AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Defence Budget 2024: ರಕ್ಷಣಾ ಕ್ಷೇತ್ರದಲ್ಲಿ ಬಲಿಷ್ಠವಾಗಲಿದೆ ಭಾರತ, ಬಜೆಟ್​​ನಲ್ಲಿ ಘೋಷಿಸಿದ್ದೇನೇನು ತಿಳಿಯಿರಿ

Union Budget 2024: ಈ ಬಾರಿಯ ಬಜೆಟ್‌ನಲ್ಲಿ ಸರ್ಕಾರ ರಕ್ಷಣಾ ಕ್ಷೇತ್ರಕ್ಕೆ 6.21 ಲಕ್ಷ ಕೋಟಿ ರೂ. ಅನುದಾನ ಘೋಷಿಸಿದೆ. ಇದರಿಂದ ದೇಶದ ಮೂರು ಸೇನೆಗಳನ್ನು ಬಲಪಡಿಸುವುದಲ್ಲದೆ ಸೇನಾ ಸಿಬ್ಬಂದಿ ಹಾಗೂ ಮಾಜಿ ಸೈನಿಕರಿಗೂ ಅನುಕೂಲವಾಗಲಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಇದು ಸರಿಸುಮಾರು 3.4 ಶೇಕಡಾ ಹೆಚ್ಚು. ಕಳೆದ ಹಣಕಾಸು ವರ್ಷದಲ್ಲಿ ಸೇನೆಗೆ 5.93 ಲಕ್ಷ ಕೋಟಿ ರೂ. ಅನುದಾನ ನೀಡಲಾಗಿತ್ತು.

Defence Budget 2024: ರಕ್ಷಣಾ ಕ್ಷೇತ್ರದಲ್ಲಿ ಬಲಿಷ್ಠವಾಗಲಿದೆ ಭಾರತ, ಬಜೆಟ್​​ನಲ್ಲಿ ಘೋಷಿಸಿದ್ದೇನೇನು ತಿಳಿಯಿರಿ
ಸಾಂದರ್ಭಿಕ ಚಿತ್ರ
Ganapathi Sharma
|

Updated on: Jul 23, 2024 | 3:35 PM

Share

ನವದೆಹಲಿ, ಜುಲೈ 23: ಕೇಂದ್ರ ಬಜೆಟ್​​​ನಲ್ಲಿ ರಕ್ಷಣಾ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸಲಾಗಿದೆ. ಇದರಲ್ಲಿ, ರಕ್ಷಣಾ ಕ್ಷೇತ್ರಕ್ಕಾಗಿ ಗಿ 6.2 ಲಕ್ಷ ಕೋಟಿ ರೂ.ಗಳನ್ನು ಘೋಷಿಸಲಾಗಿದೆ. ಇದು ಕಳೆದ ವರ್ಷಕ್ಕಿಂತ ಸರಿಸುಮಾರು 3.4 ಶೇಕಡಾ ಹೆಚ್ಚಾಗಿದೆ. ಕಳೆದ ವರ್ಷ ರಕ್ಷಣಾ ಕ್ಷೇತ್ರಕ್ಕೆ ಸರ್ಕಾರ 5.93 ಲಕ್ಷ ಕೋಟಿ ರೂ. ಘೋಷಿಸಿತ್ತು. ಒಟ್ಟು ಬಜೆಟ್ ಅನ್ನು ನೋಡಿದರೆ, ರಕ್ಷಣಾ ಕ್ಷೇತ್ರಕ್ಕೆ ಸರ್ಕಾರವು ಗರಿಷ್ಠ ಪಾಲನ್ನು, ಅಂದರೆ ಶೇ 8ರಷ್ಟನ್ನು ಇಟ್ಟುಕೊಂಡಿರುವುದು ಕಾಣಿಸುತ್ತಿದೆ.

ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆಗೆ ಒತ್ತು

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಅನ್ನು ಮಂಗಳವಾರ ಮಂಡಿಸಿದರು. ಈ ಬಜೆಟ್‌ನಲ್ಲಿ ಬಡವರು, ಮಹಿಳೆಯರು, ಯುವಕರು ಮತ್ತು ರೈತರ ಮೇಲೆ ಕೇಂದ್ರೀಕರಿಸುವುದರ ಜೊತೆಗೆ ರಕ್ಷಣಾ ಬಜೆಟ್‌ಗೆ ಗರಿಷ್ಠ ಗಮನ ನೀಡಲಾಗಿದೆ. ಕೇಂದ್ರ ಬಜೆಟ್ ಭಾಷಣದ ಪ್ರತಿಯ ಪ್ರಕಾರ, ಸರ್ಕಾರವು ರಕ್ಷಣೆಗಾಗಿ 6 ​​ಲಕ್ಷದ 21 ಸಾವಿರದ 940 ಕೋಟಿ ರೂ. ಅನುದಾನ ಮೀಸಲಿಟ್ಟಿದೆ. ಈ ಬಜೆಟ್ ಮೂಲಕ ರಕ್ಷಣಾ ಕ್ಷೇತ್ರವನ್ನು ಬಲಪಡಿಸುವ ಜತೆಗೆ ಸ್ವಾವಲಂಬಿಯಾಗಿಸುವ ಪ್ರಯತ್ನ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ರಕ್ಷಣಾ ಇಲಾಖೆಗೆ ವೇತನಕ್ಕೆಷ್ಟು ಅನುದಾನ?

ರಕ್ಷಣಾ ಬಜೆಟ್ ಅನ್ನು ಮೂರು ಭಾಗಗಳಾಗಿ ವಿಂಗಡಿಸಲಾಗಿದೆ, ಅದರಲ್ಲಿ ಮೊದಲ ಭಾಗವು ಆದಾಯ, ಎರಡನೆಯದು ಬಂಡವಾಳ ವೆಚ್ಚ ಮತ್ತು ಮೂರನೆಯದು ಪಿಂಚಣಿ. ರಕ್ಷಣಾ ವಲಯದಲ್ಲಿ ಸಂಬಳವನ್ನು ಆದಾಯ ಬಜೆಟ್‌ನಿಂದ ವಿತರಿಸಲಾಗುತ್ತದೆ. ಇದಕ್ಕಾಗಿ 2 ಲಕ್ಷದ 82 ಸಾವಿರದ 772 ಕೋಟಿ ರೂಪಾಯಿ ಇಡಲಾಗಿದೆ. ಇದಲ್ಲದೇ ಬಂಡವಾಳ ವೆಚ್ಚದಿಂದಲೇ ಶಸ್ತ್ರಾಸ್ತ್ರ ಮತ್ತಿತರ ಅಗತ್ಯ ಪರಿಕರಗಳನ್ನು ಖರೀದಿಸಲಾಗಿದ್ದು, ಇದಕ್ಕಾಗಿ ಬಜೆಟ್ ನಲ್ಲಿ 1 ಲಕ್ಷ 72 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಮೂರನೇ ಮತ್ತು ಪ್ರಮುಖ ಭಾಗವೆಂದರೆ ಪಿಂಚಣಿ. ಇದಕ್ಕಾಗಿ ಬಜೆಟ್‌ನಲ್ಲಿ 1 ಲಕ್ಷದ 41 ಸಾವಿರದ 205 ಕೋಟಿ ರೂ. ಘೋಷಿಸಲಾಗಿದೆ.

ಶಸ್ತ್ರಾಸ್ತ್ರ, ಸಲಕರಣೆ ಖರೀದಿಗೆ ಎಷ್ಟು ಅನುದಾನ?

ಯಾವುದೇ ದೇಶದ ಸೇನೆಯ ದೊಡ್ಡ ಶಕ್ತಿ ಎಂದರೆ ಅದರ ಶಸ್ತ್ರಾಸ್ತ್ರಗಳು, ಯುದ್ಧ ವಿಮಾನಗಳು ಮತ್ತು ಮದ್ದುಗುಂಡುಗಳು. ರಕ್ಷಣಾ ಬಜೆಟ್‌ನಲ್ಲಿ ಶಸ್ತ್ರಾಸ್ತ್ರ ಮತ್ತು ಸಲಕರಣೆಗಳ ಖರೀದಿಗೆ 1 ಲಕ್ಷದ 72 ಸಾವಿರ ಕೋಟಿ ರೂ. ಘೋಷಿಸಲಾಗಿದೆ. ಈ ಹಣದಲ್ಲಿ ವಿಮಾನ ಮತ್ತು ಏರೋ ಇಂಜಿನ್ ಉಪಕರಣಗಳನ್ನು ಖರೀದಿಸಲಾಗುವುದು. ಇದಲ್ಲದೇ ಭಾರೀ ಮತ್ತು ಮಧ್ಯಮ ವಾಹನಗಳು, ಇತರ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಖರೀದಿಸಲಾಗುವುದು. ಇದಲ್ಲದೇ ಸೇನೆಗೆ ಇತರೆ ತಾಂತ್ರಿಕ ಉಪಕರಣಗಳನ್ನು ಅಳವಡಿಸುವ ಯೋಜನೆಯೂ ಇದೆ ಎಂದು ಸಚಿವರು ತಿಳಿಸಿದ್ದಾರೆ.

