Sign In

By signing in or creating an account, you agree with Associated Broadcasting Company's Terms & Conditions and Privacy Policy.

Income Tax Slabs: ಆದಾಯ ತೆರಿಗೆ ಸ್ಲ್ಯಾಬ್​ ಬದಲಾವಣೆ; ಗೊಂದಲವಿದೆಯಾ? ಇಲ್ಲಿದೆ ಹಳೆದು, ಹೊಸದರ ನಡುವಣ ಪೂರ್ಣ ವ್ಯತ್ಯಾಸ

Old vs new current income tax slabs; ಹಳೆಯ ಆದಾಯ ತೆರಿಗೆ ಸ್ಲ್ಯಾಬ್ ಮತ್ತು ಹೊಸದರ ನಡುವಣ ವ್ಯತ್ಯಾಸವೇನು? ಇಲ್ಲಿದೆ ಪೂರ್ತಿ ವಿವರ.

Income Tax Slabs: ಆದಾಯ ತೆರಿಗೆ ಸ್ಲ್ಯಾಬ್​ ಬದಲಾವಣೆ; ಗೊಂದಲವಿದೆಯಾ? ಇಲ್ಲಿದೆ ಹಳೆದು, ಹೊಸದರ ನಡುವಣ ಪೂರ್ಣ ವ್ಯತ್ಯಾಸ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:Feb 02, 2023 | 9:53 AM

ಹೊಸ ತೆರಿಗೆ ವಿಧಾನದ ಅಡಿಯಲ್ಲಿ ವೈಯಕ್ತಿಕ ಆದಾಯ ತೆರಿಗೆ (Income Tax) ವಿನಾಯಿತಿ ಮಿತಿಯನ್ನು 7 ಲಕ್ಷ ರೂ.ಗೆ ವಿಸ್ತರಣೆ ಮಾಡಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಬಜೆಟ್​​ನಲ್ಲಿ (Budget 2023) ಘೋಷಣೆ ಮಾಡಿದ್ದಾರೆ. ಹೊಸ ತೆರಿಗೆ ಪದ್ಧತಿಯೇ ಇನ್ನು ಮುಂದೆ ಡಿಫಾಲ್ಟ್ ತೆರಿಗೆ ಪದ್ಧತಿ ಆಗಿರುತ್ತದೆ. ತೆರಿಗೆ ಸ್ಲ್ಯಾಬ್​ಗಳನ್ನು 6 ಹಂತಗಳಿಂದ 5 ಹಂತಗಳಿಗೆ ಕಡಿಮೆ ಮಾಡಲಾಗಿದೆ ಎಂದು ಬಜೆಟ್​ನಲ್ಲಿ ತಿಳಿಸಲಾಗಿದೆ. ಆದಾಯ ತೆರಿಗೆ ತೆರಿಗೆ ಸ್ಲ್ಯಾಬ್​ಗಳನ್ನು ಐದಕ್ಕೆ ಇಳಿಕೆ ಮಾಡುತ್ತಿದ್ದು, 3 ಲಕ್ಷ ರೂ.ನಿಂದ ಆರಂಭವಾಗಲಿದೆ ಎಂದು ಹಣಕಾಸು ಸಚಿವರು ತಿಳಿಸಿದ್ದಾರೆ. ಮಧ್ಯಮ ವರ್ಗದ ವೇತನದಾರ ವರ್ಗಕ್ಕೆ ರಿಲೀಫ್ ನೀಡಲು ಈ ಕ್ರಮ ಕೈಗೊಳ್ಳಲಾಗಿದೆ ಎಂದೂ ಅವರು ತಿಳಿಸಿದ್ದಾರೆ. ಹಾಗಿದ್ದರೆ ಹಳೆಯ ಆದಾಯ ತೆರಿಗೆ ಸ್ಲ್ಯಾಬ್ ಮತ್ತು ಹೊಸದರ ನಡುವಣ ವ್ಯತ್ಯಾಸವೇನು? ಇಲ್ಲಿದೆ ಮಾಹಿತಿ.

ಹೇಗಿರುತ್ತೆ ಆದಾಯ ತೆರಿಗೆ ಹೊಸ ಸ್ಲ್ಯಾಬ್​?

  • 3 ಲಕ್ಷ ರೂ.ವರೆಗಿನ ಆದಾಯಕ್ಕೆ ತೆರಿಗೆ ಇರುವುದಿಲ್ಲ.
  • 3-6 ಲಕ್ಷ ರೂ. ವರೆಗಿನ ಆದಾಯಕ್ಕೆ ಶೇ 5ರ ತೆರಿಗೆ ಇರುತ್ತದೆ.
  • 6-9 ಲಕ್ಷ ರೂ. ವರೆಗಿನ ಆದಾಯಕ್ಕೆ ಶೇ 10ರ ತೆರಿಗೆ ಪಾವತಿಸಬೇಕಾಗುತ್ತದೆ.
  • 9-12 ಲಕ್ಷ ರೂ.ವರೆಗಿನ ಆದಾಯಕ್ಕೆ ಶೇ 15ರ ತೆರಿಗೆ ಪಾವತಿಸಬೇಕಾಗುತ್ತದೆ.
  • 12-15 ಲಕ್ಷ ರೂ.ವರೆಗಿನ ಆದಾಯಕ್ಕೆ ಶೇ 20ರ ತೆರಿಗೆ ಪಾವತಿಸಬೇಕಾಗುತ್ತದೆ.
  • 15 ಲಕ್ಷ ರೂ.ಗಿಂತ ಮೇಲ್ಪಟ್ಟ ಆದಾಯಕ್ಕೆ ಶೇ 30ರ ತೆರಿಗೆ ವಿಧಿಲಾಗುತ್ತದೆ.

