AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಫ್ ಪರಿಷ್ಕೃತ​ ಬಡ್ಡಿ ದರವು ಇಂದಿನ ವಾಸ್ತವ ಸ್ಥಿತಿಯನ್ನು ಪ್ರತಿನಿಧಿಸುತ್ತದೆ: ನಿರ್ಮಲಾ ಸೀತಾರಾಮನ್

ಪ್ರತಿವರ್ಷವೂ ಇಪಿಎಫ್​ಒ ಸಂಘಟನೆಯ ಕೇಂದ್ರೀಯ ಮಂಡಳಿಯು ಪಿಎಫ್​ ನಿಧಿಯ ಮೇಲೆ ನೀಡಬೇಕಾದ ಬಡ್ಡಿಯ ಪ್ರಮಾಣವನ್ನು ನಿರ್ಧರಿಸುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ಪಿಎಫ್ ಪರಿಷ್ಕೃತ​ ಬಡ್ಡಿ ದರವು ಇಂದಿನ ವಾಸ್ತವ ಸ್ಥಿತಿಯನ್ನು ಪ್ರತಿನಿಧಿಸುತ್ತದೆ: ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Mar 21, 2022 | 8:24 PM

Share

ದೆಹಲಿ: ಕಾರ್ಮಿಕರ ಭವಿಷ್ಯ ನಿಧಿಯ (Emplyoees Provident Fund Organisation – EPFO) ಬಡ್ಡಿಯನ್ನು ಪ್ರಸಕ್ತ ಸಾಲಿಗೆ ಶೇ 8.1ರಷ್ಟು ನಿಗದಿಪಡಿಸಲಾಗಿದೆ. ಇದು ಇತರ ಸಣ್ಣ ಉಳಿತಾಯ ಯೋಜನೆಗಳಿಗೆ ಹೋಲಿಸಿದರೆ ಉತ್ತಮ ಬಡ್ಡಿಯಾಗಿದೆ. ಪ್ರತಿವರ್ಷವೂ ಇಪಿಎಫ್​ಒ ಸಂಘಟನೆಯ ಕೇಂದ್ರೀಯ ಮಂಡಳಿಯು ಪಿಎಫ್​ ನಿಧಿಯ ಮೇಲೆ ನೀಡಬೇಕಾದ ಬಡ್ಡಿಯ ಪ್ರಮಾಣವನ್ನು ನಿರ್ಧರಿಸುತ್ತದೆ. ಇದು ಆಯಾ ವರ್ಷಗಳ ಆರ್ಥಿಕ ಸ್ಥಿತಿಗತಿಯನ್ನು ಪ್ರತಿನಿಧಿಸುತ್ತವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಹೇಳಿದರು. ರಾಜ್ಯಸಭೆಯಲ್ಲಿ ನಡೆದ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಇತ್ತೀಚಿನ ವರ್ಷಗಳಲ್ಲಿ ಪಿಎಫ್ ಮೇಲಿನ ಬಡ್ಡಿದರಗಳು ಬದಲಾವಣೆ ಆಗಿರಲಿಲ್ಲ. ಈ ಬಾರಿ ಬಡ್ಡಿ ಪರಿಷ್ಕರಿಸಲು ಪಿಎಫ್ ಮಂಡಳಿ ನಿರ್ಧರಿಸಿದೆ ಎಂದು ಹೇಳಿದರು.

ಇಪಿಎಫ್​ಒ ಮಂಡಳಿಯಲ್ಲಿ ವಿವಿಧ ವಲಯಗಳ ಪ್ರತಿನಿಧಿಗಳು ಇರುತ್ತಾರೆ. ಅವರು ವಿವಿಧ ಆಯಾಮಗಳನ್ನು ವಿಶ್ಲೇಷಿಸಿದ ನಂತರವೇ ಬಡ್ಡಿದರದ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ. ಪ್ರಸಕ್ತ ಸಾಲಿನಲ್ಲಿ ಪಿಎಫ್​ ಬಡ್ಡಿ ದರವನ್ನು ಶೇ 8.1ಕ್ಕೆ ಸೀಮಿತಗೊಳಿಸಲಾಗಿದೆ. ಸುಕನ್ಯಾ ಸಮೃದ್ಧಿ ಯೋಜನಾ (ಶೇ 7.6), ಹಿರಿಯ ನಾಗರಿಕರ ಉಳಿತಾಯ ಯೋಜನೆ (ಶೇ 7.4) ಮತ್ತು ಪಿಪಿಎಫ್ (ಶೇ 7.1) ಯೋಜನೆಗಳಿಗೆ ಹೋಲಿಸಿದರೆ ಈ ದರವು ಹೆಚ್ಚೇ ಇದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

