AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GDP, FDI: ಮಧ್ಯಂತರ ಬಜೆಟ್: ಜಿಡಿಪಿ, ಎಫ್​ಡಿಐಗೆ ಹೊಸ ವ್ಯಾಖ್ಯಾನ ಕೊಟ್ಟ ನಿರ್ಮಲಾ ಸೀತಾರಾಮನ್

Nirmala Sitharaman Union budget Speech: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ಜಿಡಿಪಿ ಮತ್ತು ಎಫ್​ಡಿಐ ಬಗ್ಗೆ ತಮ್ಮದೇ ವ್ಯಾಖ್ಯಾನ ನೀಡಿದರು. ಜಿಡಿಪಿ ಎಂದರೆ ಗವರ್ನೆನ್ಸ್, ಡೆವಲಪ್ಮೆಂಟ್ ಮತ್ತು ಪರ್ಫಾರ್ಮೆನ್ಸ್ ಎಂದು ಅವರು ಬಣ್ಣಿಸಿದರು. ಇನ್ನು ಎಫ್​​ಡಿಐ ಅನ್ನು ಫಸ್ಟ್ ಡೆವಲಪ್ ಇಂಡಿಯಾ ಎಂದು ನಿರ್ಮಲಾ ಸೀತಾರಾಮನ್ ಕರೆದಿದ್ದಾರೆ.

GDP, FDI: ಮಧ್ಯಂತರ ಬಜೆಟ್: ಜಿಡಿಪಿ, ಎಫ್​ಡಿಐಗೆ ಹೊಸ ವ್ಯಾಖ್ಯಾನ ಕೊಟ್ಟ ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 01, 2024 | 3:24 PM

Share

ನವದೆಹಲಿ, ಫೆಬ್ರುವರಿ 1: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ತಮ್ಮ ಒಂದು ಗಂಟೆಯ ಬಜೆಟ್ ಭಾಷಣದಲ್ಲಿ ಹಲವು ಅಭಿವೃದ್ದಿ ಸಂಗತಿಗಳನ್ನು ಪ್ರಸ್ತಾಪಿಸಿ ವಿವರಿಸಿದ್ದಾರೆ. ಅಭಿವೃದ್ದಿ, ಕಾರ್ಯಸಾಧನೆ ಮತ್ತು ಆಡಳಿತದ ಬಗ್ಗೆ ಸರ್ಕಾರ ಸಮಾನ ಆದ್ಯತೆ ಕೊಡುತ್ತದೆ ಎಂದು ಹೇಳಿದ ಅವರು, ಬಡವರು, ಯುವ ಸಮುದಾಯದವರು, ಕೃಷಿಕರು ಮತ್ತು ಮಹಿಳೆಯರು (4 castes) ಇವರನ್ನು ನಾಲ್ಕು ಜಾತಿಗಳೆಂದು ಅವರು ವ್ಯಾಖ್ಯಾನಿಸಿ, ಈ ಜಾತಿಗಳನ್ನು ಮೇಲೆ ತರುವುದಕ್ಕೆ ಸರ್ಕಾರ ಕಟಿಬದ್ಧವಾಗಿದೆ ಎಂಬುದನ್ನು ತಿಳಿಸಿದರು.

ಇದೇ ವೇಳೆ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಶೈಲಿಯಲ್ಲಿ ಎಫ್​ಡಿಐ ಮತ್ತು ಜಿಡಿಪಿ ಬಗ್ಗೆ ತಮ್ಮದೇ ವ್ಯಾಖ್ಯಾನ ನೀಡಿ ಗಮನ ಹರಿಸಿದರು.

ಜಿಡಿಪಿ (GDP) ಎಂದರೆ ಗ್ರಾಸ್ ಡೊಮೆಸ್ಟಿಕ್ ಪ್ರಾಡಕ್ಟ್. ಒಟ್ಟು ಆಂತರಿಕ ಉತ್ಪನ್ನ. ದೇಶದಲ್ಲಿ ಆಗುವ ಒಟ್ಟು ಉತ್ಪಾದನೆಯೇ ಜಿಡಿಪಿ ಆಗುತ್ತದೆ. ಆದರೆ, ನಿರ್ಮಲಾ ಸೀತಾರಾಮನ್ ಅವರು ಜಿಡಿಪಿಯನ್ನು ಗವರ್ನೆನ್ಸ್, ಡೆವಲಪ್ಮೆಂಟ್ ಮತ್ತು ಪರ್ಫಾರ್ಮೆನ್ಸ್ ಎಂದು ಬಣ್ಣಿಸಿದರು.

