AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Union Budget 2022: ಈ ಬಾರಿಯ ಬಜೆಟ್​ನಲ್ಲಿ ರೈಲ್ವೆ ಇಲಾಖೆಗೆ ಶೇ. 20ರಷ್ಟು ಅನುದಾನ ಹೆಚ್ಚಳ ಸಾಧ್ಯತೆ

Indian Railways: ಈ ಬಾರಿಯ ಬಜೆಟ್ ನಲ್ಲಿ ರೈಲ್ವೆ ಇಲಾಖೆಗೆ ಹಂಚಿಕೆ ಮಾಡುವ ಹಣದ ಮೊತ್ತವನ್ನು ಶೇ.20ರಷ್ಟು ಏರಿಕೆ ಮಾಡುವ ಸಾಧ್ಯತೆ ಇದೆ. ಕಳೆದ ವರ್ಷದ ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ ಅವರು 2.15 ಲಕ್ಷ ಕೋಟಿ ರೂ. ಹಣವನ್ನು ರೈಲ್ವೆ ಇಲಾಖೆಗೆ ನೀಡಿದ್ದರು.

Union Budget 2022: ಈ ಬಾರಿಯ ಬಜೆಟ್​ನಲ್ಲಿ ರೈಲ್ವೆ ಇಲಾಖೆಗೆ ಶೇ. 20ರಷ್ಟು ಅನುದಾನ ಹೆಚ್ಚಳ ಸಾಧ್ಯತೆ
ಸಾಂದರ್ಭಿಕ ಚಿತ್ರ
S Chandramohan
| Updated By: Praveen Sahu|

Updated on:Jan 20, 2022 | 11:09 PM

Share

ಈ ಬಾರಿಯ ಕೇಂದ್ರ ಸರ್ಕಾರದ ಸಾಮಾನ್ಯ ಬಜೆಟ್​ನಲ್ಲಿ (Budget 2022) ರೈಲ್ವೇ ಇಲಾಖೆಗೆ (Indian Railway Department) ಹೆಚ್ಚಿನ ಹಣಕಾಸು ನೆರವು ಸಿಗುವ ಸಾಧ್ಯತೆ ಇದೆ. ಕಳೆದ ವರ್ಷದ ಬಜೆಟ್​ಗೆ ಹೋಲಿಸಿದರೆ ಈ ವರ್ಷ ಶೇ.20ರಷ್ಟು ಹೆಚ್ಚಿನ ನೆರವನ್ನು ಹಣಕಾಸು ಇಲಾಖೆಯು ರೈಲ್ವೆ ಇಲಾಖೆಗೆ ನೀಡುವ ಸಾಧ್ಯತೆ ಇದೆ. ಇದರಿಂದ ದೇಶದಲ್ಲಿ ರೈಲ್ವೆ ಇಲಾಖೆಯು ದೀರ್ಘಾವಧಿಯ ಮೂಲಸೌಕರ್ಯ ವೃದ್ದಿಗೊಳಿಸುವ ನಿರೀಕ್ಷೆ ಇದೆ. ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಫೆಬ್ರವರಿ 1ರಂದು ಕೇಂದ್ರದ ಸಾಮಾನ್ಯ ಬಜೆಟ್ ಮಂಡಿಸುವರು. ಈ ಬಾರಿಯ ಬಜೆಟ್​ನಲ್ಲಿ ರೈಲ್ವೆ ಇಲಾಖೆ ದಾಖಲೆಯ ಮೊತ್ತದ ಹಣ ಹಂಚಿಕೆ ಮಾಡುವ ಸಾಧ್ಯತೆ ಇದೆ. ಇದರಿಂದಾಗಿ ದೇಶದ ರೈಲ್ವೆ ಇಲಾಖೆಯಲ್ಲಿ ದೊಡ್ಡ ಬದಲಾವಣೆಯಾಗುವ ಸಾಧ್ಯತೆಯೂ ಇದೆ.

