AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2022: ರಾಜ್ಯ ಬಜೆಟ್​ನಲ್ಲಿ ರೈತ ಶಕ್ತಿ ಯೋಜನೆ ಘೋಷಣೆ; ಡೀಸೆಲ್​ಗೆ ಸಹಾಯಧನಕ್ಕಾಗಿ 500 ಕೋಟಿ ರೂ. ಘೋಷಣೆ

ಕರ್ನಾಟಕ ಬಜೆಟ್ 2022ರಲ್ಲಿ ರೈತಶಕ್ತಿ ಯೋಜನೆ ಘೋಷಿಸಲಾಗಿದೆ. ಇದರ ಅಡಿಯಲ್ಲಿ ಡೀಸೆಲ್​ಗಾಗಿ ಎಕರೆಗೆ 250 ರೂಪಾಯಿಯಂತೆ ಗರಿಷ್ಠ 5 ಎಕರೆಗೆ ನೀಡಲಾಗುವುದು.

Karnataka Budget 2022: ರಾಜ್ಯ ಬಜೆಟ್​ನಲ್ಲಿ ರೈತ ಶಕ್ತಿ ಯೋಜನೆ ಘೋಷಣೆ; ಡೀಸೆಲ್​ಗೆ ಸಹಾಯಧನಕ್ಕಾಗಿ 500 ಕೋಟಿ ರೂ. ಘೋಷಣೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 04, 2022 | 5:34 PM

Share

ಮಾರ್ಚ್ 4ನೇ ತಾರೀಕಿನ ಶುಕ್ರವಾರದಂದು ತಮ್ಮ ಮೊದಲ ಬಜೆಟ್ (Karnataka Budget 2022) ಮಂಡಿಸಿದ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ರೈತ ಶಕ್ತಿ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಕೃಷಿ ಉತ್ಪಾದಕತೆ ಹೆಚ್ಚಿಸಲು ಯಂತ್ರೋಪಕರಣ ಬಳಕೆ ಪ್ರೋತ್ಸಾಹಿಸಲು ಪ್ರತಿ ಎಕರೆಗೆ 250 ರುಪಾಯಿಯಂತೆ ಗರಿಷ್ಠ 5 ಎಕರೆಗೆ ಡೀಸೆಲ್ ಸಹಾಯ ಧನವನ್ನು ನೇರ ನಗದು ವರ್ಗಾವಣೆ ಮೂಲಕ ರೈತರಿಗೆ ನೀಡಲಾಗುವುದು ಎಂದು ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ. ಈ ಯೋಜನೆಗಾಗಿ ಸರ್ಕಾರದಿಂದ ಬಜೆಟ್​ನಲ್ಲಿ 500 ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ.

ಇನ್ನು ಪ್ರತಿ ಟನ್ ದ್ವಿತಳಿ ರೇಷ್ಮೆಗೂಡಿಗೆ 10 ಸಾವಿರ ಪ್ರೋತ್ಸಾಹಧನ ಘೋಷಣೆ ಮಾಡಲಾಗಿದ್ದು, ದ್ವಿತಳಿ ರೇಷ್ಮೆ ಮೊಟ್ಟೆ ಉತ್ಪಾದಿಸಿ ಸಂಗ್ರಹಿಸಿಡಲು ಶೈತ್ಯಾಗಾರ ಸ್ಥಾಪನೆ ಮಾಡಲಾಗುವುದು. 15 ಕೋಟಿ ರೂಪಾಯಿ ವೆಚ್ಚದಲ್ಲಿ ರಾಜ್ಯದ 3 ಸ್ಥಳಗಳಲ್ಲಿ ಶೈತ್ಯಾಗಾರ ಸ್ಥಾಪನೆ ಮಾಡಲಾಗುವುದು. ಮದ್ದೂರು, ರಾಣೆಬೆನ್ನೂರು, ದೇವನಹಳ್ಳಿಯಲ್ಲಿ ಶೈತ್ಯಾಗಾರ ಸ್ಥಾಪಿಸಲಾಗುವುದು ಎಂದು ಬಜೆಟ್​ನಲ್ಲಿ ಘೋಷಿಸಲಾಗಿದೆ.

30 ಕೋಟಿ ರೂಪಾಯಿ ವೆಚ್ಚದಲ್ಲಿ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು. ಕಲಬುರಗಿ, ಹಾವೇರಿಯಲ್ಲಿ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಲಾಗಿದೆ.

ದ್ವಿತಳಿ ಬಿತ್ತನೆ ಗೂಡಿಗೆ ಕೆಜಿಗೆ ₹50 ಪ್ರೋತ್ಸಾಹಧನ ಹೆಚ್ಚಳ ಮಾಡಲಾಗಿದೆ. ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೂ ಪ್ರೋತ್ಸಾಹಧನ ನೀಡಲಾಗುವುದು. ಮಂಡ್ಯ ಜಿಲ್ಲೆ ಕೆ.ಆರ್. ಮಾರ್ಕೆಟ್‌ನಲ್ಲಿ ರೇಷ್ಮೆ ತರಬೇತಿ ಕೇಂದ್ರ ಸ್ಥಾಪಿಸಲಾಗುವುದು ಎಂದು ತಿಳಿಸಲಾಗಿದೆ.

ಇದನ್ನೂ ಓದಿ: Karnataka Budget Highlights: ಕರ್ನಾಟಕ ಬಜೆಟ್ 2022ರ ಗಾತ್ರ 2,65,720 ಕೋಟಿ ರೂ.; ಯಾವ ಕ್ಷೇತ್ರಕ್ಕೆ ಎಷ್ಟು ಹಣ ಇಲ್ಲಿದೆ ಮಾಹಿತಿ

Published On - 1:04 pm, Fri, 4 March 22

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು