AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2022: ಹೆಚ್ಚುತ್ತಿರುವ ಚೀನಾ, ಪಾಕ್​ ಉಪಟಳ; ಸೇನಾ ಕ್ಷೇತ್ರ ಬಲ ಅನಿವಾರ್ಯತೆಗಾಗಿ ಈ ಸಾಲಿನ ಬಜೆಟ್​​ನಲ್ಲಿ ಇನ್ನಷ್ಟು ನಿರೀಕ್ಷೆ

Defence Budget: ಕಳೆದ ವರ್ಷ ಅಂದರೆ 2021-22ನೇ ಸಾಲಿನ ಕೇಂದ್ರ ಬಜೆಟ್​ನಲ್ಲಿ ರಕ್ಷಣಾ ಕ್ಷೇತ್ರಕ್ಕೆ ಒಟ್ಟು 4.78 ಲಕ್ಷ ಕೋಟಿ ರೂಪಾಯಿ ಹಂಚಿಕೆ ಮಾಡಲಾಗಿತ್ತು. ಅದರಲ್ಲಿ ಬಂಡವಾಳ ಆಯವ್ಯಯ ಅಂದರೆ ಭೂಸೇನೆ, ವಾಯುಪಡೆ ಮತ್ತು ನೌಕಾಪಡೆಗಳ ಆಧುನೀಕರಣ ಮತ್ತು ಅಗತ್ಯ ಉಪಕರಣಗಳ ಖರೀದಿಗೆ 1.35 ಲಕ್ಷ ಕೋಟಿ ರೂಪಾಯಿ ಮೀಸಲಿಡಲಾಗಿತ್ತು.

Budget 2022: ಹೆಚ್ಚುತ್ತಿರುವ ಚೀನಾ, ಪಾಕ್​ ಉಪಟಳ; ಸೇನಾ ಕ್ಷೇತ್ರ ಬಲ ಅನಿವಾರ್ಯತೆಗಾಗಿ ಈ ಸಾಲಿನ ಬಜೆಟ್​​ನಲ್ಲಿ ಇನ್ನಷ್ಟು ನಿರೀಕ್ಷೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Feb 01, 2022 | 10:40 AM

Share

ಕೊರೊನಾ ವೈರಸ್​ ಸಾಂಕ್ರಾಮಿಕ ಶುರುವಾದ ಮೇಲೆ ಮಂಡನೆಯಾಗುತ್ತಿರುವ ಎರಡನೇ ಕೇಂದ್ರ ಬಜೆಟ್​ ಇದಾಗಿದ್ದು, ಪ್ರತಿ ಕ್ಷೇತ್ರದಿಂದಲೂ ನಿರೀಕ್ಷೆ ಸಹಜವಾಗಿಯೇ ಹೆಚ್ಚಾಗಿದೆ.  ಎಲ್ಲ ಕ್ಷೇತ್ರಗಳ ಮಧ್ಯೆ ರಕ್ಷಣಾ ಕ್ಷೇತ್ರಕ್ಕೆ ಏನು ಸಿಗಬಹುದು? ಎಂಬ ಕುತಹೂಲವೂ ಇದ್ದೇ ಇದೆ. ಬಿಜೆಪಿ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ರಕ್ಷಣಾ ಕ್ಷೇತ್ರದ ಅಭಿವೃದ್ಧಿ, ಸದೃಢಗೊಳಿಸಲು ಪ್ರತಿವರ್ಷವೂ ಬಜೆಟ್​​ನಲ್ಲಿ ಹೆಚ್ಚೆಚ್ಚು ಅನುದಾನ ನೀಡುತ್ತಿದೆ. ಆಧುನಿಕ ಶಸ್ತ್ರಾಸ್ತ್ರ ಖರೀಧಿ, ಯೋಧರಿಗೆ ರಕ್ಷಣಾ ಉಪಕರಣಗಳು, ಮೇಕ್​ ಇನ್​ ಇಂಡಿಯಾ ಯೋಜನೆಯಡಿ ಸ್ವದೇಶಿ ಶಸ್ತ್ರಾಸ್ತ್ರ ಉತ್ಪಾದನೆ ಇತ್ಯಾದಿ ಕಾರಣಗಳಿಗಾಗಿ ಬಜೆಟ್​​ನಲ್ಲಿ ಆದ್ಯತೆ ಸಿಗುತ್ತಿದೆ. ಈ ಬಾರಿಯೂ ಕೂಡ ಕೇಂದ್ರ ರಕ್ಷಣಾ ಸಚಿವಾಲಯ ಈಗಾಗಲೇ ತಮಗೆ ಏನೆಲ್ಲ ಅವಶ್ಯಕತೆ ಇದೆ ಎಂಬುದರ ವಿಶ್​ ಲಿಸ್ಟ್​​ನ್ನು ಹಣಕಾಸು ಸಚಿವಾಲಯಕ್ಕೆ ಕಳಿಸಿಕೊಟ್ಟಿದೆ ಎನ್ನಲಾಗಿದೆ.