ಈ ಬಾರಿಯ ಬಜೆಟ್ ನಲ್ಲಿ ರೈಲ್ವೆ ಇಲಾಖೆಗೆ ಹಂಚಿಕೆ ಮಾಡುವ ಹಣದ ಮೊತ್ತವನ್ನು ಶೇ.20ರಷ್ಟು ಏರಿಕೆ ಮಾಡುವ ಸಾಧ್ಯತೆ ಇದೆ. ಕಳೆದ ವರ್ಷದ ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ ಅವರು 2.15 ಲಕ್ಷ ಕೋಟಿ ರೂ. ಹಣವನ್ನು ರೈಲ್ವೆ ಇಲಾಖೆಗೆ ನೀಡಿದ್ದರು. ಈ ಬಾರಿಯ ಬಜೆಟ್​ನಲ್ಲಿ ರೈಲ್ವೆ ಇಲಾಖೆಗೆ ನೀಡುವ ಮೊತ್ತವನ್ನು 2.5 ಲಕ್ಷ ಕೋಟಿ ರೂ.ಗೆ ಏರಿಸುವ ಸಾಧ್ಯತೆ ಇದೆ. ಇದರಿಂದ ರೈಲ್ವೆ ಇಲಾಖೆಗೆ ದೊಡ್ಡ ಮೊತ್ತದ ಬಂಡವಾಳ ಸಿಗಲಿದೆ. ಇದನ್ನು ಬಳಸಿಕೊಂಡು ರೈಲ್ವೆ ಇಲಾಖೆಯು ದೇಶದ ರೈಲ್ವೆಯಲ್ಲಿ ದೀರ್ಘಾವಧಿ ಮೂಲಸೌಕರ್ಯ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಲಿದೆ. ಸರಕು-ಸಾಗಣೆ ಮಾರ್ಗಗಳು, ಸ್ಪೀಡ್ ಟ್ರೇನ್ ಹಾಗೂ ರೈಲ್ವೇ ಆಧುನೀಕರಣ, ವ್ಯಾಗನ್, ಲೋಕೋ ಟ್ರೇನ್ ಗಳ ಅಭಿವೃದ್ದಿ, ರೈಲ್ವೇ ಮಾರ್ಗಗಳ ವಿದ್ಯುದ್ದೀಕರಣಕ್ಕೆ ಹೆಚ್ಚು ಬಂಡವಾಳ ತೊಡಗಿಸಲು ಸಾಧ್ಯವಾಗುತ್ತದೆ.

ದೇಶದ ರೈಲ್ವೆ ಪ್ರಯಾಣವನ್ನು ಸುರಕ್ಷಿತ ಹಾಗೂ ಸದೃಢಗೊಳಿಸಲು ಹೆಚ್ಚಿನ ಬಂಡವಾಳ ಹಂಚಿಕೆಯಿಂದ ಸಾಧ್ಯವಾಗುತ್ತದೆ. ರೈಲ್ವೆ ಇಲಾಖೆಗೆ ಆಂತರಿಕ ಮೂಲಗಳಿಂದ 7,500 ಕೋಟಿ ರೂ. ಆದಾಯ ಸಂಗ್ರಹವಾಗಲಿದೆ. ಬಜೆಟ್​ಯೇತರ 1 ಲಕ್ಷ ಕೋಟಿ ರೂ. ಸಂಗ್ರಹವಾದರೆ, 1.07 ಲಕ್ಷ ಕೋಟಿ ರೂ. ಬಜೆಟ್ ಮೂಲಕ ರೈಲ್ವೆ ಇಲಾಖೆಗೆ ಸಿಗಲಿದೆ. ಈ ಮೂಲಕ ರೈಲ್ವೆ ಇಲಾಖೆಯು ಹೊಸ ಮೂಲಸೌಕರ್ಯವನ್ನು ಅಭಿವೃದ್ದಿಪಡಿಸಲು ಅಗತ್ಯವಾದ ಬಂಡವಾಳವನ್ನು ಈ ಮೂಲಕ ನೀಡಲಾಗುತ್ತದೆ.

ಒಟ್ಟಾರೆ 2.5 ಲಕ್ಷ ಕೋಟಿ ರೂ. ಪೈಕಿ 1.25 ಲಕ್ಷ ಕೋಟಿ ರೂ. ಕೇಂದ್ರದ ಬಜೆಟ್ ಮೂಲಕವೇ ರೈಲ್ವೆ ಇಲಾಖೆಗೆ ಸಿಗಲಿದೆ. ರೈಲ್ವೆ ಇಲಾಖೆಯು ತನ್ನದೇ ಸಾರ್ವಜನಿಕ ಸ್ವಾಮ್ಯದ ಕಂಪನಿಗಳನ್ನು ಹೊಂದಿದ್ದು, ಅವುಗಳಿಂದಲೂ ಆದಾಯ ಹರಿದು ಬರಲಿದೆ. ಬಜೆಟ್ ಮೂಲಕ ಸಿಗುವ ಹಣದ ಪೈಕಿ ಹೆಚ್ಚಿನ ಹಣವನ್ನು ರೈಲ್ವೆ ಇಲಾಖೆಯು ಅಹಮದಾಬಾದ್-ಮುಂಬೈ ಬುಲೆಟ್ ಟ್ರೇನ್ ಯೋಜನೆಗೆ ವಿನಿಯೋಗಿಸಲಿದೆ. ಸದ್ಯ ಗುಜರಾತ್ ರಾಜ್ಯದಲ್ಲಿ ಬುಲೆಟ್ ಟ್ರೇನ್ ಯೋಜನೆಗೆ ವೇಗ ಸಿಕ್ಕಿದೆ. ಕೇಂದ್ರ ಸರ್ಕಾರವು ದೆಹಲಿ-ವಾರಾಣಸಿ ಹೈಸ್ಪೀಡ್ ಟ್ರೇನ್ ಯೋಜನೆ ಜಾರಿ ಬಗ್ಗೆಯೂ ಚಿಂತಿಸುತ್ತಿದೆ.