ಇದನ್ನೂ ಓದಿ: ಸಿಹಿ ಸುದ್ದಿ; ಆದಾಯ ತೆರಿಗೆ ವಿನಾಯಿತಿ ಮಿತಿ 7 ಲಕ್ಷ ರೂ.ಗೆ ವಿಸ್ತರಣೆ

ಹೇಗಿತ್ತು ಆದಾಯ ತೆರಿಗೆ ಹಳೆಯ ಸ್ಲ್ಯಾಬ್​?

  • 2.5 ಲಕ್ಷ ರೂ. ವರೆಗಿನ ಆದಾಯಕ್ಕೆ ತೆರಿಗೆ ಇಲ್ಲ.
  • 2.5 ಲಕ್ಷ ರೂ.ನಿಂದ 5 ಲಕ್ಷ ರೂ.ವರೆಗಿನ ಆದಾಯಕ್ಕೆ ಶೇ 5ರ ತೆರಿಗೆ ಪಾವತಿಸಬೇಕು.
  • 5 ಲಕ್ಷ ರೂ.ನಿಂದ 7.5 ಲಕ್ಷ ರೂ.ವರೆಗಿನ ಆದಾಯಕ್ಕೆ ಶೇ 15ರ ತೆರಿಗೆ ಪಾವತಿಸಬೇಕು.
  • 7.5 ಲಕ್ಷ ರೂ.ನಿಂದ 10 ಲಕ್ಷ ರೂ.ವರೆಗಿನ ಆದಾಯಕ್ಕೆ ಶೇ 20ರ ತೆರಿಗೆ ವಿಧಿಸಲಾಗುತ್ತದೆ.
  • 10 ಲಕ್ಷ ರೂ. ಮೇಲ್ಪಟ್ಟ ಆದಾಯಕ್ಕೆ ಶೇ 30ರ ವರೆಗೆ ತೆರಿಗೆ ವಿಧಿಸಲಾಗುತ್ತದೆ.

2014ರಲ್ಲಿ ವೈಯಕ್ತಿಕ ಆದಾಯ ತೆರಿಗೆ ಮಿತಿಯನ್ನು ಹೆಚ್ಚಿಸಲಾಗಿತ್ತು. ಆ ನಂತರ ಆದಾಯ ತೆರಿಗೆ ಸ್ಲ್ಯಾಬ್​ನಲ್ಲಿ ಬದಲಾವಣೆ ಮಾಡಿರಲಿಲ್ಲ. ಹೊಸ ತೆರಿಗೆ ಪದ್ಧತಿಯೇ ಇನ್ನು ಮುಂದೆ ಡಿಫಾಲ್ಟ್ ತೆರಿಗೆ ಪದ್ಧತಿ ಆಗಿರಲಿದೆ. ಆದಾಗ್ಯೂ ಹೊಸ ತೆರಿಗೆ ವಿಧಾನವು ತೆರಿಗೆದಾರರ ಆಯ್ಕೆಗೆ ಬಿಟ್ಟಿದ್ದಾಗಿದ್ದು, ಹಳೆಯ ಪದ್ಧತಿಯನ್ನು ಆಯ್ದುಕೊಳ್ಳಲೂ ಅವರಿಗೆ ಅವಕಾಶವಿದೆ ಎಂದು ಸರ್ಕಾರ ತಿಳಿಸಿದೆ. ಆದರೆ, 7 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ದೊರೆಯುವ ಹೊಸ ಪದ್ಧತಿ ಆಯ್ದುಕೊಂಡವರಿಗೆ ವಿನಾಯಿತಿ ಪಡೆಯಲು ಅವಕಾಶಗಳು ಕಡಿಮೆ ಇವೆ.

ಹೊಸ ತೆರಿಗೆ ಪದ್ಧತಿಯಲ್ಲಿ ಮೇಲ್ನೋಟಕ್ಕೆ ಹೆಚ್ಚು ಲಾಭವಿದೆ ಎಂದೆನಿಸಿದರೂ ವಿನಾಯಿತಿಗೆ ಒಳಪಡುವ ಉಳಿತಾಯದ ವ್ಯಾಪ್ತಿ ಕಡಿಮೆ ಇದೆ. ಗೃಹ ಸಾಲದ ಬಡ್ಡಿ, ಸೆಕ್ಷನ್ 80ಸಿ ವ್ಯಾಪ್ತಿಗೆ ಬರುವ ಪಿಪಿಎಫ್‌, ಎಲ್‌ಐಸಿಯಂತಹ ಉಳಿತಾಯ ಯೋಜನೆಗಳು, ಟ್ಯೂಷನ್‌ ಶುಲ್ಕವನ್ನು ವಿನಾಯಿತಿ ಅಡಿಯಲ್ಲಿ ತರಲು ಸಾಧ್ಯವಿಲ್ಲ ಎಂದು ಹಣಕಾಸು ತಜ್ಞರು ತಿಳಿಸಿದ್ದಾರೆ. ಆದರೆ, ಈ ಬಗ್ಗೆ ಬಜೆಟ್​ ಪ್ರತಿಯಲ್ಲಿ ಹೆಚ್ಚಿನ ವಿವರ ನೀಡಿಲ್ಲ.

ಬಜೆಟ್​ ಕುರಿತ ಮತ್ತಷ್ಟು ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:08 pm, Wed, 1 February 23

ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