ಇದನ್ನೂ ಓದಿ: ಬಜೆಟ್ 2024: ಸರ್ಕಾರದ ಆದಾಯ ಮತ್ತು ಖರ್ಚು ಹೇಗೆ? ಯಾವುದಕ್ಕೆ ಎಷ್ಟು ಹಣ ವಿನಿಯೋಗ? ಇಲ್ಲಿದೆ ಡೀಟೇಲ್ಸ್

‘ಈ ಸಮಗ್ರ ಜಿಡಿಪಿ ಬಗ್ಗೆ ಸರ್ಕಾರ ಹೆಚ್ಚು ಗಮನ ಕೊಡುತ್ತದೆ. ನಮ್ಮ ಸರ್ಕಾರ ಪಾರದರ್ಶಕವಾದ, ಜನಮುಖಿಯಾದ ಮತ್ತು ವಿಶ್ವಾಸ ಆಧಾರಿತವಾದ ಆಡಳಿತದವನ್ನು ನೀಡಿದೆ. ನಾಗರಿಕರಿಗೆ ಆದ್ಯತೆ, ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ ತತ್ವದಲ್ಲಿ ಸರ್ಕಾರ ನಡೆದಿದೆ,’ ಎಂದು ತಮ್ಮ ಹೊಸ ಜಿಡಿಪಿ ವ್ಯಾಖ್ಯಾನಕ್ಕೆ ಅವರು ವಿವರಣೆ ನೀಡಿದ್ದಾರೆ.

ಎಫ್​ಡಿಐಗೆ ಹೊಸ ವ್ಯಾಖ್ಯಾನ

ಎಫ್​ಡಿಐ (FDI) ಎಂದರೆ ಫಾರೀನ್ ಡೈರೆಕ್ಟ್ ಇನ್ವೆಸ್ಟ್​ಮೆಂಟ್. ವಿದೇಶೀ ನೇರ ಬಂಡವಾಳ ಹೂಡಿಕೆ. ಭಾರತದಲ್ಲಿ ಹೊರದೇಶಗಳಿಂದ ಹರಿದುಬರುವ ನೇರ ಹೂಡಿಕೆಯೇ ಎಫ್​ಡಿಐ. ಆದರೆ, ನಿರ್ಮಲಾ ಸೀತಾರಾಮನ್ ಈ ಪದಕ್ಕೆ ಫರ್ಸ್ ಡೆವಲಪ್ ಇಂಡಿಯಾ ಎಂದು ವ್ಯಾಖ್ಯಾನಿಸಿದ್ದಾರೆ. ಭಾರತದ ಅಭಿವೃದ್ದಿಗೆ ಮೊದಲ ಆದ್ಯತೆ ಎಂಬುದು ಇವರ ವಿವರಣೆ.

ಇದನ್ನೂ ಓದಿ: ಏನಿದು ನಿರ್ಮಲಾ ಉಲ್ಲೇಖಿಸಿದ ಲಖ್​ಪತಿ ದೀದಿ ಯೋಜನೆ: ಇಲ್ಲಿದೆ ವಿವರ

‘2014-23ರವರೆಗೆ ಭಾರತಕ್ಕೆ ಹರಿದುಬಂದ ಎಫ್​ಡಿಐ ಒಳಹರಿವು 596 ಬಿಲಿಯನ್ ಡಾಲರ್. 2005ರಿಂದ 2014ರವರೆಗೆ ಬಂದ ಹೂಡಿಕೆಗಿಂತ ಎರಡು ಪಟ್ಟು ಹೆಚ್ಚು. ಈ ನಿರಂತರ ವಿದೇಶೀ ಹೂಡಿಕೆಗೆ ಉತ್ತೇಜನ ನೀಡಲು ಫಸ್ಟ್ ಡೆವಲಪ್ ಇಂಡಿಯಾ ಆಶಯದಲ್ಲಿ ನಮ್ಮ ವಿದೇಶೀ ಪಾಲುದಾರರೊಂದಿಗೆ ದ್ವಿಪಕ್ಷೀಯ ಹೂಡಿಕೆ ಒಪ್ಪಂದಗಳನ್ನು ಅವಲೋಕಿಸುತ್ತಿದ್ದೆವೆ,’ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ಇನ್ನಷ್ಟು ಬಜೆಟ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