AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2022: ರಾಜ್ಯ ಬಜೆಟ್​ನಲ್ಲಿ ರೈತ ಶಕ್ತಿ ಯೋಜನೆ ಘೋಷಣೆ; ಡೀಸೆಲ್​ಗೆ ಸಹಾಯಧನಕ್ಕಾಗಿ 500 ಕೋಟಿ ರೂ. ಘೋಷಣೆ

ಕರ್ನಾಟಕ ಬಜೆಟ್ 2022ರಲ್ಲಿ ರೈತಶಕ್ತಿ ಯೋಜನೆ ಘೋಷಿಸಲಾಗಿದೆ. ಇದರ ಅಡಿಯಲ್ಲಿ ಡೀಸೆಲ್​ಗಾಗಿ ಎಕರೆಗೆ 250 ರೂಪಾಯಿಯಂತೆ ಗರಿಷ್ಠ 5 ಎಕರೆಗೆ ನೀಡಲಾಗುವುದು.

Karnataka Budget 2022: ರಾಜ್ಯ ಬಜೆಟ್​ನಲ್ಲಿ ರೈತ ಶಕ್ತಿ ಯೋಜನೆ ಘೋಷಣೆ; ಡೀಸೆಲ್​ಗೆ ಸಹಾಯಧನಕ್ಕಾಗಿ 500 ಕೋಟಿ ರೂ. ಘೋಷಣೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 04, 2022 | 5:34 PM

Share

ಮಾರ್ಚ್ 4ನೇ ತಾರೀಕಿನ ಶುಕ್ರವಾರದಂದು ತಮ್ಮ ಮೊದಲ ಬಜೆಟ್ (Karnataka Budget 2022) ಮಂಡಿಸಿದ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ರೈತ ಶಕ್ತಿ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಕೃಷಿ ಉತ್ಪಾದಕತೆ ಹೆಚ್ಚಿಸಲು ಯಂತ್ರೋಪಕರಣ ಬಳಕೆ ಪ್ರೋತ್ಸಾಹಿಸಲು ಪ್ರತಿ ಎಕರೆಗೆ 250 ರುಪಾಯಿಯಂತೆ ಗರಿಷ್ಠ 5 ಎಕರೆಗೆ ಡೀಸೆಲ್ ಸಹಾಯ ಧನವನ್ನು ನೇರ ನಗದು ವರ್ಗಾವಣೆ ಮೂಲಕ ರೈತರಿಗೆ ನೀಡಲಾಗುವುದು ಎಂದು ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ. ಈ ಯೋಜನೆಗಾಗಿ ಸರ್ಕಾರದಿಂದ ಬಜೆಟ್​ನಲ್ಲಿ 500 ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ.

ಇನ್ನು ಪ್ರತಿ ಟನ್ ದ್ವಿತಳಿ ರೇಷ್ಮೆಗೂಡಿಗೆ 10 ಸಾವಿರ ಪ್ರೋತ್ಸಾಹಧನ ಘೋಷಣೆ ಮಾಡಲಾಗಿದ್ದು, ದ್ವಿತಳಿ ರೇಷ್ಮೆ ಮೊಟ್ಟೆ ಉತ್ಪಾದಿಸಿ ಸಂಗ್ರಹಿಸಿಡಲು ಶೈತ್ಯಾಗಾರ ಸ್ಥಾಪನೆ ಮಾಡಲಾಗುವುದು. 15 ಕೋಟಿ ರೂಪಾಯಿ ವೆಚ್ಚದಲ್ಲಿ ರಾಜ್ಯದ 3 ಸ್ಥಳಗಳಲ್ಲಿ ಶೈತ್ಯಾಗಾರ ಸ್ಥಾಪನೆ ಮಾಡಲಾಗುವುದು. ಮದ್ದೂರು, ರಾಣೆಬೆನ್ನೂರು, ದೇವನಹಳ್ಳಿಯಲ್ಲಿ ಶೈತ್ಯಾಗಾರ ಸ್ಥಾಪಿಸಲಾಗುವುದು ಎಂದು ಬಜೆಟ್​ನಲ್ಲಿ ಘೋಷಿಸಲಾಗಿದೆ.

30 ಕೋಟಿ ರೂಪಾಯಿ ವೆಚ್ಚದಲ್ಲಿ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು. ಕಲಬುರಗಿ, ಹಾವೇರಿಯಲ್ಲಿ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಲಾಗಿದೆ.

ದ್ವಿತಳಿ ಬಿತ್ತನೆ ಗೂಡಿಗೆ ಕೆಜಿಗೆ ₹50 ಪ್ರೋತ್ಸಾಹಧನ ಹೆಚ್ಚಳ ಮಾಡಲಾಗಿದೆ. ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೂ ಪ್ರೋತ್ಸಾಹಧನ ನೀಡಲಾಗುವುದು. ಮಂಡ್ಯ ಜಿಲ್ಲೆ ಕೆ.ಆರ್. ಮಾರ್ಕೆಟ್‌ನಲ್ಲಿ ರೇಷ್ಮೆ ತರಬೇತಿ ಕೇಂದ್ರ ಸ್ಥಾಪಿಸಲಾಗುವುದು ಎಂದು ತಿಳಿಸಲಾಗಿದೆ.

ಇದನ್ನೂ ಓದಿ: Karnataka Budget Highlights: ಕರ್ನಾಟಕ ಬಜೆಟ್ 2022ರ ಗಾತ್ರ 2,65,720 ಕೋಟಿ ರೂ.; ಯಾವ ಕ್ಷೇತ್ರಕ್ಕೆ ಎಷ್ಟು ಹಣ ಇಲ್ಲಿದೆ ಮಾಹಿತಿ

Published On - 1:04 pm, Fri, 4 March 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