲ ಅಂಕಿಅಂಶ ನೀಡಿದ್ದೇವೆ, ನೀಡುತ್ತಿದ್ದೇವೆ. ಬಜೆಟ್ ಗಾತ್ರ 43,462 ಕೋಟಿ ರೂ.ನಷ್ಟು ಹೆಚ್ಚಾಗಿದೆ. ಇದು ಈ ವರ್ಷದ ನಮ್ಮ ಹಣಕಾಸಿನ ಬೆಳವಣಿಗೆ ದರವನ್ನು, ಬೆಳವಣಿಗೆಯನ್ನು ಸೂಚಿಸುತ್ತದೆ. ಆರ್ಥಿಕ ಕ್ಷಮತೆಯ ಮೇಲಿನ ವಿಶ್ವಾಸದೊಂದಿಗೆ ಈ ವರ್ಷ ಬಜೆಟ್​ ಗಾತ್ರ ಶೇ 16ರಷ್ಟು ಹೆಚ್ಚಳವಾಗಿದೆ. ಸಾಮಾನ್ಯವಾಗಿ ಪ್ರತಿ ವರ್ಷ ಇದು ಶೇ 6ರಿಂದ 7ರಷ್ಟು ಹೆಚ್ಚಾಗುತ್ತದೆಯಷ್ಟೆ ಎಂದು ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ: Karnataka Budget PDF Download: ಕರ್ನಾಟಕ ಬಜೆಟ್​ ಪಿಡಿಎಫ್ ಕಾಪಿ ಇಲ್ಲಿ ಲಭ್ಯ

ದೇಶದಲ್ಲಿ ಜಿಎಸ್​ಟಿ ಸಂಗ್ರಹದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ಕೃಷಿ, ಉತ್ಪಾದನೆ, ಕೈಗಾರಿಕಾ ಕ್ಷೇತ್ರದಲ್ಲಿ ನಾವು ಮುಂದೆ ಇದ್ದೇವೆ. ಕೊರೊನಾ ನಂತರ ಆರ್ಥಿಕ ಸ್ಥಿತಿ ಸುಧಾರಣೆಗೆ ಕಷ್ಟ ಎಂದು ತಜ್ಞರು ಹೇಳಿದ್ದರು. ಆರ್ಥಿಕ ಕೊರತೆ ನೀಗಲು 5 ವರ್ಷ ಬೇಕಾಗಬಹುದು ಎಂದಿದ್ದರು. ಆದರೆ, ನಾವು ಕೇವಲ ಎರಡನೇ ವರ್ಷದಲ್ಲಿ ರೆವಿನ್ಯೂ ಸರ್​​​ಪ್ಲಸ್​ ಬಜೆಟ್​ ಮಂಡಿಸಿದ್ದೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಕೃಷಿ, ಉತ್ಪಾದನೆ, ಕೈಗಾರಿಕಾ ಕ್ಷೇತ್ರದಲ್ಲಿ ನಾವು ಸಾಕಷ್ಟು ಸಾಧಿಸಿದ್ದು, ಮುಂಚೂಣಿಯಲ್ಲಿದ್ದೇವೆ. ಹಣಕಾಸಿನ ನಿರ್ವಹಣೆ ದಕ್ಷವಾಗಿದ್ದಾಗ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಕಳೆದ ಬಜೆಟ್​ನಲ್ಲಿ ಘೋಷಿಸಿದ್ದ ಶೇ 90ರಷ್ಟು ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದೆ. ಹಿಂದಿನ ಯಾವುದೇ ಸರ್ಕಾರಗಳು ಇಷ್ಟು ಯಶಸ್ವಿಯಾಗಿರಲಿಲ್ಲ. ಬಳಕೆದಾರರ ಸಂಖ್ಯೆ ಹೆಚ್ಚಾದಂತೆ ಆದಾಯವೂ ಹೆಚ್ಚಳವಾಗಲಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಕರ್ನಾಟಕ ಬಜೆಟ್ ಹೈಲೈಟ್ಸ್

ಕರ್ನಾಟಕ ಬಜೆಟ್ ಮತ್ತಷ್ಟು ಸುದ್ದಿಗಳು

Published On - 2:27 pm, Fri, 17 February 23

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್