Karnataka Budget 2023: ದಾಖಲೆಯ 14ನೇ ಬಾರಿ ಬಜೆಟ್​ ಮಂಡಿಸಲಿರುವ ಸಿದ್ದರಾಮಯ್ಯ; ಹೆಚ್ಚುತ್ತಲೇ ಇದೆ ಸಾಲದ ಪ್ರಮಾಣ

ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಮೊದಲ ಬಜೆಟ್​ನ್ನು ಜುಲೈ 7 ರಂದು ಮಂಡಿಸಲಿದ್ದಾರೆ. ಈ ಹಿಂದೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ್ದ ಹಿಂದಿನ ಬಜೆಟ್ 3.09 ಲಕ್ಷ ಕೋಟಿ ರೂ.ಗಿಂತ ಶೇಕಡಾ 8 ರಷ್ಟು ಅಂದರೆ 3.39 ಲಕ್ಷ ಕೋಟಿ ರೂ. ಹೆಚ್ಚಳವಾಗಿರಲಿದೆ. ದಾಖಲೆಯ 14ನೇ ಬಾರಿ ಸಿದ್ದರಾಮಯ್ಯ ಬಜೆಟ್​ ಮಂಡಿಸುತ್ತಿದ್ದು, ಆದರೆ ಸಾಲದ ಪ್ರಮಾಣ ಹೆಚ್ಚುತ್ತಲೇ ಇದೆ.

Karnataka Budget 2023: ದಾಖಲೆಯ 14ನೇ ಬಾರಿ ಬಜೆಟ್​ ಮಂಡಿಸಲಿರುವ ಸಿದ್ದರಾಮಯ್ಯ; ಹೆಚ್ಚುತ್ತಲೇ ಇದೆ ಸಾಲದ ಪ್ರಮಾಣ
ಸಿಎಂ ಸಿದ್ಧರಾಮಯ್ಯ
Edited By:

Updated on: Jul 06, 2023 | 3:36 PM

ಬೆಂಗಳೂರು: ಹಣಕಾಸು ಖಾತೆ ಹೊಂದಿರುವ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಜುಲೈ 7 ರಂದು ತಮ್ಮ 14 ನೇ ಬಜೆಟ್​ನ್ನು (Karnataka Budget 2023) ಮಂಡಿಸಲಿದ್ದಾರೆ. ಆ ಮೂಲಕ 13 ಬಾರಿ ಬಜೆಟ್ ಮಂಡಿಸಿದ್ದ ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರನ್ನು ಹಿಂದಿಕ್ಕಲಿದ್ದಾರೆ. ಇದು ಕಾಂಗ್ರೆಸ್​ ಸರ್ಕಾರದ ಪೂರಕ ಬಜೆಟ್​ ಆಗಿದ್ದು, ಇತರೆ ಅಭಿವೃದ್ಧಿ ಯೋಜನೆಗಳ ಜೊತೆಗೆ ಕಾಂಗ್ರೆಸ್ ಘೋಷಿಸಿರುವ ಐದು ‘ಗ್ಯಾರಂಟಿ’ ಯೋಜನೆಗಳನ್ನು ಪೂರೈಸುವ ದೊಡ್ಡ ಜವಾಬ್ದಾರಿ ಸಿದ್ದರಾಮಯ್ಯ ಅವರ ಮೇಲಿದೆ.

ಹಿಂದಿನ ಬಜೆಟ್​ಗಿಂತ ಶೇಕಡಾ 8 ರಷ್ಟು ಹೆಚ್ಚಳ

ಈ ವರ್ಷದ ಫೆಬ್ರವರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಹಿಂದಿನ ಬಜೆಟ್ 3.09 ಲಕ್ಷ ಕೋಟಿ ರೂ.ಗಿಂತ ಶೇಕಡಾ 8 ರಷ್ಟು ಅಂದರೆ 3.39 ಲಕ್ಷ ಕೋಟಿ ರೂ. ಹೆಚ್ಚಳ ಎಂದು ಸಿದ್ದರಾಮಯ್ಯ ಇತ್ತೀಚೆಗೆ ಹೇಳಿದ್ದರು.

