Sign In

By signing in or creating an account, you agree with Associated Broadcasting Company's Terms & Conditions and Privacy Policy.

Union Budget 2024: ರಾಮಮಂದಿರ ಪ್ರತಿಷ್ಠಾಪನೆಯಂದು ಮೋದಿ ನೀಡಿದ ಭರವಸೆ ಸಾಕಾರ: ಒಂದು ಕೋಟಿ ಹೊಸ ಮನೆಗಳಿಗೆ ಸೋಲಾರ್ ಸಂಪರ್ಕ

ಒಂದು ಕೋಟಿ ಹೊಸ ಮನೆಗಳಲ್ಲಿ ಸೋಲಾರ್ ಸಂಪರ್ಕ ಕಲ್ಪಿಸಲು ನೆರವು ನೀಡುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮಫ್ತ್​​​​ ಬಿಜ್ಲಿ ಯೋಜನೆಯ ಅಡಿಯಲ್ಲಿ ಇದನ್ನು ಅನುಷ್ಠಾನಗೊಳಿಸಿದ್ದಾರೆ. ಈ ಹಿಂದೆ ಪ್ರಧಾನಿ ಮೋದಿ ಅವರು ಅಯೋಧ್ಯೆಯಲ್ಲಿ ರಾಮಮಂದಿರ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಅದರ ನೆನಪಿಗಾಗಿ ಮೇಲ್ಛಾವಣಿ ಮೇಲೆ ಸೋಲಾರ್ ಸಂಪರ್ಕಕ್ಕೆ ನೆರವು ನೀಡುವ ಬಗ್ಗೆ ಹೇಳಿದ್ದರು. ಇದೀಗ ಅದನ್ನು ಈ ಬಜೆಟ್​​ನಲ್ಲಿ ಅನುಷ್ಠಾನಗೊಳಿಸುತ್ತಿದ್ದೇವೆ ಎಂದು ಹೇಳಿದ್ದಾರೆ. 

Union Budget 2024: ರಾಮಮಂದಿರ ಪ್ರತಿಷ್ಠಾಪನೆಯಂದು ಮೋದಿ ನೀಡಿದ ಭರವಸೆ ಸಾಕಾರ: ಒಂದು ಕೋಟಿ ಹೊಸ ಮನೆಗಳಿಗೆ ಸೋಲಾರ್ ಸಂಪರ್ಕ
Follow us
ಅಕ್ಷಯ್​ ಪಲ್ಲಮಜಲು​​
|

Updated on:Feb 01, 2024 | 2:06 PM

ದೆಹಲಿ, ಫೆ.1: ಒಂದು ಕೋಟಿ ಹೊಸ ಮನೆಗಳಲ್ಲಿ ಸೋಲಾರ್ ಸಂಪರ್ಕ ಕಲ್ಪಿಸಲು ನೆರವು ನೀಡುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮಫ್ತ್​​​​ ಬಿಜ್ಲಿ (Muft Bizli) ಯೋಜನೆಯ ಅಡಿಯಲ್ಲಿ ಇದನ್ನು ಅನುಷ್ಠಾನಗೊಳಿಸಿದ್ದಾರೆ. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಯೋಧ್ಯೆಯಲ್ಲಿ ರಾಮಮಂದಿರ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಅದರ ನೆನಪಿಗಾಗಿ ಮೇಲ್ಛಾವಣಿ ಮೇಲೆ ಸೋಲಾರ್ ಸಂಪರ್ಕಕ್ಕೆ ನೆರವು ನೀಡುವ ಬಗ್ಗೆ ಹೇಳಿದ್ದರು. ಇದೀಗ ಅದನ್ನು ಈ ಬಜೆಟ್​​ನಲ್ಲಿ ಅನುಷ್ಠಾನಗೊಳಿಸುತ್ತಿದ್ದೇವೆ. ಇದರಿಂದ ಆ ಕುಟುಂಬಗಳಿಗೆ 300 ಯೂನಿಟ್ ವಿದ್ಯುತ್ ಉಳಿತವಾಗಲಿದೆ. ಇದು ಒಂದು ರೀತಿಯಲ್ಲಿ ಅವರಿಗೆ ಉಚಿತ ವಿದ್ಯುತ್ ನೀಡಿಂದತೆ ಎಂದು ಹೇಳಿದ್ದಾರೆ. ಇನ್ನು ಈ ಯೋಜನೆಯಿಂದ ವಾರ್ಷಿಕವಾಗಿ 15,000 – 18,000 ರೂಪಾಯಿ ಉಳಿತಾಯ ಮಾಡಲು ಕುಟುಂಬಗಳಿಗೆ ನೆರವಾಗಲಿದೆ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ಅವರ ಮಹತ್ವದ ಯೋಜನೆಗಳಲ್ಲಿ ಇದು ಒಂದು ಎಂದು ಹೇಳಿದ್ದಾರೆ.