ಪ್ರಸಕ್ತ ಬಜೆಟ್​​ನಲ್ಲಿ ಮತ್ತಷ್ಟು ನಿರೀಕ್ಷೆ ಸೇನೆಯ ಆಧುನೀಕರಣಕ್ಕೆ ಕೇಂದ್ರ ಬಿಜೆಪಿ ಸರ್ಕಾರ ತುಂಬ ಆದ್ಯತೆ ನೀಡುತ್ತಿದೆ. ಅದರಲ್ಲೂ ಇತ್ತೀಚೆಗೆ ನೆರೆ ರಾಷ್ಟ್ರಗಳಾದ ಚೀನಾ ಮತ್ತು ಪಾಕಿಸ್ತಾನದ ಉಪಟಳ ಜಾಸ್ತಿಯಾಗಿದೆ. ಎಲ್​ಎಸಿ ಬಳಿ ಚೀನಾ ಸೈನ್ಯ ಆಕ್ರಮಣಕಾರಿ ಮನೋಭಾವ ತೋರುತ್ತಿದ್ದರೆ, ಇತ್ತ ಎಲ್​ಒಸಿ ಬಳಿ ಪಾಕಿಸ್ತಾನ, ಪಾಕಿಸ್ತಾನಿ ಉಗ್ರರ ಕಾಟ ಹೆಚ್ಚಾಗಿದೆ. ಎರಡೂ ದೇಶಗಳನ್ನೂ ಭಾರತೀಯ ಸೇನೆ ಸಮರ್ಥವಾಗಿ ನಿಭಾಯಿಸುತ್ತಿದ್ದರೂ ಕೂಡ, ಎಂಥ ಸಂದರ್ಭ ಬಂದರೂ ಎದುರಿಸಬೇಕಾದರೆ ಸಹಜವಾಗಿ ಸೇನೆಯನ್ನು ಇನ್ನಷ್ಟು-ಮತ್ತಷ್ಟು ಬಲಗೊಳಿಸುವುದು ಅನಿವಾರ್ಯ. ಯಾವುದೇ ದೇಶಗಳ ಆಕ್ರಮಣವನ್ನು ಸಮರ್ಥವಾಗಿ ಎದುರಿಸಲು ಭಾರತೀಯ ಸೇನೆ ಸಜ್ಜಾಗಿದ್ದು ಹೌದಾದರೂ, ಯೋಧರಿಗೆ ಕಾಲಕಾಲಕ್ಕೆ ಆಧುನಿಕ ಶಸ್ತ್ರಾಸ್ತ್ರಗಳು, ಮುಂದುವರಿದ ರಕ್ಷಣಾ ಉಪಕರಣಗಳನ್ನು ಒದಗಿಸಲೇಬೇಕು. ಹೀಗಾಗಿ ಪ್ರಸ್ತುತ ಸೇನಾ ಕ್ಷೇತ್ರದಲ್ಲಿ ನೆರೆ ರಾಷ್ಟ್ರಗಳಿಂದ ಇರುವ ಸವಾಲುಗಳನ್ನು ಎದುರಿಸಲು ಹೆಚ್ಚಿನ ಆರ್ಥಿಕ ಹಂಚಿಕೆಯ ಅಗತ್ಯತೆ ಇದೆ. ಎಂದಿನಂತೆಯೇ 2022-23ನೇ ಸಾಲಿನ ಬಜೆಟ್​​ನಲ್ಲೂ ಕೂಡ ಮಿಲಿಟರಿ ಕ್ಷೇತ್ರದ ನಿರೀಕ್ಷೆ ಹೆಚ್ಚಿದೆ.

