AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget: ರೆವೆನ್ಯೂ ಸರ್ಪ್ಲಸ್ ಬಜೆಟ್ ಎಂದ ಬೊಮ್ಮಾಯಿ; ರಾಜ್ಯದ ಆರ್ಥಿಕ ಪರಿಸ್ಥಿತಿ ಹೇಗಿದೆ?

Karnataka Economy, Budget 2023: ರಾಜ್ಯ ಸರ್ಕಾರ ರಾಜಸ್ವ ಹೆಚ್ಚಳದ ಅಯವ್ಯಯ ಮಂಡನೆ ಮಾಡುತ್ತಿರುವುದು ಹೆಮ್ಮೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ. ಅವರ ಪ್ರಕಾರ ರಾಜ್ಯದಲ್ಲಿ ರೆವೆನ್ಯೂ ಸಂಗ್ರಹ ಗಮನಾರ್ಹವಾಗಿ ಹೆಚ್ಚಾಗಿದೆ. ಅದರ ವಿವರ ಇಲ್ಲಿದೆ.

Karnataka Budget: ರೆವೆನ್ಯೂ ಸರ್ಪ್ಲಸ್ ಬಜೆಟ್ ಎಂದ ಬೊಮ್ಮಾಯಿ; ರಾಜ್ಯದ ಆರ್ಥಿಕ ಪರಿಸ್ಥಿತಿ ಹೇಗಿದೆ?
ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Feb 17, 2023 | 12:27 PM

Share

ಬೆಂಗಳೂರು: ರಾಜ್ಯದ ಆರ್ಥಿಕ ಪರಿಸ್ಥಿತಿ ಸದೃಢವಾಗಿದೆ. ರಾಜಸ್ವ ಸಂಗ್ರಹಣೆ (Revenue Collection) ಹೆಚ್ಚಾಳವಾಗಿದೆ. ಜಿಎಸ್​ಟಿ ಹೆಚ್ಚಾಗಿದೆ. ರಾಜ್ಯ ಸರ್ಕಾರ ಈ ಬಾರಿ ರೆವೆನ್ಯೂ ಸರ್ಪ್ಲಸ್ ಬಜೆಟ್ (Revenue Surplus Budget) ಮಂಡಿಸುತ್ತಿರುವುದಕ್ಕೆ ಹೆಮ್ಮೆ ಆಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್ (Karnataka Budget 2023) ಭಾಷಣದ ವೇಳೆ ಹೇಳಿದ್ದಾರೆ. ಈ ಬಾರಿಯ ಹಣಕಾಸು ವರ್ಷದಲ್ಲಿ ಕರ್ನಾಟಕದ ಆರ್ಥಿಕ ಬೆಳವಣಿಗೆ ಶೇ. 7.9ರಷ್ಟು ಇರಬಹುದು ಎಂಬ ಅಂದಾಜು ಇರುವುದನ್ನು ಅವರು ಈ ಸಂದರ್ಭದಲ್ಲಿ ಉಲ್ಲೇಖಿಸಿದ್ದಾರೆ. ಕೋವಿಡ್ ಮುಂಚಿನ ಆರ್ಥಿಕ ಪರಿಸ್ಥಿತಿಯ ಮಟ್ಟವನ್ನು (Pre-covid economic level) ರಾಜ್ಯವು ಮೀರಿ ಬೆಳೆಯುತ್ತಿದೆ ಎಂದೂ ಈ ಸಂದರ್ಭದಲ್ಲಿ ಸಿಎಂ ಹೇಳಿದ್ದಾರೆ. ರಾಜ್ಯದ ಆರ್ಥಿಕ ಮತ್ತು ಹಣಕಾಸು ಪರಿಸ್ಥಿತಿ ಬಗ್ಗೆ ಸಿಎಂ ಹೇಳಿದ ಕೆಲ ಅಂಶಗಳು ಇಲ್ಲಿವೆ:

ದಾವೊಸ್​ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆ ಮತ್ತು ಬೆಂಗಳೂರಿನಲ್ಲಿ ನವೆಂಬರ್​ನಲ್ಲಿ ನಡೆದ ವಿಶ್ವ ಹೂಡಿಕೆದಾರರ ಸಮಾವೇಶದಿಂದ ರಾಜ್ಯಕ್ಕೆ ಭಾರೀ ಪ್ರಮಾಣದ ಹೂಡಿಕೆ ಆಕರ್ಷಿಸಲಾಗಿದೆ. ಇದು ಕಾರ್ಯರೂಪಕ್ಕೆ ಬರುವಂತಾಗಲು ರಾಜ್ಯದಲ್ಲಿ ಹೂಡಿಕೆದಾರ ಸ್ನೇಹಿ ವಾತಾವರಣ ನಿರ್ಮಿಸಲಾಗುತ್ತಿದೆ. ಬೆಂಗಳೂರಿನಿಂದಾಚೆಗೂ ಹೂಡಕೆ ಮಾಡಲು ಉದ್ಯಮಿಗಳು ಮುಂದಾಗಿದ್ದಾರೆ. ಇದರಿಂದ ರಾಜ್ಯದ ಎಲ್ಲಾ ಪ್ರದೇಶಗಳ ಅಭಿವೃದ್ಧಿ ದೃಷ್ಟಿಯಿಂದ ಸ್ವಾಗತಾರ್ಹ.