ಇದನ್ನೂ ಓದಿ: ಕರ್ನಾಟಕ ಬಜೆಟ್ 2023 ಯಾವಾಗ? ಯಾರು ಮಂಡಿಸಲಿದ್ದಾರೆ? ಲೈವ್ ವೀಕ್ಷಿಸುವುದು ಹೇಗೆ? ಇಲ್ಲಿದೆ ವಿವರ

‘ಗ್ಯಾರಂಟಿ’ ಯೋಜನೆಗಳಿಗೆ ಸರ್ಕಾರದಿಂದ 59,000 ಕೋಟಿ ರೂ. ವ್ಯಯವಾಗುತ್ತಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದರು. ಗ್ಯಾರಂಟಿ ಅನುಷ್ಠಾನ ಸಂಬಂಧ ಬಜೆಟ್​ನಲ್ಲಿ ಘೋಷಣೆ ಸಾಧ್ಯತೆ ಇದ್ದು, ಗೃಹಲಕ್ಷ್ಮಿ ಯೋಜನೆಗೆ 30 ಸಾವಿರ ಕೋಟಿ ರೂ. ಅನುದಾನ ಮೀಸಲು ಸಾಧ್ಯತೆಯಿದೆ.

ಅಂಗನವಾಡಿ, ಆಶಾ ಕಾರ್ಯಕರ್ತೆಯರ ಗೌರವಧನವನ್ನು 11,500ರಿಂದ 15 ಸಾವಿರ, ಸಹಾಯಕಿಯರ ಗೌರವಧನ 7,500ರಿಂದ 10 ಸಾವಿರ, ಆಶಾ ಕಾರ್ಯಕರ್ತೆಯರ ಗೌರವಧನ 5,000ರಿಂದ 8 ಸಾವಿರ ಮತ್ತು ಬಿಸಿಯೂಟ ಕಾರ್ಯಕರ್ತೆಯರ ಗೌರವಧನ 3,700ರಿಂದ 5 ಸಾವಿರಕ್ಕೆ ಏರಿಕೆ ಸಾಧ್ಯತೆ ಇದೆ.

ಇದನ್ನೂ ಓದಿ: Karnataka Budget 2023: ಬಜೆಟ್ ಸಿದ್ಧತೆಯಲ್ಲಿ ವ್ಯಸ್ತರಾದ ಸಿಎಂ ಸಿದ್ದರಾಮಯ್ಯ; ಈ ಬಾರಿ ಹೆಚ್ಚಲಿದೆ ಆಯವ್ಯಯದ ಗಾತ್ರ

ಹೊರೆ ಆದ ರಾಜ್ಯದ ಸಾಲ

2023 – 24 ಸಾಲಿನ ಬಜೆಟ್​ನಲ್ಲಿ 77,750 ಕೋಟಿ ರೂ. ಸಾಲ ಪಡೆದುಕೊಳ್ಳಬಹುದು ಎಂದು ಉಲ್ಲೇಖಿಸಲಾಗಿದ್ದು, ವರ್ಷದಿಂದ ವರ್ಷಕ್ಕೆ ರಾಜ್ಯ ಸಾಲದ ಗಾತ್ರವೂ ಬೆಳೆಯುತ್ತಲ್ಲೇ ಇದೆ.

  • 2012 – 13 ರಲ್ಲಿ – ಒಂದು ಲಕ್ಷ ಕೋಟಿ ರೂ ದಾಟಿತ್ತು.
  • 2016 – 17 ರಲ್ಲಿ – 2 ಲಕ್ಷ ಕೋಟಿ ರೂ ಮೀರಿತ್ತು.
  • 2019 – 20 ರಲ್ಲಿ – 3 ಲಕ್ಷ ಕೋಟಿ ರೂ ಮೀರಿತ್ತು
  • 2020 – 21 ರಲ್ಲಿ – 4 ಲಕ್ಷ ಕೋಟಿ ರೂ. ದಾಟಿತ್ತು (ಕೋವಿಡ್​ ಹಾಗೂ ಪ್ರವಾಹದಿಂದ ಸಾಲದ ಪ್ರಮಾಣ ಹೆಚ್ಚಳ)
  • 2022 – 23 ರ ಅಂತ್ಯಕ್ಕೆ 5 ಲಕ್ಷ ಕೋಟಿ ರೂ.ಗೆ ಬಂದು ನಿಂತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:35 pm, Thu, 6 July 23

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us