ವಿಶ್ವದಲ್ಲೇ 5ನೇ ದೊಡ್ಡ ಬಜೆಟ್​ ಇದು ನಿಮಗೆ ಗೊತ್ತಿರಲಿ, ಭಾರತದ ರಕ್ಷಣಾ ಬಜೆಟ್​ ಎಂಬುದು ವಿಶ್ವದಲ್ಲಿಯೇ 5ನೇ ಅತ್ಯಂತ ದೊಡ್ಡ ರಕ್ಷಣಾ ಬಜೆಟ್​ ಆಗಿದೆ. ಅಂದರೆ ರಕ್ಷಣಾ ಕ್ಷೇತ್ರಕ್ಕೆ ಬಜೆಟ್​​ನಲ್ಲಿ ಅತಿ ಹೆಚ್ಚು ಅನುದಾನ ಮೀಸಲಿಡುವ 5ನೇ ದೊಡ್ಡ ದೇಶ ಭಾರತ.  ಚೀನಾ ಒಟ್ಟಾರೆ ಜಿಡಿಪಿಯ ಶೇ.3ರಷ್ಟನ್ನು ತನ್ನ ರಕ್ಷಣಾ ಕ್ಷೇತ್ರಕ್ಕೆ ಮೀಸಲಿಟ್ಟರೆ, ಭಾರತ ಒಟ್ಟಾರೆ ಜಿಡಿಪಿಯ ಶೇ.1.58ನ್ನು ರಕ್ಷಣಾ ಪಡೆಗಳಿಗಾಗಿ ಎತ್ತಿಡುತ್ತಿದೆ.

ವಿಶ್ವದ ಅತಿದೊಡ್ಡ ಸೇನೆಗಳಲ್ಲಿ ಭಾರತದ ಸೇನೆಯೂ ಒಂದು. ಪ್ರತಿವರ್ಷ ಬಜೆಟ್​ನಲ್ಲಿ ಮೀಸಲಿಡುವ ಅನುದಾನದ ಬಹುತೇಕ ಪಾಲು ಸೇನೆಯ ಯೋಧರ ವೇತನ ಮತ್ತು ಪಿಂಚಣಿಗೆ ಹೋಗುತ್ತದೆ. ಹಾಗಿದ್ದಾಗ್ಯೂ ಕೂಡ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಫೇಲ್​ ಜೆಟ್​​ನಂಥ ಆಧುನಿಕ ಯುದ್ಧವಿಮಾನ ಸೇರಿ, ಅಂಥ ವಿವಿಧ ಯುದ್ಧೋಪಕರಣಗಳ ಖರೀದಿಗೆ ಆದ್ಯತೆ ನೀಡಿದೆ. ಸೇನೆಯ ಆಧುನೀಕರಣಕ್ಕಾಗಿ ಎಲ್ಲರೀತಿಯ ಪ್ರಯತ್ನ ಮಾಡುತ್ತಿದ್ದು, ಯಥೇಚ್ಛವಾಗಿ ಹಣ ಮೀಸಲಾಗಿಡುತ್ತಿದೆ. ಕಳೆದ ವರ್ಷ ಕೇಂದ್ರ ಸರ್ಕಾರ, ರಕ್ಷಣಾ ಬಂಡವಾಳ ವೆಚ್ಚವನ್ನು ಶೇ.19ಕ್ಕೆ ಏರಿಸಿದೆ. ಕಳೆದ 15ವರ್ಷಗಳಲ್ಲಿಯೇ ಅತ್ಯಂತ ಹೆಚ್ಚು ಇದು. ಅಲ್ಲಿಯವರೆಗೂ ಬಂಡವಾಳ ವೆಚ್ಚ ಶೇ.6-7ರಷ್ಟಿತ್ತು. ಅಂದರೆ ಸೇನೆಗೆ ಅಗತ್ಯವಿರುವ ಶಸ್ತ್ರಾಸ್ತ್ರ, ರಕ್ಷಣಾ ಉಪಕರಣಗಳನ್ನು ಖರೀದಿಸಲು ಶೇ.6-7ರಷ್ಟನ್ನು ಮಾತ್ರ ಖರ್ಚು ಮಾಡಬಹುದಿತ್ತು.

