AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2023: ಉದ್ಯಮ ಶಕ್ತಿ ಯೋಜನೆಯಡಿ 100 ಪೆಟ್ರೋಲ್​​ ಬಂಕ್​ಗಳ ಸ್ಥಾಪನೆ, ಮಹಿಳಾ ಸ್ವಸಹಾಯ ಸಂಘಗಳ ಮೂಲಕ ನಿರ್ವಹಣೆ

ಬಹು ನಿರೀಕ್ಷಿತ ಬಜೆಟ್​ನ್ನು ಸಿಎಂ ಸಿದ್ಧರಾಮಯ್ಯ ಅವರು ಇಂದು ಮಂಡಿಸಿದ್ದಾರೆ. ‘ಉದ್ಯಮ ಶಕ್ತಿ’ ಎಂಬ ಯೋಜನೆ ಅಡಿಯಲ್ಲಿ 100 ಪೆಟ್ರೋಲ್​​ ಬಂಕ್​ಗಳನ್ನು ಸ್ಥಾಪಿಸಲಾಗುತ್ತಿದೆ. ಇವುಗಳನ್ನು ಮಹಿಳಾ ಸ್ವಸಹಾಯ ಸಂಘಗಳು ನಿರ್ವಹಿಸಲ್ಪಡುತ್ತವೆ ಎಂಬುದು ವಿಶೇಷವಾಗಿದೆ.

Karnataka Budget 2023: ಉದ್ಯಮ ಶಕ್ತಿ ಯೋಜನೆಯಡಿ 100 ಪೆಟ್ರೋಲ್​​ ಬಂಕ್​ಗಳ ಸ್ಥಾಪನೆ, ಮಹಿಳಾ ಸ್ವಸಹಾಯ ಸಂಘಗಳ ಮೂಲಕ ನಿರ್ವಹಣೆ
ಸಿಎಂ ಸಿದ್ಧರಾಮಯ್ಯ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Jul 07, 2023 | 5:21 PM

Share

ಬೆಂಗಳೂರು: ರಾಜ್ಯ ಸರ್ಕಾರದ 2023-24ನೇ ಸಾಲಿನ ಬಜೆಟ್​ (Karnataka Budget 2023) ನ್ನು ಸಿಎಂ ಸಿದ್ಧರಾಮಯ್ಯ ಅವರು ಶುಕ್ರುವಾರ ಮಂಡಿಸಿದ್ದಾರೆ. 14ನೇ ಬಾರಿ ಬಜೆಟ್​ ಮಂಡಿಸುವ ಮೂಲಕ ಸಿದ್ಧರಾಮಯ್ಯ ಅವರು ದಾಖಲೆ ನಿರ್ಮಿಸಿದ್ದಾರೆ. ಈ ಭಾರಿಯ ಬಜೆಟ್​ನಲ್ಲಿ ಕಂದಾಯ ಇಲಾಖೆಗೆ ಮಹತ್ವ ನೀಡಲಾಗಿದೆ. ಆ ಪೈಕಿ ಮಹಿಳೆಯರಿಗೆ ನೆರವಾಗುವ ದೃಷ್ಟಿಯಿಂದ ‘ಉದ್ಯಮ ಶಕ್ತಿ’ ಎಂಬ ಯೋಜನೆ ಅಡಿಯಲ್ಲಿ 100 ಪೆಟ್ರೋಲ್​​ ಬಂಕ್​ಗಳನ್ನು ಸ್ಥಾಪಿಸಲಾಗುತ್ತಿದ್ದು, ಮಹಿಳಾ ಸ್ವಸಹಾಯ ಸಂಘಗಳ ಮೂಲಕ ನಿರ್ವಹಿಸಲ್ಪಡುತ್ತವೆ ಎಂಬುದು ವಿಶೇಷ.

ಸರ್ಕಾರಿ ಸ್ವಾಮ್ಯದ ಪೆಟ್ರೋಲಿಯಂ ಕಂಪನಿಗಳ ಸಹಯೋಗದಲ್ಲಿ ‘ಉದ್ಯಮ ಶಕ್ತಿ ಯೋಜನೆ’ ಅಡಿಯಲ್ಲಿ 100 ಬೇರೆ ಬೇರೆ ಸ್ಥಳಗಳಲ್ಲಿ ಪೆಟ್ರೋಲ್​​ ಬಂಕ್​ಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಮತ್ತು ಅವುಗಳನ್ನು ‘ಮಹಿಳಾ ಸಹಕಾರಿ ಸ್ವಸಹಾಯ ಸಂಘ’ಗಳ ಮೂಲಕ ಸಂಪೂರ್ಣ ನಿರ್ವಹಣೆ ಮಾಡಲು ಕ್ರಮಕೈಗೊಳ್ಳಲಾಗುತ್ತಿದೆ.

ಇದನ್ನೂ ಓದಿ: Karnataka Budget 2023: ಎಸ್‌ಸಿ,ಎಸ್‌ಟಿ ಸಮುದಾಯಗಳ ಯುವಜನರ ಸ್ವಯಂ ಉದ್ಯೋಗಕ್ಕೆ ಸ್ವಾವಲಂಬಿ ಸಾರಥಿ; ಬಜೆಟ್​​ನಲ್ಲಿ ಘೋಷಣೆ

ಈ ‘ಉದ್ಯಮ ಶಕ್ತಿ’ ಯೋಜನೆ ನಿರ್ಮಾಣಕ್ಕೆ ಪೆಟ್ರೋಲಿಯಂ ಕಂಪನಿಗಳು ಬಂಡವಾಳ ಹೂಡಲು ಮುಂದೆ ಬಂದಿವೆ. ಇನ್ನು ರಾಜ್ಯ ಸರ್ಕಾರ ಪೆಟ್ರೋಲ್​ ಬಂಕ್​ ಸ್ಥಾಪನೆಗೆ ಭೂಮಿ ಒದಗಿಸುವುದರ ಜತೆಗೆ ತರಬೇತಿ, ಪರವಾನಗಿ ಮತ್ತು ಇತ್ತರೆ ಅಗತ್ಯಗಳನ್ನು ಒದಗಿಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:20 pm, Fri, 7 July 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!