Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಬಜೆಟ್​: ಪ್ರತಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ, ಆರ್ಥಿಕ ಶಿಸ್ತಿನಿಂದ ಸರ್​ಪ್ಲಸ್ ಬಜೆಟ್ ಮಂಡಿಸಿದ್ದೇವೆ; ಬೊಮ್ಮಾಯಿ

ಕಳೆದ ಬಜೆಟ್​​​ನಲ್ಲಿ ಉಲ್ಲೇಖಿಸಿರುವ ಯೋಜನೆಗಳು ಅನುಷ್ಠಾನ ಆಗಿಲ್ಲ ಎಂಬ ಪ್ರತಿಪಕ್ಷಗಳ ಆರೋಪ ಸುಳ್ಳು. ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿ ಎಲ್ಲ ಅಂಕಿಅಂಶ ನೀಡಿದ್ದೇವೆ, ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಕರ್ನಾಟಕ ಬಜೆಟ್​: ಪ್ರತಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ, ಆರ್ಥಿಕ ಶಿಸ್ತಿನಿಂದ ಸರ್​ಪ್ಲಸ್ ಬಜೆಟ್ ಮಂಡಿಸಿದ್ದೇವೆ; ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
Ganapathi Sharma
| Updated By: Digi Tech Desk

Updated on:Feb 17, 2023 | 2:48 PM

ಬೆಂಗಳೂರು: ಸಾಲದ ಪ್ರಮಾಣವನ್ನು ಕಡಿಮೆ ಮಾಡಿ ಆರ್ಥಿಕ ಶಿಸ್ತನ್ನು ಕಾಪಾಡಿಕೊಳ್ಳುವ ಮೂಲಕ ಮಿಗತೆ (ಸರ್​ಪ್ಲಸ್) ಬಜೆಟ್ (Karnataka Budget 2023) ಮಂಡನೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು. ಬಜೆಟ್ ಮಂಡನೆ ಮಾಡಿದ ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಹಿಂದಿನ ಯಾವ ಸರ್ಕಾರವೂ ಈ ಸಾಧನೆ ಮಾಡಿಲ್ಲ. ಹಿಂದೆ ಜಾರಿಗೊಳಿಸಿದ್ದ ಅನೇಕ ಯೋಜನೆಗಳು ಅನುಷ್ಠಾನಗೊಳ್ಳುತ್ತಿದ್ದು, ಪ್ರಗತಿಯ ಹಾದಿಯಲ್ಲಿದೆ. ಕಳೆದ ಬಾರಿಯ ಬಜೆಟ್​​ನಲ್ಲಿ ಏನು ಹೇಳಿದ್ದೆವೋ ಅದೇ ರೀತಿ ವೆಚ್ಚವನ್ನು ಹೆಚ್ಚು ಮಾಡಿದ್ದೇವೆ. ಉದಾಹರಣೆಗೆ; ರೆವೆನ್ಯೂ ಎಕ್ಸ್​ಪೆಂಡಿಚರ್, ಕ್ಯಾಪಿಟಲ್ ಎಕ್ಸ್​ಪೆಂಡಿಚರ್ ಕೂಡ ಹೆಚ್ಚಾಗಿದೆ. ಯಾವ ಯೋಜನೆಯಲ್ಲಿ ಎಷ್ಟು ಖರ್ಚಾಗಿದೆ ಎಂಬ ಬಗ್ಗೆ ಮಾಹಿತಿ ನೀಡುತ್ತಿದ್ದೇವೆ ಎಂದು ಹೇಳಿದರು.