ಅಂದಹಾಗೆ, ಕಳೆದ ವರ್ಷ ಅಂದರೆ 2021-22ನೇ ಸಾಲಿನ ಕೇಂದ್ರ ಬಜೆಟ್​ನಲ್ಲಿ ರಕ್ಷಣಾ ಕ್ಷೇತ್ರಕ್ಕೆ ಒಟ್ಟು 4.78 ಲಕ್ಷ ಕೋಟಿ ರೂಪಾಯಿ ಹಂಚಿಕೆ ಮಾಡಲಾಗಿತ್ತು. ಅದರಲ್ಲಿ ಬಂಡವಾಳ ಆಯವ್ಯಯ ಅಂದರೆ ಭೂಸೇನೆ, ವಾಯುಪಡೆ ಮತ್ತು ನೌಕಾಪಡೆಗಳ ಆಧುನೀಕರಣ ಮತ್ತು ಅಗತ್ಯ ಉಪಕರಣಗಳ ಖರೀದಿಗೆ 1.35 ಲಕ್ಷ ಕೋಟಿ ರೂಪಾಯಿ ಮೀಸಲಿಡಲಾಗಿತ್ತು. ಅದರಲ್ಲಿ ಅತಿ ಹೆಚ್ಚು ಪಾಲು ಅಂದರೆ 53 ಸಾವಿರ ಕೋಟಿ ರೂಪಾಯಿ ಭಾರತೀಯ ವಾಯುಪಡೆಗೆ ಸಿಕ್ಕಿತ್ತು. ಭೂಸೇನೆಗೆ 36 ಸಾವಿರ ಕೋಟಿ ರೂ. ಮತ್ತು ನೌಕಾಪಡೆಗೆ 37 ಸಾವಿರ ಕೋಟಿ ರೂ.ಹಂಚಿಕೆಯಾಗಿತ್ತು.  ಅದಕ್ಕೆ ತಕ್ಕಂತೆ ಹಲವು ಅಭಿವೃದ್ಧಿಯನ್ನೂ ಸೇನೆಯಲ್ಲಿ ಮಾಡಲಾಗಿದೆ. ಅದರಲ್ಲೂ ರಕ್ಷಣಾ ಕ್ಷೇತ್ರದಲ್ಲಿ ಮೇಕ್​ ಇನ್ ಇಂಡಿಯಾ ತತ್ವಕ್ಕೆ ಅತ್ಯಂತ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

ಇದನ್ನೂ ಓದಿ: Opening Bell: ಬಜೆಟ್​ ಉತ್ತೇಜನದ ನಿರೀಕ್ಷೆಯಲ್ಲಿ ಸೆನ್ಸೆಕ್ಸ್ 700 ಪಾಯಿಂಟ್ಸ್​ಗೂ ಹೆಚ್ಚು ಏರಿಕೆ

Published On - 10:36 am, Tue, 1 February 22

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