ರಾಜ್ಯದ ಆರ್ಥಿಕತೆಯು ಕೋವಿಡ್ ಮುಂಚಿನ ಮಟ್ಟವನ್ನು ಮೀರಿ ಚೇತರಿಸಿಕೊಂಡಿದೆ. 2022-23ರಲ್ಲಿ ರಾಜ್ಯದ ಆರ್ಥಿಕ ಬೆಳವಣಿಗೆ ಶೇ. 7.9ರಷ್ಟು ಇದೆ. ಸೇವಾ ವಲಯ ಶೇ. 8.2 ಕೈಗಾರಿಕಾ ವಲಯ ಶೇ. 5.1, ಕೃಷಿ ವಲಯ ಶೇ. 5.5ರಷ್ಟು ಬೆಳವಣಿಗೆ ಸಾಧಿಸಿವೆ. ರಾಜ್ಯದ ತಲಾದಾಯ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2.04 ಲಕ್ಷ ರೂನಿಂದ 3.32 ಲಕ್ಷ ರೂಗೆ ಹೆಚ್ಚಿದೆ.

ಇದನ್ನೂ ಓದಿ: Karnataka Budget 2023: ಕೆಂಪೇಗೌಡರ ಸರ್ಕಿಟ್, ಟೂರಿಸ್ಟ್ ಗೈಡ್​ಗಳಿಗೆ ಸಹಾಯಧನ ಹೆಚ್ಚಳ: ಪ್ರವಾಸೋದ್ಯಮಗಳಿಗೆ ಏನೇನು ಸಿಕ್ಕಿದೆ?

2022-23ರಲ್ಲಿ ರಾಜ್ಯದ ಹಣಕಾಸು ಪರಿಸ್ಥಿತಿ ಸದೃಢವಾಗಿದೆ. ರಾಜಸ್ವ (ರೆವೆನ್ಯೂ) ಸಂಗ್ರಹಣೆಯಲ್ಲಿ ಹೆಚ್ಚಳವಾಗಿದೆ. ಜಿಎಸ್​ಟಿ ಸಂಗ್ರಹ ಶೇ. 36ರಷ್ಟು ಹೆಚ್ಚಾಗಿದೆ. 2021-22ರ ವರ್ಷಕ್ಕೆ ಹೋಲಿಸಿದರೆ ಈ ಬಾರಿ ರಾಜ್ಯದ ಸ್ವಂತ ತೆರಿಗೆಗಳ ಸಂಗ್ರಹ ಶೇ. 21ರಷ್ಟು ಹೆಚ್ಚಾಗಿದೆ.

ಕೇಂದ್ರ ಸರ್ಕಾರದ ನೇರ ಮತ್ತು ಪರೋಕ್ಷ ತೆರಿಗೆಯ ಹೆಚ್ಚಳದಿಂದ ರಾಜ್ಯದ ತೆರಿಗೆ ಪಾಲು 4,813 ಕೋಟಿ ರೂನಷ್ಟು ಹೆಚ್ಚಾಗಿದೆ. 2023-24ರ ಸಾಲಿನಲ್ಲಿ ಕೇಂದ್ರವು ರಾಜ್ಯಕ್ಕೆ 37,252 ಕೋಟಿ ರೂ ತೆರಿಗೆ ಪಾಲು ಅಂದಾಜು ಮಾಡಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ. 25ರಷ್ಟು ಹೆಚ್ಚು ಮೊತ್ತ ಆಗಿದೆ. ಇದರಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಇನ್ನಷ್ಟು ಉತ್ತಮಗೊಳ್ಳುತ್ತದೆ. ರಾಜ್ಯದ ರಾಜಸ್ವ ಕೊರತೆ (ರೆವೆನ್ಯೂ ಡೆಫಿಸಿಟ್) 8,703 ಕೋಟಿ ರೂನಷ್ಟು ಕಡಿಮೆ ಆಗಬಹುದು.

ಕರ್ನಾಟಕ ಆರ್ಥಿಕ ಹೊಣೆಗಾರಿಕೆ ಅಧಿನಿಯಮದ ಎಲ್ಲಾ ಮಾನದಂಡಗಳನ್ನು ಪೂರೈಸಿದ್ದೇವೆ. ಈ ಮೂಲಕ ರಾಜಸ್ವ ಹೆಚ್ಚಳದ ಬಜೆಟ್ ಮಂಡಿಸುತ್ತಿದ್ದೇವೆ,” ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮುಖ್ಯಮಂತ್ರಿಗಳು ಬಜೆಟ್ ಮಂಡಿಸುತ್ತಿರುವುದು ಇದು ಎರಡನೇ ಬಾರಿ. ಹಾಗೆಯೇ ಇದು ಈ ಸರ್ಕಾರದ ಕೊನೆಯ ಬಜೆಟ್ ಕೂಡ ಹೌದು. ಈ ಬಜೆಟ್ 3 ಲಕ್ಷ ಕೋಟಿ ರೂಗೂ ಹೆಚ್ಚು ಗಾತ್ರದ್ದಾಗಿರುವುದು ದಾಖಲೆ ಬರೆದಿದೆ. ಬಜೆಟ್ ಅಧಿವೇಶನದ ಬಳಿಕ ಚುನಾವಣಾ ನೀತಿ ಸಂಹಿತೆಗಳು ಜಾರಿಗೆ ಬರುವುದರಿಂದ ಬಜೆಟ್​ನಲ್ಲಿ ಅವರು ಮಾಡಿದ ಘೋಷಣೆಗಳು ಎಷ್ಟರಮಟ್ಟಿಗೆ ಕಾರ್ಯರೂಪಕ್ಕೆ ಬರುತ್ತವೆ ಎಂಬುದು ಪ್ರಶ್ನೆ.

ಕರ್ನಾಟಕ ಬಜೆಟ್ ಲೈವ್ ಅಪ್ಡೇಟ್ಸ್

ಕರ್ನಾಟಕ ಬಜೆಟ್​ನ ಮತ್ತಷ್ಟು ಸುದ್ದಿಗಳು

Published On - 12:27 pm, Fri, 17 February 23

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