ಕಳೆದ ಬಜೆಟ್​​​ನಲ್ಲಿ ಉಲ್ಲೇಖಿಸಿರುವ ಯೋಜನೆಗಳು ಅನುಷ್ಠಾನ ಆಗಿಲ್ಲ ಎಂಬ ಪ್ರತಿಪಕ್ಷಗಳ ಆರೋಪ ಸುಳ್ಳು. ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿ ಎಲ್ಲ ಅಂಕಿಅಂಶ ನೀಡಿದ್ದೇವೆ, ನೀಡುತ್ತಿದ್ದೇವೆ. ಬಜೆಟ್ ಗಾತ್ರ 43,462 ಕೋಟಿ ರೂ.ನಷ್ಟು ಹೆಚ್ಚಾಗಿದೆ. ಇದು ಈ ವರ್ಷದ ನಮ್ಮ ಹಣಕಾಸಿನ ಬೆಳವಣಿಗೆ ದರವನ್ನು, ಬೆಳವಣಿಗೆಯನ್ನು ಸೂಚಿಸುತ್ತದೆ. ಆರ್ಥಿಕ ಕ್ಷಮತೆಯ ಮೇಲಿನ ವಿಶ್ವಾಸದೊಂದಿಗೆ ಈ ವರ್ಷ ಬಜೆಟ್​ ಗಾತ್ರ ಶೇ 16ರಷ್ಟು ಹೆಚ್ಚಳವಾಗಿದೆ. ಸಾಮಾನ್ಯವಾಗಿ ಪ್ರತಿ ವರ್ಷ ಇದು ಶೇ 6ರಿಂದ 7ರಷ್ಟು ಹೆಚ್ಚಾಗುತ್ತದೆಯಷ್ಟೆ ಎಂದು ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ: Karnataka Budget PDF Download: ಕರ್ನಾಟಕ ಬಜೆಟ್​ ಪಿಡಿಎಫ್ ಕಾಪಿ ಇಲ್ಲಿ ಲಭ್ಯ

ದೇಶದಲ್ಲಿ ಜಿಎಸ್​ಟಿ ಸಂಗ್ರಹದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ಕೃಷಿ, ಉತ್ಪಾದನೆ, ಕೈಗಾರಿಕಾ ಕ್ಷೇತ್ರದಲ್ಲಿ ನಾವು ಮುಂದೆ ಇದ್ದೇವೆ. ಕೊರೊನಾ ನಂತರ ಆರ್ಥಿಕ ಸ್ಥಿತಿ ಸುಧಾರಣೆಗೆ ಕಷ್ಟ ಎಂದು ತಜ್ಞರು ಹೇಳಿದ್ದರು. ಆರ್ಥಿಕ ಕೊರತೆ ನೀಗಲು 5 ವರ್ಷ ಬೇಕಾಗಬಹುದು ಎಂದಿದ್ದರು. ಆದರೆ, ನಾವು ಕೇವಲ ಎರಡನೇ ವರ್ಷದಲ್ಲಿ ರೆವಿನ್ಯೂ ಸರ್​​​ಪ್ಲಸ್​ ಬಜೆಟ್​ ಮಂಡಿಸಿದ್ದೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಕೃಷಿ, ಉತ್ಪಾದನೆ, ಕೈಗಾರಿಕಾ ಕ್ಷೇತ್ರದಲ್ಲಿ ನಾವು ಸಾಕಷ್ಟು ಸಾಧಿಸಿದ್ದು, ಮುಂಚೂಣಿಯಲ್ಲಿದ್ದೇವೆ. ಹಣಕಾಸಿನ ನಿರ್ವಹಣೆ ದಕ್ಷವಾಗಿದ್ದಾಗ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಕಳೆದ ಬಜೆಟ್​ನಲ್ಲಿ ಘೋಷಿಸಿದ್ದ ಶೇ 90ರಷ್ಟು ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದೆ. ಹಿಂದಿನ ಯಾವುದೇ ಸರ್ಕಾರಗಳು ಇಷ್ಟು ಯಶಸ್ವಿಯಾಗಿರಲಿಲ್ಲ. ಬಳಕೆದಾರರ ಸಂಖ್ಯೆ ಹೆಚ್ಚಾದಂತೆ ಆದಾಯವೂ ಹೆಚ್ಚಳವಾಗಲಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಕರ್ನಾಟಕ ಬಜೆಟ್ ಹೈಲೈಟ್ಸ್

ಕರ್ನಾಟಕ ಬಜೆಟ್ ಮತ್ತಷ್ಟು ಸುದ್ದಿಗಳು

Published On - 2:27 pm, Fri, 17 February 23

ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್