Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2023: ವೃತ್ತಿಪರ ತೆರಿಗೆ ವಿನಾಯಿತಿ ಮಿತಿ 25 ಸಾವಿರಕ್ಕೆ ಏರಿಕೆ; ರಾಜ್ಯ ಬಜೆಟ್​ನಲ್ಲಿ ಘೋಷಣೆ

Karnataka Budget, Tax Collections: ಕಡಿಮೆ ಆದಾಯದ ನೌಕರರಿಗೆ ವೃತ್ತಿ ತೆರಿಗೆಯಿಂದ ಮುಕ್ತಿ ಕೊಡಲಾಗಿದೆ. ವೃತ್ತಿ ತೆರಿಗೆಯಿಂದ ವಿನಾಯಿತಿ ಇರುವ ಮಿತಿಯನ್ನು 15 ಸಾವಿರ ರೂ ನಿಂದ 25 ಸಾವಿರ ರೂಪಾಯಿಗೆ ಏರಿಕೆ ಮಾಡಲಾಗಿದೆ.

Budget 2023: ವೃತ್ತಿಪರ ತೆರಿಗೆ ವಿನಾಯಿತಿ ಮಿತಿ 25 ಸಾವಿರಕ್ಕೆ ಏರಿಕೆ; ರಾಜ್ಯ ಬಜೆಟ್​ನಲ್ಲಿ ಘೋಷಣೆ
ಜಿಎಸ್​ಟಿ
Follow us
TV9 Web
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on:Feb 17, 2023 | 2:04 PM

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ಕಡಿಮೆ ಅದಾಯದವರಿಗೆ ವೃತ್ತಿ ತೆರಿಗೆ (Profession Tax) ವಿನಾಯಿತಿ ಮಿತಿಯನ್ನು ಹೆಚ್ಚಿಸಿರುವುದಾಗಿ ತಮ್ಮ ಬಜೆಟ್​ನಲ್ಲಿ ಘೋಷಿಸಿದ್ದಾರೆ. ಪ್ರೊಫೆಷನಲ್ ಟ್ಯಾಕ್ಸ್​ನಿಂದ ವಿನಾಯಿತಿ ಕೊಡಲಾಗುವ ಮಿತಿಯನ್ನು 25 ಸಾವಿರ ರೂಪಾಯಿಗೆ ಏರಿಸಲಾಗಿದೆ. ಈ ಹಿಂದೆ ಇದರ ಮಿತಿ 15 ಸಾವಿರ ರೂ ಇತ್ತು. ಹಾಗೆಯೇ, ವಾಣಿಜ್ಯ ತೆರಿಗೆ ಇಲಾಖೆ ದಾಖಲೆ ಮಟ್ಟದಲ್ಲಿ ಅದಾಯ ಗಳಿಸಿರುವ ಸಂಗತಿಯನ್ನು ಸಿಎಂ ಬೊಮ್ಮಾಯಿ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

ಮತ್ತೊಂದು ಗಮನಾರ್ಹ ನಿರ್ಧಾರದಲ್ಲಿ ಕರ ಸಮಾಧಾನ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ. ಇದು ಜಿಎಸ್​ಟಿ ಪೂರ್ವ ತೆರಿಗೆ ವ್ಯಾಜ್ಯಗಳನ್ನು ಇತ್ಯರ್ಥಪಡಿಸಲು ಇರುವ ಯೋಜನೆಯಾಗಿದೆ.

ವಾಣಿಜ್ಯ ತೆರಿಗೆಗಳು

ಕಡಿಮೆ ಆದಾಯದ ನೌಕರರಿಗೆ ವೃತ್ತಿ ತೆರಿಗೆಯಿಂದ ಮುಕ್ತಿ ಕೊಡಲಾಗಿದೆ. ವೃತ್ತಿ ತೆರಿಗೆಯಿಂದ ವಿನಾಯಿತಿ ಇರುವ ಮಿತಿಯನ್ನು 15 ಸಾವಿರ ರೂ ನಿಂದ 25 ಸಾವಿರ ರೂಪಾಯಿಗೆ ಏರಿಕೆ ಮಾಡಲಾಗಿದೆ. ಅಂದರೆ 25 ಸಾವಿರಕ್ಕಿಂತ ಕಡಿಮೆ ಸಂಬಳ ಪಡೆಯುವವರಿಂದ ಪ್ರೊಫೆಷನ್ ಟ್ಯಾಕ್ಸ್ ಪಡೆಯಲಾಗುವುದಿಲ್ಲ. 25 ಸಾವಿರ ರೂಗಿಂತ ಹೆಚ್ಚು ಸಂಬಳ ಪಡೆಯುವವರು 200 ರೂ ವೃತ್ತಿ ತೆರಿಗೆ ಪಾವತಿಸಬೇಕು.