ನರೇಂದ್ರ ಮೋದಿ ಸರ್ಕಾರವು ಈಗ ಯಾವುದೇ ರೈಲ್ವೆ ಯೋಜನೆಯನ್ನು ಘೋಷಿಸಿದರೂ, ಅದನ್ನು ಕಾಲಮಿತಿಯಲ್ಲಿ ಜಾರಿಗೆ ತರಲು ಒತ್ತು ನೀಡುತ್ತಿದೆ. ಯಾವುದೇ ಒಂದು ರೈಲ್ವೆ ಯೋಜನೆಯನ್ನು ಘೋಷಿಸಿ, ಕಾಲಮಿತಿಯಲ್ಲಿ ಜಾರಿಗೆ ತರದಿದ್ದರೆ, ಯೋಜನಾ ವೆಚ್ಚ ಏರುತ್ತಾ ಹೋಗುತ್ತದೆ. ಅದನ್ನು ತಪ್ಪಿಸಲು ಶೀಘ್ರಗತಿಯಲ್ಲಿ ಯೋಜನೆ ಜಾರಿಗೊಳಿಸುವುದೇ ಪರಿಹಾರ. ದೇಶದಲ್ಲಿ ಕೆಲವು ರೈಲ್ವೆ ಮಾರ್ಗದ ಯೋಜನೆಗಳು 20 ವರ್ಷವಾದರೂ ಪೂರ್ಣವಾಗಿಲ್ಲ. ಈಗ ಈ ರೀತಿಯ ವಿಳಂಬಕ್ಕೆ ಅವಕಾಶ ಕೊಡಬಾರದು. ಹೊಸ ರೈಲ್ವೆ ಮಾರ್ಗದ ಯೋಜನೆ ಘೋಷಣೆ ಮಾಡದಿದ್ದರೂ ಪರವಾಗಿಲ್ಲ, ಘೋಷಿಸಿರುವ ಯೋಜನೆಗಳ ಜಾರಿಯಲ್ಲಿ ವಿಳಂಬ ಮಾಡಬಾರದು ಎಂಬ ನೀತಿಯನ್ನು ಮೋದಿ ಸರ್ಕಾರ ಅನುಸರಿಸುತ್ತಿದೆ.

ರೈಲ್ವೆ ಇಲಾಖೆಯ ಖರ್ಚಿನಲ್ಲಿ ಶೇ.75ರಷ್ಟು ಸಿಬ್ಬಂದಿ, ಉದ್ಯೋಗಿಗಳ ವೇತನಕ್ಕೆ ಖರ್ಚಾಗುತ್ತದೆ. ಕೇಂದ್ರ ಸರ್ಕಾರದಲ್ಲಿ ಅತಿ ಹೆಚ್ಚು ಉದ್ಯೋಗಿಗಳಿರುವ ಮೊದಲ ಇಲಾಖೆಯೇ ರೈಲ್ವೆ ಇಲಾಖೆ. ರೈಲ್ವೆ ಇಲಾಖೆಯಲ್ಲಿ 13 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿದ್ದಾರೆ. 13 ಲಕ್ಷ ಉದ್ಯೋಗಿಗಳಿಗೆ ಪ್ರತಿ ತಿಂಗಳ ವೇತನಕ್ಕೆ ಶೇ.75ರಷ್ಟು ತನ್ನ ಬಂಡವಾಳ, ಆದಾಯದ ಹಣವನ್ನು ಖರ್ಚು ಮಾಡಬೇಕಾಗಿದೆ. ರೈಲ್ವೆ ಇಲಾಖೆಯು ತಾನು ದುಡಿಯುವ 100 ರೂ. ಹಣದಲ್ಲಿ 96 ರೂಪಾಯಿಯನ್ನು ಖರ್ಚು ಮಾಡುತ್ತದೆ.

ಇದನ್ನೂ ಓದಿ: Healthcare Budget 2022: ಕೇಂದ್ರ ಬಜೆಟ್ 2022ರಿಂದ ಆರೋಗ್ಯ ಕ್ಷೇತ್ರದ ನಿರೀಕ್ಷೆಗಳೇನು?

Budget 2022: ಕೇಂದ್ರ ಬಜೆಟ್ 2022ರಿಂದ ಕೃಷಿ ವಲಯದ ಪ್ರಮುಖ ನಿರೀಕ್ಷೆಗಳೇನು?

Published On - 6:08 pm, Wed, 19 January 22

ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