AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 23ಕ್ಕೆ ಆರ್ಥಿಕ ಸಮೀಕ್ಷೆ, ಜುಲೈ 24ಕ್ಕೆ ಬಜೆಟ್ ಮಂಡನೆ ಸಾಧ್ಯತೆ: ವರದಿ

Union Budget 2024 date: ಮೋದಿ 3.0 ಸರ್ಕಾರದ ಮೊದಲ ಬಜೆಟ್ ಜುಲೈ 24ರಂದು ಮಂಡನೆ ಆಗಬಹುದು ಎಂದು ವರದಿಗಳು ಹೇಳುತ್ತಿವೆ. ಜುಲೈ 22ಕ್ಕೆ ಮುಂಗಾರು ಅಧಿವೇಶನ ಶುರುವಾಗಲಿದೆ. ಜುಲೈ 23ಕ್ಕೆ ಆರ್ಥಿಕ ಸಮೀಕ್ಷಾ ವರದಿ ಪ್ರಸ್ತುತಪಡಿಸಲಾಗುತ್ತದೆ. 24ಕ್ಕೆ ಬಜೆಟ್ ಇರುತ್ತದೆ. ರೈತರು, ಬಡವರು, ಯುವಜನರು ಮತ್ತು ಮಹಿಳೆಯರು ಈ ನಾಲ್ಕು ವರ್ಗಗಳಿಗೆ ಸರ್ಕಾರದ ನೀತಿಯಲ್ಲಿ ಆದ್ಯತೆ ಇರಲಿದೆ ಎನ್ನುವ ಸುಳಿವನ್ನು ರಾಷ್ಟ್ರಪತಿಗಳು ನೀಡಿದ್ದಾರೆ.

ಜುಲೈ 23ಕ್ಕೆ ಆರ್ಥಿಕ ಸಮೀಕ್ಷೆ, ಜುಲೈ 24ಕ್ಕೆ ಬಜೆಟ್ ಮಂಡನೆ ಸಾಧ್ಯತೆ: ವರದಿ
ನಿರ್ಮಲಾ ಸೀತಾರಾಮನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 03, 2024 | 11:44 AM

Share

ನವದೆಹಲಿ, ಜುಲೈ 3: ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಾಗೆಲ್ಲಾ ಹೊಸ ಮಟ್ಟದ ನಿರೀಕ್ಷೆಗಳು ಹುಟ್ಟುತ್ತವೆ. ಅಂತೆಯೇ ಮೋದಿ 3.0 ಸರ್ಕಾರದ ಮೊದಲ ಬಜೆಟ್ ಬಗ್ಗೆ ಬಹಳಷ್ಟು ನಿರೀಕ್ಷೆಗಳಿವೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈಗಾಗಲೇ ಬಜೆಟ್ ತಯಾರಿಯಲ್ಲಿ ಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಜುಲೈ ಕೊನೆಯ ವಾರದಲ್ಲಿ ಬಜೆಟ್ ಮಂಡನೆ ಆಗಬಹುದು. ಜುಲೈ 22ರಂದು ನಡೆಯಬಹುದು ಎಂದು ಹೇಳಲಾಗುತ್ತಿತ್ತು. ಆದರೆ, ಫೈನಾನ್ಷಿಯಲ್ ಎಕ್ಸ್​ಪ್ರೆಸ್ ಪತ್ರಿಕೆಯ ವರದಿ ಪ್ರಕಾರ ಜುಲೈ 24ರಂದು ಸಂಸತ್ತಿನಲ್ಲಿ ಪೂರ್ಣ ಪ್ರಮಾಣದ ಮುಂಗಡ ಪತ್ರ (Union Budget 2024) ಮಂಡನೆ ಆಗಬಹುದು ಎನ್ನಲಾಗಿದೆ. ಮೂಲಗಳನ್ನು ಉಲ್ಲೇಖಿಸಿ ಪತ್ರಿಕೆ ಈ ಅಂದಾಜು ಮಾಡಿದೆ.

