AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2023: ಸರ್ಕಾರಿ ಏಜೆನ್ಸಿಗಳಲ್ಲಿ ಡಿಜಿಟಲ್ ಗುರುತಿನ ದಾಖಲೆಗೆ ಇನ್ನು ಪ್ಯಾನ್ ಸಾಕು

ಈ ನಿರ್ಧಾರದಿಂದ ಆದಾಯ ತೆರಿಗೆ ಇಲಾಖೆ ಸೇರಿದಂತೆ ವಿವಿಧ ಸರ್ಕಾರಿ ಏಜೆನ್ಸಿಗಳಲ್ಲಿ ಕೆವೈಸಿ ಪ್ರಕ್ರಿಯೆ ಪ್ಯಾನ್​ಕಾರ್ಡ್ ಹೊಂದಿರುವವರಿಗೆ ಸುಲಭವಾಗಲಿದೆ.

Budget 2023: ಸರ್ಕಾರಿ ಏಜೆನ್ಸಿಗಳಲ್ಲಿ ಡಿಜಿಟಲ್ ಗುರುತಿನ ದಾಖಲೆಗೆ ಇನ್ನು ಪ್ಯಾನ್ ಸಾಕು
ಪ್ಯಾನ್ ಕಾರ್ಡ್
ಗಣಪತಿ ಶರ್ಮಾ
|

Updated on:Feb 01, 2023 | 12:20 PM

Share

ನವದೆಹಲಿ: ನಿರ್ದಿಷ್ಟ ಸರ್ಕಾರಿ ಏಜೆನ್ಸಿಗಳ ಡಿಜಿಟಲ್ ವ್ಯವಸ್ಥೆಯಲ್ಲಿ ಗುರುತಿನ ದೃಢೀಕರಣಕ್ಕಾಗಿ ಪ್ಯಾನ್ (PAN) ಕಾರ್ಡ್ ಅನ್ನು ಸಾಮಾನ್ಯ ಗುರುತಿನ ಸಾಧನವಾಗಿ ಪರಿಗಣಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಘೋಷಿಸಿದರು. 2023-24ನೇ ಸಾಲಿನ ಬಜೆಟ್ (Budget 2023) ಮಂಡನೆ ಮಾಡಿದ ಅವರು, ಈ ಘೋಷಣೆ ಮಾಡಿದರು. ಈ ನಿರ್ಧಾರದೊಂದಿಗೆ, ವ್ಯಕ್ತಿಗಳ ಡಿಜಿಟಲ್ ಗುರುತು ದೃಢೀಕರಣದ ಸಮಸ್ಯೆಗೆ ಪರಿಹಾರ ದೊರೆಯಲಿದೆ ಎಂದು ಅವರು ಹೇಳಿದರು. ಈ ನಿರ್ಧಾರದಿಂದ ಆದಾಯ ತೆರಿಗೆ ಇಲಾಖೆ (Income Tax Department) ಸೇರಿದಂತೆ ವಿವಿಧ ಸರ್ಕಾರಿ ಏಜೆನ್ಸಿಗಳಲ್ಲಿ ಕೆವೈಸಿ ಪ್ರಕ್ರಿಯೆ ಪ್ಯಾನ್​ಕಾರ್ಡ್ ಹೊಂದಿರುವವರಿಗೆ ಸುಲಭವಾಗಲಿದೆ.

ಇಷ್ಟೇ ಅಲ್ಲದೆ, ದೇಶದಲ್ಲಿ ಉದ್ಯಮಸ್ನೇಹಿ ವಾತಾವರಣ ನಿರ್ಮಿಸಲು ಬಜೆಟ್ ಮೂಲಕ ಕೇಂದ್ರ ಸರ್ಕಾರವು ಮತ್ತಷ್ಟು ಕ್ರಮಗಳನ್ನು ಘೋಷಿಸಿದೆ. ಉದ್ಯಮಗಳು ಪ್ರತ್ಯೇಕ ಪ್ಯಾನ್ (PAN) ನಂಬರ್ ಹೊಂದಬೇಕು. ಈ ನಂಬರ್ ಆಧರಿಸಿ ಉದ್ಯಮಿಗಳ ಕುಂದುಕೊರತೆಯನ್ನು ಶೀಘ್ರ ಪರಿಹರಿಸಲಾಗುವುದು. ಇದಕ್ಕಾಗಿ ಹಲವು ನಿಯಮಗಳನ್ನು ಸಡಿಲಿಸಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.

ಬಜೆಟ್​ ಲೈವ್ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:12 pm, Wed, 1 February 23

Follow Us
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ತವರಿನಿಂದ ಹೊರಗೆ RCBಗೆ ಮೊದಲ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ?
ತವರಿನಿಂದ ಹೊರಗೆ RCBಗೆ ಮೊದಲ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ?
ಕಾಲಾಷ್ಟಮಿಯನ್ನು ಯಾಕೆ ಆಚರಿಸಬೇಕು?
ಕಾಲಾಷ್ಟಮಿಯನ್ನು ಯಾಕೆ ಆಚರಿಸಬೇಕು?