ತಮ್ಮ ಸರ್ಕಾರದ ಅಭಿವೃದ್ಧಿಯ ದೃಷ್ಟಿಕೋನವು ಎಲ್ಲಾ ಜಾತಿಗಳು ಮತ್ತು ಎಲ್ಲಾ ಹಂತಗಳಲ್ಲಿ ಜನರನ್ನು ಒಳಗೊಂಡಿದೆ. ಇನ್ನು 2047 ರ ವೇಳೆಗೆ ಭಾರತವನ್ನು ‘ವಿಕಾಸಿತ ಭಾರತ’ (ಅಭಿವೃದ್ಧಿ ಹೊಂದಿದ ಭಾರತ) ಮಾಡುವ ಗುರಿಯಿದೆ ಎಂದು ಹೇಳಿದರು. ಈ ದೃಷ್ಟಿಗೆ ಅನುಗುಣವಾಗಿ ಕೆಲವೊಂದು ಯೋಜನೆಗಳನ್ನು ತರಲಾಗಿದೆ. ಇದು ನಮ್ಮ ಪ್ರಧಾನ ಮಂತ್ರಿಗಳು ದೃಢವಾದ ನಂಬಿಕೆಯಾಗಿದೆ ಎಂದು ಹೇಳಿದರು. ನಾವು ನಾಲ್ಕು ಪ್ರಮುಖ ಜಾತಿಗಳ ಗರೀಬ್ (ಬಡವರು), ಮಹಿಳಾ (ಮಹಿಳೆಯರು), ಯುವ (ಯುವಕರು) ಮತ್ತು ಅನ್ನದಾತ (ರೈತರು)ನ್ನು ಕೇಂದ್ರೀಕರಿಸಿ ಯೋಜನೆಗಳನ್ನು ತಂದಿದ್ದೇವೆ. ಅವರ ಆಕಾಂಕ್ಷೆಗಳನ್ನು ಮತ್ತು ಅವರ ಕಲ್ಯಾಣಕ್ಕೆ ನಮ್ಮ ಹೆಚ್ಚಿನ ಆದ್ಯತೆಯಾಗಿದೆ.

ಇದನ್ನೂ ಓದಿ: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಇನ್ನೂ 2 ಕೋಟಿ ಮನೆ: ನಿರ್ಮಲಾ ಸೀತಾರಾಮನ್ ಘೋಷಣೆ

ಸೀತಾರಾಮನ್ ಅವರು 2024-25ರ ಆರ್ಥಿಕ ವರ್ಷಕ್ಕೆ ಮಧ್ಯಂತರ ಬಜೆಟ್ ಮಂಡಿಸುತ್ತಿದ್ದು, ಇದು ಅವರ ಆರನೇ ಬಜೆಟ್ ಆಗಿದ್ದು. ಇನ್ನು ಈ ಮಧ್ಯಂತಾರ ಬಜೆಟ್​​​​​ ಲೋಕಸಭೆ ಚುನಾವಣೆಯನ್ನು ಮುಂದಿಟ್ಟುಕೊಂಡು ಮಂಡಿಲಿಸಲಾಗಿದೆ. ಇನ್ನು ಲೋಕಸಭೆ ಚುನಾವಣೆ ಘೋಷಣೆ ಆಗುವ ಕಾರಣ ಈ ಬಜೆಟ್​​​ಗಾಗಿ ಮಾರ್ಚ್​​​ 31ರವರೆಗೆ ಖರ್ಚು ಮಾಡಬಹುದು.

ಇತ್ತಷ್ಟು ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:37 pm, Thu, 1 February 24

ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್