ಇದು ಬಡವರು, ಮಹಿಳೆ, ರೈತರು, ಯುವಕರನ್ನು ಕೇಂದ್ರೀಕರಿಸಿದ ಬಜೆಟ್; ನಿರ್ಮಲಾ ಸೀತಾರಾಮನ್

Budget 2025: ಕೇಂದ್ರ ಬಜೆಟ್ ಮಂಡನೆ ಆರಂಭವಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 8ನೇ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ಮೂಲಕ ಅವರು ಇತಿಹಾಸ ಸೃಷ್ಟಿಸಿದ್ದಾರೆ. ಮುಂದಿನ ಐದು ವರ್ಷಗಳನ್ನು 'ಸಬ್ಕಾ ವಿಕಾಸ್' ಅನ್ನು ಸಾಕಾರಗೊಳಿಸುವ ಒಂದು ಅನನ್ಯ ಅವಕಾಶವೆಂದು ನಾವು ಪರಿಗಣಿಸಿದ್ದೇವೆ. ಇದು ಎಲ್ಲಾ ಪ್ರದೇಶಗಳ ಸಮತೋಲಿತ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಇದು ಬಡವರು, ಮಹಿಳೆ, ರೈತರು, ಯುವಕರನ್ನು ಕೇಂದ್ರೀಕರಿಸಿದ ಬಜೆಟ್; ನಿರ್ಮಲಾ ಸೀತಾರಾಮನ್
Finance Minister Nirmala Sitharaman
Follow us
ಸುಷ್ಮಾ ಚಕ್ರೆ
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on:Feb 01, 2025 | 5:30 PM

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಲೋಕಸಭೆಯಲ್ಲಿ ಮಂಡಿಸುತ್ತಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಕೇಂದ್ರ ಬಜೆಟ್‌ನ ಪ್ರಮುಖ ಗುರಿಗಳ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇದು ಬಡವರು, ಯುವಕರು, ಮಹಿಳೆಯರು ಮತ್ತು ಅನ್ನದಾತರನ್ನು ಕೇಂದ್ರೀಕರಿಸಿ ಸಿದ್ಧಪಡಿಸಲಾದ ಬಜೆಟ್ ಎಂದಿದ್ದಾರೆ. ಈ ಬಜೆಟ್ ಬೆಳವಣಿಗೆಯನ್ನು ವೇಗಗೊಳಿಸಲು ಮತ್ತು ಸಮಗ್ರ ಅಭಿವೃದ್ಧಿಯನ್ನು ಒದಗಿಸಲು ಪ್ರಯತ್ನಗಳನ್ನು ಮುಂದುವರೆಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುವಾಗ ಹೇಳಿದ್ದಾರೆ.

“ಈ ಬಜೆಟ್‌ನಲ್ಲಿ ಪ್ರಸ್ತಾಪಿಸಲಾದ ಅಭಿವೃದ್ಧಿ ಕ್ರಮಗಳು ಬಡವರು, ಯುವಕರು, ರೈತರು ಮತ್ತು ಮಹಿಳೆಯರ ಮೇಲೆ ಕೇಂದ್ರೀಕರಿಸುವ 10 ಕ್ಷೇತ್ರಗಳಿಗೆ ವ್ಯಾಪಿಸಿವೆ. ಖಾಸಗಿ ವಲಯದ ಹೂಡಿಕೆಗಳನ್ನು ಉತ್ತೇಜಿಸುವುದು, ಮನೆಯ ಭಾವನೆಗಳನ್ನು ಹೆಚ್ಚಿಸುವುದು, ಭಾರತದ ಏರುತ್ತಿರುವ ಮಧ್ಯಮ ವರ್ಗದ ಶಕ್ತಿಯನ್ನು ಹೆಚ್ಚಿಸುವುದು ಬಜೆಟ್ ಗುರಿಯಾಗಿದೆ” ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಇದನ್ನೂ ಓದಿ: Budget 2025 Presentation Live: ಬಜೆಟ್ ಮಂಡನೆ ಲೈವ್ ವಿಡಿಯೋ

