AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2022: ರಾಜ್ಯ ಬಜೆಟ್​ನಲ್ಲಿ ರೈತ ಶಕ್ತಿ ಯೋಜನೆ ಘೋಷಣೆ; ಡೀಸೆಲ್​ಗೆ ಸಹಾಯಧನಕ್ಕಾಗಿ 500 ಕೋಟಿ ರೂ. ಘೋಷಣೆ

ಕರ್ನಾಟಕ ಬಜೆಟ್ 2022ರಲ್ಲಿ ರೈತಶಕ್ತಿ ಯೋಜನೆ ಘೋಷಿಸಲಾಗಿದೆ. ಇದರ ಅಡಿಯಲ್ಲಿ ಡೀಸೆಲ್​ಗಾಗಿ ಎಕರೆಗೆ 250 ರೂಪಾಯಿಯಂತೆ ಗರಿಷ್ಠ 5 ಎಕರೆಗೆ ನೀಡಲಾಗುವುದು.

Karnataka Budget 2022: ರಾಜ್ಯ ಬಜೆಟ್​ನಲ್ಲಿ ರೈತ ಶಕ್ತಿ ಯೋಜನೆ ಘೋಷಣೆ; ಡೀಸೆಲ್​ಗೆ ಸಹಾಯಧನಕ್ಕಾಗಿ 500 ಕೋಟಿ ರೂ. ಘೋಷಣೆ
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata|

Updated on:Mar 04, 2022 | 5:34 PM

Share

ಮಾರ್ಚ್ 4ನೇ ತಾರೀಕಿನ ಶುಕ್ರವಾರದಂದು ತಮ್ಮ ಮೊದಲ ಬಜೆಟ್ (Karnataka Budget 2022) ಮಂಡಿಸಿದ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ರೈತ ಶಕ್ತಿ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಕೃಷಿ ಉತ್ಪಾದಕತೆ ಹೆಚ್ಚಿಸಲು ಯಂತ್ರೋಪಕರಣ ಬಳಕೆ ಪ್ರೋತ್ಸಾಹಿಸಲು ಪ್ರತಿ ಎಕರೆಗೆ 250 ರುಪಾಯಿಯಂತೆ ಗರಿಷ್ಠ 5 ಎಕರೆಗೆ ಡೀಸೆಲ್ ಸಹಾಯ ಧನವನ್ನು ನೇರ ನಗದು ವರ್ಗಾವಣೆ ಮೂಲಕ ರೈತರಿಗೆ ನೀಡಲಾಗುವುದು ಎಂದು ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ. ಈ ಯೋಜನೆಗಾಗಿ ಸರ್ಕಾರದಿಂದ ಬಜೆಟ್​ನಲ್ಲಿ 500 ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ.

ಇನ್ನು ಪ್ರತಿ ಟನ್ ದ್ವಿತಳಿ ರೇಷ್ಮೆಗೂಡಿಗೆ 10 ಸಾವಿರ ಪ್ರೋತ್ಸಾಹಧನ ಘೋಷಣೆ ಮಾಡಲಾಗಿದ್ದು, ದ್ವಿತಳಿ ರೇಷ್ಮೆ ಮೊಟ್ಟೆ ಉತ್ಪಾದಿಸಿ ಸಂಗ್ರಹಿಸಿಡಲು ಶೈತ್ಯಾಗಾರ ಸ್ಥಾಪನೆ ಮಾಡಲಾಗುವುದು. 15 ಕೋಟಿ ರೂಪಾಯಿ ವೆಚ್ಚದಲ್ಲಿ ರಾಜ್ಯದ 3 ಸ್ಥಳಗಳಲ್ಲಿ ಶೈತ್ಯಾಗಾರ ಸ್ಥಾಪನೆ ಮಾಡಲಾಗುವುದು. ಮದ್ದೂರು, ರಾಣೆಬೆನ್ನೂರು, ದೇವನಹಳ್ಳಿಯಲ್ಲಿ ಶೈತ್ಯಾಗಾರ ಸ್ಥಾಪಿಸಲಾಗುವುದು ಎಂದು ಬಜೆಟ್​ನಲ್ಲಿ ಘೋಷಿಸಲಾಗಿದೆ.

30 ಕೋಟಿ ರೂಪಾಯಿ ವೆಚ್ಚದಲ್ಲಿ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು. ಕಲಬುರಗಿ, ಹಾವೇರಿಯಲ್ಲಿ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಲಾಗಿದೆ.

ದ್ವಿತಳಿ ಬಿತ್ತನೆ ಗೂಡಿಗೆ ಕೆಜಿಗೆ ₹50 ಪ್ರೋತ್ಸಾಹಧನ ಹೆಚ್ಚಳ ಮಾಡಲಾಗಿದೆ. ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೂ ಪ್ರೋತ್ಸಾಹಧನ ನೀಡಲಾಗುವುದು. ಮಂಡ್ಯ ಜಿಲ್ಲೆ ಕೆ.ಆರ್. ಮಾರ್ಕೆಟ್‌ನಲ್ಲಿ ರೇಷ್ಮೆ ತರಬೇತಿ ಕೇಂದ್ರ ಸ್ಥಾಪಿಸಲಾಗುವುದು ಎಂದು ತಿಳಿಸಲಾಗಿದೆ.

ಇದನ್ನೂ ಓದಿ: Karnataka Budget Highlights: ಕರ್ನಾಟಕ ಬಜೆಟ್ 2022ರ ಗಾತ್ರ 2,65,720 ಕೋಟಿ ರೂ.; ಯಾವ ಕ್ಷೇತ್ರಕ್ಕೆ ಎಷ್ಟು ಹಣ ಇಲ್ಲಿದೆ ಮಾಹಿತಿ

Published On - 1:04 pm, Fri, 4 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