AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2022: ರಾಜ್ಯ ಬಜೆಟ್​ನಲ್ಲಿ ರೈತ ಶಕ್ತಿ ಯೋಜನೆ ಘೋಷಣೆ; ಡೀಸೆಲ್​ಗೆ ಸಹಾಯಧನಕ್ಕಾಗಿ 500 ಕೋಟಿ ರೂ. ಘೋಷಣೆ

ಕರ್ನಾಟಕ ಬಜೆಟ್ 2022ರಲ್ಲಿ ರೈತಶಕ್ತಿ ಯೋಜನೆ ಘೋಷಿಸಲಾಗಿದೆ. ಇದರ ಅಡಿಯಲ್ಲಿ ಡೀಸೆಲ್​ಗಾಗಿ ಎಕರೆಗೆ 250 ರೂಪಾಯಿಯಂತೆ ಗರಿಷ್ಠ 5 ಎಕರೆಗೆ ನೀಡಲಾಗುವುದು.

Karnataka Budget 2022: ರಾಜ್ಯ ಬಜೆಟ್​ನಲ್ಲಿ ರೈತ ಶಕ್ತಿ ಯೋಜನೆ ಘೋಷಣೆ; ಡೀಸೆಲ್​ಗೆ ಸಹಾಯಧನಕ್ಕಾಗಿ 500 ಕೋಟಿ ರೂ. ಘೋಷಣೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 04, 2022 | 5:34 PM

Share

ಮಾರ್ಚ್ 4ನೇ ತಾರೀಕಿನ ಶುಕ್ರವಾರದಂದು ತಮ್ಮ ಮೊದಲ ಬಜೆಟ್ (Karnataka Budget 2022) ಮಂಡಿಸಿದ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ರೈತ ಶಕ್ತಿ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಕೃಷಿ ಉತ್ಪಾದಕತೆ ಹೆಚ್ಚಿಸಲು ಯಂತ್ರೋಪಕರಣ ಬಳಕೆ ಪ್ರೋತ್ಸಾಹಿಸಲು ಪ್ರತಿ ಎಕರೆಗೆ 250 ರುಪಾಯಿಯಂತೆ ಗರಿಷ್ಠ 5 ಎಕರೆಗೆ ಡೀಸೆಲ್ ಸಹಾಯ ಧನವನ್ನು ನೇರ ನಗದು ವರ್ಗಾವಣೆ ಮೂಲಕ ರೈತರಿಗೆ ನೀಡಲಾಗುವುದು ಎಂದು ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ. ಈ ಯೋಜನೆಗಾಗಿ ಸರ್ಕಾರದಿಂದ ಬಜೆಟ್​ನಲ್ಲಿ 500 ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ.

ಇನ್ನು ಪ್ರತಿ ಟನ್ ದ್ವಿತಳಿ ರೇಷ್ಮೆಗೂಡಿಗೆ 10 ಸಾವಿರ ಪ್ರೋತ್ಸಾಹಧನ ಘೋಷಣೆ ಮಾಡಲಾಗಿದ್ದು, ದ್ವಿತಳಿ ರೇಷ್ಮೆ ಮೊಟ್ಟೆ ಉತ್ಪಾದಿಸಿ ಸಂಗ್ರಹಿಸಿಡಲು ಶೈತ್ಯಾಗಾರ ಸ್ಥಾಪನೆ ಮಾಡಲಾಗುವುದು. 15 ಕೋಟಿ ರೂಪಾಯಿ ವೆಚ್ಚದಲ್ಲಿ ರಾಜ್ಯದ 3 ಸ್ಥಳಗಳಲ್ಲಿ ಶೈತ್ಯಾಗಾರ ಸ್ಥಾಪನೆ ಮಾಡಲಾಗುವುದು. ಮದ್ದೂರು, ರಾಣೆಬೆನ್ನೂರು, ದೇವನಹಳ್ಳಿಯಲ್ಲಿ ಶೈತ್ಯಾಗಾರ ಸ್ಥಾಪಿಸಲಾಗುವುದು ಎಂದು ಬಜೆಟ್​ನಲ್ಲಿ ಘೋಷಿಸಲಾಗಿದೆ.

30 ಕೋಟಿ ರೂಪಾಯಿ ವೆಚ್ಚದಲ್ಲಿ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು. ಕಲಬುರಗಿ, ಹಾವೇರಿಯಲ್ಲಿ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಲಾಗಿದೆ.

ದ್ವಿತಳಿ ಬಿತ್ತನೆ ಗೂಡಿಗೆ ಕೆಜಿಗೆ ₹50 ಪ್ರೋತ್ಸಾಹಧನ ಹೆಚ್ಚಳ ಮಾಡಲಾಗಿದೆ. ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೂ ಪ್ರೋತ್ಸಾಹಧನ ನೀಡಲಾಗುವುದು. ಮಂಡ್ಯ ಜಿಲ್ಲೆ ಕೆ.ಆರ್. ಮಾರ್ಕೆಟ್‌ನಲ್ಲಿ ರೇಷ್ಮೆ ತರಬೇತಿ ಕೇಂದ್ರ ಸ್ಥಾಪಿಸಲಾಗುವುದು ಎಂದು ತಿಳಿಸಲಾಗಿದೆ.

ಇದನ್ನೂ ಓದಿ: Karnataka Budget Highlights: ಕರ್ನಾಟಕ ಬಜೆಟ್ 2022ರ ಗಾತ್ರ 2,65,720 ಕೋಟಿ ರೂ.; ಯಾವ ಕ್ಷೇತ್ರಕ್ಕೆ ಎಷ್ಟು ಹಣ ಇಲ್ಲಿದೆ ಮಾಹಿತಿ

Published On - 1:04 pm, Fri, 4 March 22

Follow Us
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