ಏಪ್ರಿಲ್ 2025ರಿಂದ ಪ್ರಾರಂಭವಾಗುವ ಹಣಕಾಸು ವರ್ಷಕ್ಕೆ ನಿರ್ಮಲಾ ಸೀತಾರಾಮನ್ ಇಂದು ಬಜೆಟ್ ಮಂಡಿಸುತ್ತಿದ್ದಾರೆ. 2014ರಿಂದ ನರೇಂದ್ರ ಮೋದಿ ಸರ್ಕಾರದ ಅಡಿಯಲ್ಲಿ ಇದು ಸತತ 14ನೇ ಬಜೆಟ್ ಆಗಿದೆ. ಇದರಲ್ಲಿ 2019 ಮತ್ತು 2024ರ ಸಾರ್ವತ್ರಿಕ ಚುನಾವಣೆಗಳಿಗೆ ಮುಂಚಿತವಾಗಿ ಮಂಡಿಸಲಾದ 2 ಮಧ್ಯಂತರ ಬಜೆಟ್ ಕೂಡ ಸೇರಿವೆ. ಮುಂದಿನ 5 ವರ್ಷಗಳು ‘ಸಬ್ಕಾ ವಿಕಾಸ್’ ಅನ್ನು ಸಾಕಾರಗೊಳಿಸಲು ಒಂದು ಅನನ್ಯ ಅವಕಾಶವಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಸಂಸತ್ತಿನ ಬಜೆಟ್ ಅಧಿವೇಶನವು ಜನವರಿ 31ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದೊಂದಿಗೆ ಪ್ರಾರಂಭವಾಯಿತು. ಈ ಅಧಿವೇಶನವನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದೆ. ಮೊದಲ ಭಾಗ ಜನವರಿ 31ರಿಂದ ಫೆಬ್ರವರಿ 13 ರವರೆಗೆ ನಡೆಯುತ್ತದೆ. ಎರಡನೆಯದು ಮಾರ್ಚ್ 10ರಂದು ಪ್ರಾರಂಭವಾಗಿ ಏಪ್ರಿಲ್ 4ರಂದು ಕೊನೆಗೊಳ್ಳುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:29 am, Sat, 1 February 25

ದೇವೇಗೌಡ ತಮ್ಮ ಮಕ್ಕಳ ಬಗ್ಗೆ ಮಾತಾಡಿದ್ದೆಲ್ಲ ಗೊತ್ತಿದೆ: ಚಲುವರಾಯಸ್ಚಾಮಿ
ದೇವೇಗೌಡ ತಮ್ಮ ಮಕ್ಕಳ ಬಗ್ಗೆ ಮಾತಾಡಿದ್ದೆಲ್ಲ ಗೊತ್ತಿದೆ: ಚಲುವರಾಯಸ್ಚಾಮಿ
ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು
ಮದುವೆ ಮಂಟಪಕ್ಕೆ ತಮ್ಮ ರಾಣಾನ ಕರೆತಂದ ರಕ್ಷಿತಾ
ಮದುವೆ ಮಂಟಪಕ್ಕೆ ತಮ್ಮ ರಾಣಾನ ಕರೆತಂದ ರಕ್ಷಿತಾ
ಸಿಬಿಐಗೆ ರಾಜ್ಯಸರ್ಕಾರ ಅನುಮತಿಯ ಅವಶ್ಯಕತೆ ಇರುತ್ತದೆ: ಪರಮೇಶ್ವರ್
ಸಿಬಿಐಗೆ ರಾಜ್ಯಸರ್ಕಾರ ಅನುಮತಿಯ ಅವಶ್ಯಕತೆ ಇರುತ್ತದೆ: ಪರಮೇಶ್ವರ್
ಮಹಾಕುಂಭ ಮೇಳ: ಹರಿಹರಾನಂದ ಸ್ವಾಮೀಜಿ ಇದ್ದ ಟೆಂಟ್​ನಲ್ಲಿ ಅಗ್ನಿ ಅವಘಡ
ಮಹಾಕುಂಭ ಮೇಳ: ಹರಿಹರಾನಂದ ಸ್ವಾಮೀಜಿ ಇದ್ದ ಟೆಂಟ್​ನಲ್ಲಿ ಅಗ್ನಿ ಅವಘಡ