AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒ ಇದ್ದಲ್ಲೆಲ್ಲ ಸೊನ್ನೆ ಹಾಕಿದ ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿ; ಕೇಂದ್ರ ಬಜೆಟ್​​ಗೆ ನೀಡಿದ ಪ್ರತಿಕ್ರಿಯೆ ಇದು !

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಸುಮಾರು 39.45 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್​ನ್ನು  ಮಂಡನೆ ಮಾಡಿದ್ದಾರೆ. ಬಹುತೇಕ ಎಲ್ಲ ಕ್ಷೇತ್ರಗಳಿಗೂ ಅನುದಾನ ನೀಡಲಾಗಿದ್ದರೂ, ಪ್ರತಿಪಕ್ಷ ಕಾಂಗ್ರೆಸ್​ ಇದೊಂದು ಮಧ್ಯಮ ವರ್ಗ ವಿರೋಧಿ ಬಜೆಟ್​ ಎಂದು ವಿವರಿಸಿದೆ.

ಒ ಇದ್ದಲ್ಲೆಲ್ಲ ಸೊನ್ನೆ  ಹಾಕಿದ ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿ; ಕೇಂದ್ರ ಬಜೆಟ್​​ಗೆ ನೀಡಿದ ಪ್ರತಿಕ್ರಿಯೆ ಇದು !
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ
TV9 Web
| Edited By: |

Updated on:Feb 01, 2022 | 4:42 PM

Share

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (FM Nirmala Sitharaman)​ ಇಂದು ಮಂಡಿಸಿದ ಬಜೆಟ್​ ಶೂನ್ಯ ಲೆಕ್ಕದ ಬಜೆಟ್​ ಎಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಇಂದು ಬಜೆಟ್​ ಹೆಸರಲ್ಲಿ ಮಾಡಲಾದ ಘೋಷಣೆಯಲ್ಲಿ  ವೇತನ ವರ್ಗಕ್ಕೆ, ಮಧ್ಯಮ ವರ್ಗಕ್ಕೆ, ಬಡವರು ಮತ್ತು ಸೌಲಭ್ಯ ವಂಚಿತರಿಗೆ, ಯುವಕರು, ರೈತರಿಗೆ, ಎಂಎಸ್​ಎಂಇಗಳಿಗೆ ಏನೂ ಇಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, M0di G0vernment’s Zer0 Sum Budget! ಎಂದು ಹೇಳಿ, ಅದರಡಿಯಲ್ಲಿ Nothing for (ಏನೂ ಇಲ್ಲ) Salaried class (ವೇತನ ವರ್ಗ), Middle class (ಮಧ್ಯಮ ವರ್ಗ), The poor & deprived (ಬಡವರು ಮತ್ತು ಸೌಕರ್ಯ ವಂಚಿತರು), Youth (ಯುವಜನರು), Farmers (ರೈತರು) ಮತ್ತು MSMEs (ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು) ಎಂದು ಬರೆದುಕೊಂಡಿದ್ದಾರೆ. ಇದರಲ್ಲಿ G0vernment’s Zer0 Sum Budget! ಎಂಬ ವಾಕ್ಯದಲ್ಲಿ ಇಂಗ್ಲಿಷ್​ ವರ್ಣಮಾಲೆಯ ಒ ಅಕ್ಷರ ಎಲ್ಲೆಲ್ಲಿ ಬರಬೇಕಿತ್ತೋ, ಅಲ್ಲೆಲ್ಲ ಶೂನ್ಯವನ್ನು ಹಾಕಿ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹಿಂದಿಯಲ್ಲಿ ಟ್ವೀಟ್​ ಮಾಡಿ, ಬಜೆಟ್​ನ್ನು ಟೀಕಿಸಿದ್ದಾರೆ. ‘ರೈತರ ಆದಾಯವನ್ನು ದ್ವಿಗುಣಗೊಳಿಸುವುದಿಲ್ಲ, ಮಧ್ಯಮ ವರ್ಗದವರಿಗೆ ತೆರಿಗೆ ವಿನಾಯಿತಿ ಇಲ್ಲ, ಹಣದುಬ್ಬರ (ಬೆಲೆ ಏರಿಕೆ) ಇಳಿಕೆಯಿಲ್ಲ, ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ಯಾವುದೇ ಕ್ರಮವೂ ಇಲ್ಲ,  ಯುವಕರಿಗೆ ಉದ್ಯೋಗ ಅವಕಾಶ ನೀಡಲಾಗಿಲ್ಲ. ಈ ಬಾರಿಯೂ ಹಳೇ ಸುಳ್ಳುಗಳನ್ನೇ ಹೇಳಲಾಗಿದೆ ಮತ್ತು ಸಬ್ಸಿಡಿ ಮೇಲೆ ಪ್ರಹಾರ ನಡೆಸಲಾಗಿದೆ. ಇದು ಮೋದಿ ಸರ್ಕಾರದ ಈ ಬಾರಿಯ ಬಜೆಟ್ ಸಾರಾಂಶ ಎಂದು ವ್ಯಂಗ್ಯವಾಡಿದ್ದಾರೆ.

ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಸುಮಾರು 39.45 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್​ನ್ನು  ಮಂಡನೆ ಮಾಡಿದ್ದಾರೆ. ಬಹುತೇಕ ಎಲ್ಲ ಕ್ಷೇತ್ರಗಳಿಗೂ ಅನುದಾನ ನೀಡಲಾಗಿದ್ದರೂ, ಪ್ರತಿಪಕ್ಷ ಕಾಂಗ್ರೆಸ್​ ಇದೊಂದು ಮಧ್ಯಮ ವರ್ಗ ವಿರೋಧಿ ಬಜೆಟ್​ ಎಂದು ವಿವರಿಸಿದೆ.  ಕೇಂದ್ರ ಸರ್ಕಾರ ಮಧ್ಯಮ ವರ್ಗದವರಿಗೆ ನಂಬಿಕೆ ದ್ರೋಹ ಮಾಡಿದೆ. ದೇಶದ ವೇತನ ಮತ್ತು ಮಧ್ಯಮ ವರ್ಗಕ್ಕೆ ನಿರಾಸೆಯಾಗಿದೆ. ಸಾಂಕ್ರಾಮಿಕದಿಂದ ತುಂಬ ಹೊಡೆತಕ್ಕೊಳಗಾದ ಈ ವಿಭಾಗದವರಿಗೆ ಏನೂ ನೀಡಿಲ್ಲ.  ನೇರ ತೆರಿಗೆ ಕ್ರಮಗಳಲ್ಲಿ ಕೂಡ ಅವರಿಗೆ ಪ್ರಧಾನಿ ಮತ್ತು ಹಣಕಾಸು ಸಚಿವರು ನಿರಾಸೆ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಣದೀಪ್​ ಸುರ್ಜೇವಾಲಾ ಹೇಳಿದ್ದಾರೆ.

ಇದನ್ನೂ ಓದಿ: ಸಾಂಕ್ರಾಮಿಕ ಸಮಯದಲ್ಲಿ ತೆರಿಗೆಯನ್ನು ಹೆಚ್ಚಿಸಲು ಬಯಸಲಿಲ್ಲ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

Published On - 4:37 pm, Tue, 1 February 22

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!