ಸೇನೆಗಾಗಿ ವಿಶೇಷ ರೈಲ್ವೇ ವ್ಯಾಗನ್‌ಗಳನ್ನು ಖರೀದಿಸಲಾಗುವುದು. ಸರ್ಕಾರವು ಈ ಬಜೆಟ್‌ನಿಂದ ನೌಕಾಪಡೆಗಾಗಿ ವಿಮಾನ ಮತ್ತು ಇತರ ಉಪಕರಣಗಳನ್ನು ಖರೀದಿಸಲಿದೆ. ಇದಲ್ಲದೇ ನೌಕಾ ಪಡೆಯನ್ನು ಬಲಪಡಿಸಲಾಗುವುದು ಮತ್ತು ಇತರ ನೌಕಾ ನೌಕಾನೆಲೆ ಯೋಜನೆಗಳನ್ನು ಪ್ರಾರಂಭಿಸಲಾಗುವುದು. ವಾಯುಪಡೆಗೆ ವಿಮಾನ, ಭಾರೀ ವಾಹನಗಳು ಮತ್ತು ಇತರ ಉಪಕರಣಗಳನ್ನು ಖರೀದಿಸುವ ಯೋಜನೆಯೂ ಇದೆ ಎಂದು ಸಚಿವರು ತಿಳಿಸಿದ್ದಾರೆ.

ರಕ್ಷಣಾ ವಲಯದ ಸ್ವಾವಲಂಬನೆಗೆ ಗುರಿ

ರಕ್ಷಣಾ ವಲಯವನ್ನು ಹಾಗೂ ಸೇನೆಯನ್ನು ಸ್ವಾವಲಂಬಿಯನ್ನಾಗಿ ಮಾಡಲು ರಕ್ಷಣಾ ಬಜೆಟ್‌ನಲ್ಲಿ ಹಲವು ಯೋಜನೆಗಳನ್ನು ಘೋಷಿಸಲಾಗಿದೆ. ಇವುಗಳಲ್ಲಿ ಸೇನೆಯ ಮೂರು ಪಡೆಗಳಿಗೆ ಬೇಕಾದ ಆಯುಧಗಳು ಮತ್ತು ಸಲಕರಣೆಗಳ ತಯಾರಿಕೆಗೆ ಅನೇಕ ಯೋಜನೆಗಳನ್ನು ಸಿದ್ಧಪಡಿಸಲಾಗಿದೆ. ಇದಲ್ಲದೇ ಸಾರ್ವಜನಿಕ ಉದ್ದಿಮೆಗಳಲ್ಲೂ ಹೂಡಿಕೆ ಮಾಡಲು ಸರಕಾರ ಸಿದ್ಧವಿದೆ.

ಇದನ್ನೂ ಓದಿ: 5 ಕೆಜಿ ಉಚಿತ ಪಡಿತರ ಗಡುವು 5 ವರ್ಷ ವಿಸ್ತರಣೆ, ವಿಧಾನಸಭಾ ಚುನಾವಣೆಗಳ ಮೇಲೆ ಕಣ್ಣು