ಈ ವರದಿ ಪ್ರಕಾರ ಜುಲೈ 22ಕ್ಕೆ ಬಜೆಟ್ ಅಧಿವೇಶನ ಆರಂಭವಾಗಬಹುದು. ಜುಲೈ 23ಕ್ಕೆ ಆರ್ಥಿಕ ಸಮೀಕ್ಷಾ ವರದಿ ಬಿಡುಗಡೆ ಆಗಬಹುದು. ಜುಲೈ 24ಕ್ಕೆ ಯೂನಿಯನ್ ಬಜೆಟ್ ಅನ್ನು ಪ್ರಸ್ತುತಪಡಿಸಬಹುದು ಎನ್ನಲಾಗಿದೆ. ಶೀಘ್ರದಲ್ಲೇ ದಿನಾಂಕ ಪ್ರಕಟಿಸುವ ನಿರೀಕ್ಷೆ ಇದೆ.

18ನೇ ಲೋಕಸಭೆಯ ಚೊಚ್ಚಲ ಅಧಿವೇಶನ ನಿನ್ನೆ (ಜುಲೈ 2) ಮುಕ್ತಾಯಗೊಂಡಿದೆ. ವಾಡಿಕೆ ಪ್ರಕಾರ ಎರಡನೇ ಸೆಷನ್ ಅನ್ನು 15 ದಿನಗಳ ಅಂತರದಲ್ಲಿ ಮಾಡಲಾಗುತ್ತದೆ. ಅದರಂತೆ ಜುಲೈ 18ಕ್ಕೆ ಮುಂಗಾರು ಅಧಿವೇಶನ ಶುರುವಾಗಬೇಕಾಗುತ್ತದೆ. ಅದೇ ರೀತಿ ಆದರೆ ಜುಲೈ 20, ಶನಿವಾರ ಬಜೆಟ್ ಮಂಡನೆ ಮಾಡಬೇಕಾಗುತ್ತದೆ. ಆದರೆ, ಈ ಬಾರಿ ಅಧಿವೇಶನ ತುಸು ವಿಳಂಬವಾಗಿ ಶುರುವಾಗಬಹುದು. ಜುಲೈ 22ಕ್ಕೆ ಅಧಿವೇಶನ ಆರಂಭವಾಗಿ ಜುಲೈ 24, ಬುಧವಾರದಂದು ಬಜೆಟ್ ಮಂಡನೆ ಆಗಬಹುದು ಎನ್ನುತ್ತಿದೆ ಈ ಎಫ್​ಇ ವರದಿ.

ಇದನ್ನೂ ಓದಿ: ಸೆಕ್ಷನ್ 80ಸಿ ಅಡಿಯಲ್ಲಿ ಡಿಡಕ್ಷನ್ ಮಿತಿ ಹೆಚ್ಚಿಸಲಿ: ಬಜೆಟ್​ನಿಂದ ಆದಾಯ ತೆರಿಗೆ ಪಾವತಿದಾರರಿಂದ ಅಪೇಕ್ಷೆ

ಬಡವರು, ಯುವಜನರು, ಮಹಿಳೆಯರು, ರೈತರಿಗೆ ಆದ್ಯತೆ

ಸಂಸತ್ತಿನಲ್ಲಿ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಬಾರಿಯ ಬಜೆಟ್​ನಲ್ಲಿ ಬಡವರು, ಯುವಜನರು, ಮಹಿಳೆಯರು, ರೈತರಿಗೆ ಆದ್ಯತೆ ಸಿಗಲಿದೆ. ದೂರಗಾಮಿ ಆರ್ಥಿಕ ಮತ್ತು ಸಾಮಾಜಿಕ ಸುಧಾರಣೆಗಳು ಅನಾವರಣಗೊಳ್ಳಲಿವೆ ಎಂದು ಪೂರ್ವನೋಟ ನೀಡಿದ್ದರು. ಹಾಗೆಯೇ, ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ನಿಟ್ಟಿನಲ್ಲಿ ಹಲವು ಐತಿಹಾಸಿಕ ಹೆಜ್ಜೆಗಳನ್ನು ಬಜೆಟ್​ನಲ್ಲಿ ಕೈಗೊಳ್ಳಲಾಗುವುದು ಎಂದೂ ಅವರು ಹೇಳಿದ್ದಾರೆ.

ಇನ್ನಷ್ಟು ಬಜೆಟ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್