ಜಿಎಸ್​ಟಿ ಪೂರ್ವ ತೆರಿಗೆ ವಿವಾದಗಳನ್ನು ಇತ್ಯರ್ಥಗೊಳಿಸಲು ಕರ ಸಮಾಧಾನ ಯೋಜನೆ ಜಾರಿಗೆ ತರಲಾಗುತ್ತಿದೆ. ತೆರಿಗೆ ಬಾಕಿ ಉಳಿಸಿಕೊಂಡವರು ಯಾವುದೇ ವ್ಯಾಜ್ಯದ ತಲೆನೋವಿಲ್ಲದೆ ಬಾಕಿ ಹಣ ಪಾವತಿಸುವ ಅವಕಾಶ ಕಲ್ಪಿಸಲಾಗಿದೆ. ಅಕ್ಟೋಬರ್ 30ರವರೆಗೂ ಗಡುವು ನೀಡಲಾಗಿದ್ದು, ಅಷ್ಟರೊಳಗೆ ಬಾಕಿ ತೆರಿಗೆ ಪಾವತಿಸಿದರೆ ಬಡ್ಡಿ ಮತ್ತು ದಂಡಬಡ್ಡಿ ಪಾವತಿಯಲ್ಲಿ ಪರಿಹಾರ ಇರುತ್ತದೆ ಎಂದು ಬಜೆಟ್​ನಲ್ಲಿ ಆಶ್ವಾಸನೆ ಕೊಡಲಾಗಿದೆ.

ಇದನ್ನೂ ಓದಿ: Karnataka Budget 2023: ಕಿವಿಯಲ್ಲಿ ಹೂ ಇಟ್ಟುಕೊಂಡೇ ಸಿಎಂ ಬೊಮ್ಮಾಯಿಯನ್ನು ಅಭಿನಂದಿಸಿದ ಡಿಕೆ ಶಿವಕುಮಾರ್

ಜಿಎಸ್​ಟಿ ಸಂಗ್ರಹ: ರಾಜ್ಯದಲ್ಲಿ ಜಿಎಸ್​ಟಿ ಸಂಗ್ರಹ ಗಣನೀಯವಾಗಿ ಹೆಚ್ಚಿದೆ. 2022-23ರ ಹಣಕಾಸು ವರ್ಷದಲ್ಲಿ ರಾಜ್ಯಕ್ಕೆ ಸಿಗುವ ಜಿಎಸ್​ಟಿ ಪರಿಹಾರ ಸೇರಿ ಒಟ್ಟು ವಾಣಿಜ್ಯ ತೆರಿಗೆ ಸಂಗ್ರಹವು 93,558 ಕೋಟಿ ರೂ ಎಂದು ಅಂದಾಜು ಮಾಡಲಾಗಿದೆ. ವಾಣಿಜ್ಯ ತೆರಿಗೆ ಇಲಾಖೆಯು ಜಿಎಸ್​ಟಿ ಪರಿಹಾರ ಹೊರತುಪಡಿಸಿ 72,010 ಕೋಟಿ ರೂ ಗುರಿ ಹೊಂದಿತ್ತು. ಇದನ್ನು ಮೀರಿ 83,010 ಕೋಟಿ ರೂ ಸಂಗ್ರಹ ಮಾಡಲಾಗುತ್ತಿದೆ. ಕೇಂದ್ರದಿಂದ ಜಿಎಸ್​ಟಿ ಪರಿಹಾರವಾಗಿ 10,548 ಕೋಟಿ ರೂ ಸಿಗಲಿದೆ.

2023-24 ರ ಸಾಲಿನ ವರ್ಷಕ್ಕೆ ಜಿಎಸ್​ಟಿ ಪರಿಹಾರ ಹೊರತುಪಡಿಸಿ 92,000 ಕೋಟಿ ರೂ ತೆರಿಗೆ ಸಂಗ್ರಹಿಸಬೇಕೆಂದು ವಾಣಿಜ್ಯ ಇಲಾಖೆಗೆ ಗುರಿ ಕೊಡಲಾಗಿದೆ.

ನೋಂದಣಿ ಮತ್ತು ಮುದ್ರಾಂಕ ಇಲಾಖೆಯು 2022-23ರ ಸಾಲಿನಲ್ಲಿ 15 ಸಾವಿರ ರೂಗಳ ಗುರಿ ಹೊಂದಿತ್ತು. ಆ ಗುರಿ ಮೀರಿ 17 ಕೋಟಿ ರೂ ರೆವೆನ್ಯೂ ಸಂಗ್ರಹ ಆಗುವ ನಿರೀಕ್ಷೆ ಇದೆ. ಮುಂದಿನ ಹಣಕಾಸು ವರ್ಷಕ್ಕೆ ನೊಂದಣಿ ಮತ್ತು ಮುದ್ರಾಂಕ ಇಲಾಖೆಗೆ 19 ಸಾವಿರ ಕೋಟಿ ರೂ ರಾಜಸ್ವ ಸಂಗ್ರಹದ ಗುರಿ ಕೊಡಲಾಗಿದೆ.\

ಕರ್ನಾಟಕ ಬಜೆಟ್​ನ ಮತ್ತಷ್ಟು ಸುದ್ದಿಗಳು

Published On - 2:01 pm, Fri, 17 February 23

ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!