AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಮವರ್ಗದವರ ತೆರಿಗೆ ಹೊರೆ ಇಳಿಸಿ; ರಾಷ್ಟ್ರೀಯ ಉತ್ಪಾದನಾ ನೀತಿ ತನ್ನಿ; 2025 ಬಜೆಟ್​ನಿಂದ ಆರೆಸ್ಸೆಸ್ ನಿರೀಕ್ಷೆಗಳು…

RSS expectations from Union Budget 2025: ಫೆಬ್ರುವರಿ 1ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದ್ದು, ವಿವಿಧ ಉದ್ದಿಮೆಗಳು, ವಲಯಗಳು, ಸಮುದಾಯಗಳು ವಿವಿಧ ನಿರೀಕ್ಷೆಗಳನ್ನು ಇಟ್ಟುಕೊಂಡಿವೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿವಿಧ ಸಂಘಟನೆಗಳೂ ಕೂಡ ಬಜೆಟ್ ಬಗ್ಗೆ ತಮ್ಮದೇ ನಿರೀಕ್ಷೆಗಳನ್ನು ಇಟ್ಟುಕೊಂಡಿವೆ. ದೇಶದಲ್ಲಿ ಸಣ್ಣ ಉದ್ದಿಮೆಗಳು ಹುಲುಸಾಗಿ ಬೆಳೆಯುವ ರೀತಿಯಲ್ಲಿ ನೀತಿ ರೂಪಿಸಬೇಕು. ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಸಂಶೋಧನೆಗೆ ಒತ್ತುಕೊಡಬೇಕು ಎಂದು ಆರೆಸ್ಸೆಸ್ ಬಯಸಿದೆ.

ಮಧ್ಯಮವರ್ಗದವರ ತೆರಿಗೆ ಹೊರೆ ಇಳಿಸಿ; ರಾಷ್ಟ್ರೀಯ ಉತ್ಪಾದನಾ ನೀತಿ ತನ್ನಿ; 2025 ಬಜೆಟ್​ನಿಂದ ಆರೆಸ್ಸೆಸ್ ನಿರೀಕ್ಷೆಗಳು...
ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 30, 2025 | 11:46 AM

Share

ನವದೆಹಲಿ, ಜನವರಿ 30: ಮಧ್ಯಮ ವರ್ಗದವರಿಗೆ ಬಾಧೆಯಾಗಿರುವ ತೆರಿಗೆಗಳ ಹೊರೆಯನ್ನು ಇಳಿಸುವುದು, ನಿರ್ದಿಷ್ಟ ಚೀನೀ ಉತ್ಪನ್ನಗಳ ಮೇಲೆ ಆಮದು ತೆರಿಗೆ ಹೆಚ್ಚಿಸುವುದು ಇತ್ಯಾದಿ ವಿವಿಧ ಕ್ರಮಗಳನ್ನು 2025ರ ಬಜೆಟ್​ನಿಂದ ಆರ್​ಎಸ್​ಎಸ್ ನಿರೀಕ್ಷಿಸುತ್ತಿದೆ. ಶಿಕ್ಷಣ ಮತ್ತು ಕೌಶಲ್ಯ ತರಬೇತಿಗೆ ಹೆಚ್ಚಿನ ಹಣ ನೀಡಬೇಕು, ಸಣ್ಣ ಉದ್ದಿಮೆಗಳಿಗೆ ಪಿಎಲ್​ಐನಂತಹ ಯೋಜನೆಗಳಿಂದ ಉತ್ತೇಜನ ನೀಡಬೇಕು ಎನ್ನುವ ಸಲಹೆಗಳನ್ನು ಸಂಘ ಪರಿವಾರದ ವಿವಿಧ ಸಂಘಟನೆಗಳು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ನೀಡಿವೆ.

ಸಂಘ ಪರಿವಾರದಲ್ಲಿ ಹಲವಾರು ಸಂಘಟನೆಗಳಿವೆ. ಕೈಗಾರಿಕೆ, ವ್ಯಾಪಾರ, ಕಾರ್ಮಿಕ, ಶಿಕ್ಷಣ ಇತ್ಯಾದಿ ಕ್ಷೇತ್ರಗಳಲ್ಲಿರುವ ಲಘು ಉದ್ಯೋಗ್ ಭಾರ್ತಿ (ಎಲ್​ಯುಬಿ), ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ), ಸ್ವದೇಶೀ ಜಾಗಣ ಮಂಚ್ ಇತ್ಯಾದಿ ಸಂಘ ಪರಿವಾರದ ಆರೇಳು ಸಂಘಟನೆಗಳು ಕಳೆದ ತಿಂಗಳು ಕೇಂದ್ರ ಹಣಕಾಸು ಸಚಿವೆಯನ್ನು ಭೇಟಿ ಮಾಡಿ ತಮ್ಮ ನಿರೀಕ್ಷೆಗಳನ್ನು ಮುಂದಿಟ್ಟಿದ್ದವು.