ಈ ಹಿಂದೆ ಮಧ್ಯಂತರ ಬಜೆಟ್‌ನಲ್ಲಿಯೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಕ್ಷಣಾ ಕ್ಷೇತ್ರದಲ್ಲಿ ಡೀಪ್ ಟೆಕ್ ತಂತ್ರಜ್ಞಾನವನ್ನು ಬಲಪಡಿಸುವುದಾಗಿ ಘೋಷಿಸಿದ್ದರು. ಭಾರತವನ್ನು ಶಸ್ತ್ರಾಸ್ತ್ರ ಕ್ಷೇತ್ರದಲ್ಲಿ ಸ್ವಾವಲಂಬಿಯಾಗಿಸುವುದು ಇದರ ಉದ್ದೇಶವಾಗಿದೆ. ಇದಲ್ಲದೆ ರೊಬೊಟಿಕ್ಸ್, ಮೆಷಿನ್ ಲರ್ನಿಂಗ್ ಮತ್ತು ಕ್ವಾಂಟಮ್ ಕಂಪ್ಯೂಟಿಂಗ್‌ನಂತಹ ಕ್ಷೇತ್ರಗಳಲ್ಲಿಯೂ ಸಂಶೋಧನೆ ನಡೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನ: ಪ್ರಾರ್ಥನೆ ವೇಳೆ ಶಾಲೆಯ ಮೇಲ್ಛಾವಣಿ ಕುಸಿತ
ರಾಜಸ್ಥಾನ: ಪ್ರಾರ್ಥನೆ ವೇಳೆ ಶಾಲೆಯ ಮೇಲ್ಛಾವಣಿ ಕುಸಿತ
ಡೆಲಿವರಿ ಬಾಯ್ ಬಟ್ಟೆ ತೊಟ್ಟು ಆಭರಣದ ಅಂಗಡಿ ದರೋಡೆ
ಡೆಲಿವರಿ ಬಾಯ್ ಬಟ್ಟೆ ತೊಟ್ಟು ಆಭರಣದ ಅಂಗಡಿ ದರೋಡೆ
Video: ಮಹಾರಾಷ್ಟ್ರ: ಶತಮಾನಗಳಷ್ಟು ಹಳೆಯದಾದ ಕೋಟೆ ಕುಸಿತ
Video: ಮಹಾರಾಷ್ಟ್ರ: ಶತಮಾನಗಳಷ್ಟು ಹಳೆಯದಾದ ಕೋಟೆ ಕುಸಿತ
ಆಸ್ಪತ್ರೆಯಲ್ಲಿ ಕರ್ತವ್ಯನಿರತ ವೈದ್ಯರ ಮೇಲೆ ವ್ಯಕ್ತಿಯಿಂದ ಏಕಾಏಕಿ ಹಲ್ಲೆ
ಆಸ್ಪತ್ರೆಯಲ್ಲಿ ಕರ್ತವ್ಯನಿರತ ವೈದ್ಯರ ಮೇಲೆ ವ್ಯಕ್ತಿಯಿಂದ ಏಕಾಏಕಿ ಹಲ್ಲೆ
Daily Devotional: ಶ್ರೀ ಸೂಕ್ತದ ಮಹತ್ವ ಹಾಗೂ ಯಾವಾಗ ಪಠಿಸಬೇಕು ತಿಳಿಯಿರಿ
Daily Devotional: ಶ್ರೀ ಸೂಕ್ತದ ಮಹತ್ವ ಹಾಗೂ ಯಾವಾಗ ಪಠಿಸಬೇಕು ತಿಳಿಯಿರಿ
Daily horoscope: ಗಂಡ-ಹೆಂಡತಿಯ ನಡುವೆ ಸಣ್ಣಪುಟ್ಟ ಕಲಹಗಳಾಗುವ ಸಾಧ್ಯತೆ
Daily horoscope: ಗಂಡ-ಹೆಂಡತಿಯ ನಡುವೆ ಸಣ್ಣಪುಟ್ಟ ಕಲಹಗಳಾಗುವ ಸಾಧ್ಯತೆ
ಡಾ. ರಾಜ್​ಕುಮಾರ್ ಅಪಹರಣಕ್ಕೂ ಮುನ್ನ ಏನೆಲ್ಲ ನಡೆದಿತ್ತು? ವಿವರಿಸಿದ ಅಳಿಯ
ಡಾ. ರಾಜ್​ಕುಮಾರ್ ಅಪಹರಣಕ್ಕೂ ಮುನ್ನ ಏನೆಲ್ಲ ನಡೆದಿತ್ತು? ವಿವರಿಸಿದ ಅಳಿಯ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