AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget Time: ಫೆ. 17 ಬೆಳಗ್ಗೆ 10:15ಕ್ಕೆ ಬಜೆಟ್ ಮಂಡನೆ; ಬೊಮ್ಮಾಯಿ ಸರ್ಕಾರದ ಕೊನೆಯ ಬಜೆಟ್ ನಿರೀಕ್ಷೆಗಳೇನು?

Karnataka Budget 2023, Date and Time: ಫೆಬ್ರುವರಿ 17ರಂದು ಬೆಳಗ್ಗೆ 10:15ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆ ಮಾಡಲಿದ್ದಾರೆ. ಫೆಬ್ರುವರಿ 20ರಿಂದ 22ರವರೆಗೆ ಬಜೆಟ್ ಮೇಲೆ ಚರ್ಚೆ ನಡೆಯಲಿದೆ.

Budget Time: ಫೆ. 17 ಬೆಳಗ್ಗೆ 10:15ಕ್ಕೆ ಬಜೆಟ್ ಮಂಡನೆ; ಬೊಮ್ಮಾಯಿ ಸರ್ಕಾರದ ಕೊನೆಯ ಬಜೆಟ್ ನಿರೀಕ್ಷೆಗಳೇನು?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Feb 14, 2023 | 2:35 PM

Share

ಬೆಂಗಳೂರು: ಈಗಿನ ಬಿಜೆಪಿ ಸರ್ಕಾರದ ಕೊನೆಯ ಬಜೆಟ್ (Karnataka Budget 2023) ಇದೇ ಫೆಬ್ರುವರಿ 17ರಂದು ಮಂಡನೆಯಾಗುತ್ತಿದೆ. ಇದೇ ಶುಕ್ರವಾರ ಬೆಳಗ್ಗೆ 10:15ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ (Chief Minister Basavaraj Bommai) ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಇಂದು ವಿಧಾನಸಭೆಯಲ್ಲಿ ಈ ಬಗ್ಗೆ ಅಧಿಕೃತ ಮಾಹಿತಿ ಸಿಕ್ಕಿದೆ. ಸುಮಾರು ಒಂದು ಗಂಟೆ ಕಾಲ ಬಜೆಟ್ ಭಾಷಣ ಇರಲಿದೆ.

ಈಗಾಗಲೇ ಬಜೆಟ್ ಅಧಿವೇಶನ ಫೆಬ್ರುವರಿ 10ರಂದು ಆರಂಭವಾಗಿದ್ದು, ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯುತ್ತಿದೆ. ಫೆಬ್ರುವರಿ 17ರಂದು ಬಜೆಟ್ ಮಂಡನೆಯಾಗಿ ಫೆಬ್ರುವರಿ 20ರಿಂದ 22ರವರೆಗೂ ಅದರ ಮೇಲೆ ಚರ್ಚೆ ನಡೆಯಲಿದೆ. ಫೆಬ್ರುವರಿ 22ರಂದು ಸರ್ಕಾರದಿಂದ ಉತ್ತರ ಬರಲಿದೆ.

ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಇದು ಕೊನೆಯ ಬಜೆಟ್ ಆಗಿದೆ. ಏಪ್ರಿಲ್ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವುದರಿಂದ ಬಜೆಟ್ ಮೇಲೆ ಹಲವರ ಕುತೂಹಲದ ಕಣ್ಣು ನೆಟ್ಟಿದೆ. ಆದರೆ, ಚುನಾವಣೆ ನೀತಿ ಸಂಹಿತೆ ಜಾರಿಯಾಗುವುದರಿಂದ ಈ ಬಜೆಟ್​ನಲ್ಲಿ ಸರ್ಕಾರ ಕೊಡುವ ಕೊಡುಗೆಗಳು ಕೇವಲ ಘೋಷಣೆ ಮಾತ್ರವೇ ಆಗಿರಲಿದೆ. ಹೀಗಾಗಿ, ಹೆಚ್ಚು ನಿರೀಕ್ಷೆ ಇಟ್ಟುಕೊಳ್ಳುವುದು ಅಸಾಧ್ಯ. ಜನರನ್ನು ಆಕರ್ಷಿಸಲು ಭರಪೂರ ಘೋಷಣೆಗೆ ಬೊಮ್ಮಾಯಿ ಮುಂದಾಗಬಹುದು.

ಇದನ್ನೂ ಓದಿ: Politics: ಕರ್ನಾಟಕದಲ್ಲಿ ಸರ್ಕಾರಿ ಅಧಿಕಾರಿಗಳ ಸೆಕೆಂಡ್ ಇನ್ನಿಂಗ್ಸ್; ಯಾರೆಲ್ಲಾ ರಾಜಕೀಯಕ್ಕೆ ಎಂಟ್ರಿ?

ಕಳೆದ ವರ್ಷದ ಬಜೆಟ್​ನಲ್ಲಿ ಬಸವರಾಜ ಬೊಮ್ಮಾಯಿ 2.65 ಲಕ್ಷ ಕೋಟಿ ರೂ ಗಾತ್ರದ ಬಜೆಟ್ ಮಂಡಿಸಿದ್ದರು. ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ಕ್ಷೇತ್ರಕ್ಕೆ 68 ಸಾವಿರ ಕೋಟಿ ರೂ ಅನುದಾನ ಕೊಟ್ಟಿದ್ದರು. ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲು 55 ಸಾವಿರ ಕೋಟಿ, ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆ ಕ್ಷೇತ್ರಕ್ಕೆ 56 ಸಾವಿರ ಕೋಟಿ ರೂ, ಮಹಿಳೆಯರ ಸಬಲೀಕರಣ ಮತ್ತು ಕ್ಷೇಮಾಭಿವೃದ್ಧಿಗೆ 43 ಸಾವಿರ ಕೋಟಿ ರೂ, ಮಕ್ಕಳ ಅಭ್ಯುದಯಕ್ಕೆ 40 ಸಾವಿರ ಕೋಟಿ ರೂ, ಕೃಷಿನ ಕ್ಷೇತ್ರಕ್ಕೆ 33 ಸಾವಿರ ಕೋಟಿ ರೂ ಅನುದಾನವನ್ನು ಕೊಡಲಾಗಿತ್ತು.

Published On - 2:35 pm, Tue, 14 February 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