ಇದನ್ನೂ ಓದಿ: Budget 2025 Date: ಕೇಂದ್ರ ಬಜೆಟ್ ಮಂಡನೆ ದಿನ, ಸಮಯ, ಸ್ಥಳ ಇತ್ಯಾದಿ ವಿವರ

ದೊಡ್ಡ ಮಟ್ಟದ ಸುಧಾರಣಾ ಕ್ರಮಗಳು, ತೆರಿಗೆ ಸಂಗ್ರಹ, ಆದಾಯ ಹೆಚ್ಚಳ ಇತ್ಯಾದಿ ಕಾರ್ಯಗಳು ಇಂದಿನ ಸಂದರ್ಭದಲ್ಲಿ ಬಹಳ ಮುಖ್ಯ ಎಂಬುದನ್ನು ಆರೆಸ್ಸೆಸ್ ಒಪ್ಪುತ್ತದೆ. ಆದರೆ, ಮಧ್ಯಮ ವರ್ಗದವರ ಮೇಲಿರುವ ತೆರಿಗೆ ಹೊರೆಯನ್ನು ಇಳಿಸುವುದೂ ಕೂಡ ಬಹಳ ಮುಖ್ಯ. ಸ್ಥಳೀಯ ಸಣ್ಣ ಉದ್ದಿಮೆಗಳು ಹುಲುಸಾಗಿ ಬೆಳೆಯಬೇಕು. ಸರ್ಕಾರಿ ಉದ್ದಿಮೆಗಳ ಖಾಸಗೀಕರಣ ಅತಿಯಾಗಿ ಆಗದ ರೀತಿಯಲ್ಲಿ ನೋಡಿಕೊಳ್ಳಬೇಕು. ಇವೂ ಕೂಡ ಮುಖ್ಯ ಎನ್ನುವುದು ಆರೆಸ್ಸೆಸ್ ಅನಿಸಿಕೆ.

ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಿ…

ಭಾರತೀಯ ಸಂಸ್ಕೃತಿ, ನೈಜ ಇತಿಹಾಸ, ಸಾಧನೆಗಳನ್ನು, ಪ್ರಾಚೀನ ಭಾರತೀಯರ ಜ್ಞಾನಗಳ ಬಗ್ಗೆ ಮಕ್ಕಳಿಗೆ ತಿಳಿಸುವ ಮೌಲ್ಯಾಧಾರಿತ ಶಿಕ್ಷಣ ವ್ಯವಸ್ಥೆ ಇರಬೇಕು ಎಂದು ಆರೆಸ್ಸೆಸ್ ನಿರೀಕ್ಷಿಸಿದೆ. ಗ್ರಾಮೀಣ ಭಾಗದ ಶಾಲೆಗಳಿಗೆ ಹೆಚ್ಚು ಒತ್ತು ಕೊಡಬೇಕು. ವಿವಿಧ ರಾಜ್ಯಗಳಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ನೆರವು ನೀಡಬೇಕು. ಕೌಶಲ್ಯಾಭಿವೃದ್ಧಿ ಯೋಜನೆಗಳು ಮತ್ತು ಸಂಶೋಧನೆಗಳಿಗೆ ಹೆಚ್ಚಿನ ಅನುದಾನ ನೀಡಬೇಕು ಎಂದು ಎಬಿವಿಪಿ ಒತ್ತಾಯಿಸಿದೆ.

ಇದನ್ನೂ ಓದಿ: ಕೇಂದ್ರ ಹಣಕಾಸು ಸಚಿವೆ ನೇತೃತ್ವದ ಬಜೆಟ್ ಟೀಮ್​ನ ಪ್ರಮುಖ ಸದಸ್ಯರಿವರು…

ರಾಷ್ಟ್ರೀಯ ಮ್ಯಾನುಫ್ಯಾಕ್ಚರಿಂಗ್ ನೀತಿ ಜಾರಿಗೆ ಒತ್ತಾಯ

ಬಹುರಾಷ್ಟ್ರೀಯ ಸಂಸ್ಥೆಗಳ ಮೇಲಿನ ಅವಲಂಬನೆ ಕಡಿಮೆ ಮಾಡಬೇಕು, ಸ್ಥಳೀಯ ಉದ್ದಿಮೆಗಳಿಗೆ ಉತ್ತೇಜನ ನೀಡಬೇಕು ಎಂಬುದು ಸ್ವದೇಶೀ ಜಾಗರಣ ಮಂಚ್ ಮತ್ತು ಲಘು ಉದ್ಯೋಗ್ ಭಾರ್ತಿ ಸಂಘಟನೆಗಳ ಒತ್ತಾಯವಾಗಿದೆ.

ಸ್ಥಳೀಯ ಸಣ್ಣ ಉದ್ದಿಮೆಗಳಿಗೆ ಸುಲಭವಾಗಿ ಹೆಚ್ಚು ಸಾಲ ಸಿಗಬೇಕು, ಕಾನೂನು ತಡೆ ಕಡಿಮೆ ಇರಬೇಕು. ಉದ್ಯೋಗ ಸೃಷ್ಟಿ, ದೇಶೀಯ ಉತ್ಪಾದನೆಗೆ ಒತ್ತು ಕೊಡಬೇಕು. ಆರ್ಥಿಕ ಪ್ರಗತಿಯ ಹೆಚ್ಚಿನ ಲಾಭವು ದೊಡ್ಡ ಕಾರ್ಪೊರೇಟ್​ಗಳ ಬದಲು ಸಣ್ಣ ಉದ್ದಿಮೆಗಳಿಗೆ ಸಿಗುವಂತಾಗಬೇಕು ಎನ್ನುವುದು ಇವುಗಳ ಅನಿಸಿಕೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!