‘ಇವೆಲ್ಲವೂ ಪ್ರಸ್ತುತ ಜಾರಿಯಲ್ಲಿರುವ ಉಳಿತಾಯ ಯೋಜನೆಗಳ ಬಡ್ಡಿದರಗಳು. ಇವುಗಳಿಗೆ ಹೋಲಿಸಿದರೆ ಪಿಎಫ್ ಬಡ್ಡಿದರವು ಆಕರ್ಷಕವಾಗಿಯೇ ಕಾನಿಸುತ್ತದೆ. ಕಳೆದ 40 ವರ್ಷಗಳಿಂದ ಪಿಎಫ್ ಬಡ್ಡಿದರಗಳನ್ನು ಬದಲಿಸಿರಲಿಲ್ಲ. ಆದರೆ ಇಂದಿನ ವಾಸ್ತವಗಳು ಬದಲಾಗಿರುವುದರಿಂದ ಪಿಎಫ್ ಬಡ್ಡಿದರವನ್ನು ಪರಿಷ್ಕರಿಸಲೇಬೇಕಾಗಿದೆ’ ಎಂದು ತಿಳಿಸಿದರು. ಪಿಎಫ್ ಆಡಳಿತ ಮಂಡಳಿಯು 2021-22ರ ಆರ್ಥಿಕ ವರ್ಷಕ್ಕೆ ಬಡ್ಡಿದರವನ್ನು ಶೇ 8.1ಕ್ಕೆ ಸೀಮಿತಗೊಳಿಸುವ ಪ್ರಸ್ತಾವ ಸಲ್ಲಿಸಿದೆ. ಕಳೆದ ಆರ್ಥಿಕ ವರ್ಷದಲ್ಲಿ ಅಂದರೆ 2020-21ರ ಸಾಲಿನಲ್ಲಿ ಪಿಎಫ್ ಬಡ್ಡಿದರಗಳು ಶೇ 8.5 ಇದ್ದವು.

ಭಾರತೀಯ ಜೀವ ವಿಮಾ ನಿಗಮದ (ಎಲ್​ಐಸಿ) ಐಪಿಒಗೂ ಮೊದಲಿನ ಅಂದಾಜು ವೈಜ್ಞಾನಿಕವಾಗಿಯೇ ಮಾಡಲಾಗಿದೆ. ಕಂಪನಿಯ ಮೌಲ್ಯವನ್ನು ಸಮರ್ಪಕ ರೀತಿಯಲ್ಲಿ, ವೈಜ್ಞಾನಿಕವಾಗಿ ವಿಶ್ಲೇಷಿಸಲಾಗಿದೆ. ಸೆಬಿಗೆ ಸಲ್ಲಿಸಿರುವ ಕರಡು ಐಪಿಒ ಪ್ರಸ್ತಾವದಲ್ಲಿಯೂ ಇದನ್ನೇ ಹೇಳಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು. ಹೆಚ್ಚುವರಿ ವೆಚ್ಚಕ್ಕೆ ಅನುಮೋದನೆ ಕೋರಿರುವುದನ್ನು ಸಮರ್ಥಿಸಿಕೊಂಡ ಅವರು, ಸರ್ಕಾರವು ಯೂರಿಯಾಕ್ಕೆ ಹೆಚ್ಚುವರಿ ಸಹಾಯಧನ ನೀಡುತ್ತಿದೆ. ಬೆಲೆ ಏರಿಕೆಯನ್ನು ರೈತರಿಗೆ ವರ್ಗಾಯಿಸಿಲ್ಲ ಎಂದರು.

ಕೇಂದ್ರ ತೆರಿಗೆಗಳಲ್ಲಿ ರಾಜ್ಯಗಳ ಪಾಲು 2022-23ರ ಸಾಲಿನಲ್ಲಿ ₹ 8.17 ಲಕ್ಷ ಕೋಟಿ ಇದೆ. 2021-22ರ ಸಾಲಿನ ಪರಿಷ್ಕೃತ ಅಂದಾಜು ₹ 7.45 ಲಕ್ಷ ಕೋಟಿಯಿತ್ತು. ಈ ಮೊತ್ತವನ್ನು ಈಗಾಗಲೇ ರಾಜ್ಯಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು. ಸರ್ಕಾರ ನಿರ್ವಹಿಸುತ್ತಿರುವ ವಿಮಾ ಕಂಪನಿಗಳಿಗೆ ಬಂಡವಾಳ ಹೆಚ್ಚಿಸುವ ದೃಷ್ಟಿಯಿಂದ ₹ 5000 ಕೋಟಿಗೆ ಅನುಮೋದನೆ ನೀಡಬೇಕು ಎಂದು ಹಣಕಾಸು ಸಚಿವರು ಪೂರಕ ಬೇಡಿಕೆಯಲ್ಲಿ ಕೋರಿದ್ದಾರೆ.

ಇದನ್ನೂ ಓದಿ: ಮೋದಿ ಗುಜರಾತ್ ಸಿಎಂ ಆಗಿದ್ದಾಗ ಗುಜರಾತ್​ನಲ್ಲಿ ಲಂಚ ನಿಲ್ಲಿಸಿದ್ದರು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಇದನ್ನೂ ಓದಿ: ವಿಶ್ವ ವಿಜ್ಞಾನ ಕಲಿಕೆಗೆ ಮುನ್ನುಡಿ ಬರೆದ ಮೈಸೂರು ವಿಶ್ವವಿದ್ಯಾನಿಲಯ; ರಾಜ್ಯದ ಪ್ರಥಮ ಕಾಸ್ಮಾಸ್ ಕೇಂದ್ರಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಿಲಾನ್ಯಾಸ

Published On - 8:23 pm, Mon, 21 March 22

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್