AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2025: ಮೋದಿ ಸರ್ಕಾರದ ಬಜೆಟ್​ಗೆ ಕೌಂಟ್‌ಡೌನ್, ಇಡೀ ದೇಶದ ಚಿತ್ತ ಬಜೆಟ್​ನತ್ತ

2025ನೇ ಸಾಲಿನ ಕೇಂದ್ರ ಬಜೆಟ್ ಅಧಿವೇಶನ ರಾಷ್ಟ್ರಪತಿಗಳ ಭಾಷಣದ ಮೂಲಕ ಆರಂಭಗೊಂಡಿದೆ. ಇಂದು(ಫೆಬ್ರವರಿ 01) ಬೆಳಗ್ಗೆ 11 ಗಂಟೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್​ ಮಂಡನೆ ಮಾಡಲಿದ್ದು, ಯಾವ ಕ್ಷೇತ್ರಕ್ಕೆ ಏನೇನು ಬಂಪರ್ ಕೊಡುಗೆ ಘೋಷಣೆ ಮಾಡುತ್ತಾರೆ ಎಂದು ಇಡೀ ದೇಶವೇ ಬಜೆಟ್​ನತ್ತ ಚಿತ್ತ ನೆಟ್ಟಿದೆ. ಇನ್ನು ಈ ಬಜೆಟ್​ನ ಕ್ಷಣ ಕ್ಷಣದ ಮಾಹಿತಿಯನ್ನು ನಿಮ್ಮ ಟಿವಿ9 ಡಿಜಿಟಲ್​ ನೀಡುತ್ತಿದ್ದು, ಒಂದೇ ಕ್ಲಿಕ್​ನಲ್ಲಿ ಇಡೀ ಬಜೆಟ್​ನ ಮಾಹಿತಿಯನ್ನು ಪಡೆದುಕೊಳ್ಳಬಹುದು.

Budget 2025: ಮೋದಿ ಸರ್ಕಾರದ ಬಜೆಟ್​ಗೆ ಕೌಂಟ್‌ಡೌನ್, ಇಡೀ ದೇಶದ ಚಿತ್ತ ಬಜೆಟ್​ನತ್ತ
Union Budget 2025
ರಮೇಶ್ ಬಿ. ಜವಳಗೇರಾ
| Edited By: |

Updated on:Feb 01, 2025 | 7:07 AM

Share

ನವದೆಹಲಿ, (ಜನವರಿ 31): ಈಗಾಗಲೇ ನಿನ್ನೆಯಿಂದ (ಜನವರಿ 31) ಬಜೆಟ್ ಅಧಿವೇಶನ ಶುರುವಾಗಿದ್ದು, ಮೊದಲ ದಿನ ರಾಷ್ಟ್ರಪತಿ ದ್ರೌಪತಿ ಮುರ್ಮು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಿದ್ದಾರೆ. ಇದಾದ ನಂತರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉಭಯ ಸದನದಲ್ಲೂ ಆರ್ಥಿಕ ಸಮೀಕ್ಷಾ ವರದಿ ಮಂಡಿಸಿದ್ದು,. 2024-25 ರ ಆರ್ಥಿಕ ಸಮೀಕ್ಷೆಯ ಪ್ರಕಾರ 2025-26 ಹಣಕಾಸು ವರ್ಷದಲ್ಲಿ ಭಾರತದ GDP ಬೆಳವಣಿಗೆಯು 6.3% ಮತ್ತು 6.8% ರ ನಡುವೆ ಇರುತ್ತದೆ ಎಂದು ನಿರೀಕ್ಷಿಸಲಾಗಿದೆ. ಮುಂಬರುವ ವರ್ಷದಲ್ಲಿ ಆರ್ಥಿಕ ಬೆಳವಣಿಗೆ ನಿಧಾನವಾಗಬಹುದು ಎಂದು ಪ್ರೊಜೆಕ್ಷನ್ ಸೂಚಿಸಿದೆ. ಇದನ್ನೆಲ್ಲಾ ಬ್ಯಾಲೆನ್ಸ್ ಮಾಡುವಂತ ಇಂದು(ಫೆಬ್ರವರಿ 01)  ಬಜೆಟ್ ಮಂಡಿಸಲು ಸಜ್ಜಾಗಿದ್ದು, ಮೋದಿ ಸರ್ಕಾರದ ಲೆಕ್ಕಕ್ಕೆ ಕೌಂಟ್‌ಡೌನ್ ಶುರುವಾಗಿದೆ.

ಬಜೆಟ್ ನಿರೀಕ್ಷೆಗಳು

ಜನಸಮಾನ್ಯರು, ವೇತನದಾರರು, ಸ್ತ್ರೀ ಸಮುದಾಯ, ದೇಶದ ಮಧ್ಯಮವರ್ಗ ಉಸಿರು ಬಿಗಿ ಹಿಡಿದು ಕಾಯುತ್ತಿರೋ ಬಜೆಟ್‌ಗೆ ಕೌಂಟ್‌ಡೌನ್ ಶುರುವಾಗಿದೆ. ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಪೂರ್ಣಪ್ರಮಾಣಧ ಬಜೆಟ್‌ಗೆ ಕ್ಷಣಗಣನೆ ಶುರುವಾಗಿದೆ. ಬಡ ಮತ್ತು ಮಧ್ಯಮವರ್ಗ ರೈತರು, ವ್ಯಾಪಾರಿಗಳಿಗೆ, ವೇತನದಾರರಿಗೆ ಮೋದಿ ಭರ್ಜರಿ ಗಿಫ್ಟ್ ಕೊಡುತ್ತಾರೆಂಬ ನಿರೀಕ್ಷೆ ಇದೆ. ಈ ಸುಳಿವು ನೀಡಿರುವ ಮೋದಿ, ಐತಿಹಾಸಿಕ ಬಜೆಟ್​ ಮಂಡಿಸುತ್ತೇವೆ ಎಂದಿದ್ದಾರೆ. ಹೀಗಾಗಿ ಜನಸಾಮಾನ್ಯರಿಗೆ ಈ ಬಜೆಟ್​ನಲ್ಲಿ ಬಂಪರ್ ಸಿಗುತ್ತಾ ಎಂದು ಕಾದುಕುಳಿತಿದ್ದಾರೆ.

ಇದನ್ನೂ ಓದಿ: ಕೇಂದ್ರ ಹಣಕಾಸು ಸಚಿವೆ ನೇತೃತ್ವದ ಬಜೆಟ್ ಟೀಮ್​ನ ಪ್ರಮುಖ ಸದಸ್ಯರಿವರು…

ಇಂದಿನ ಬಜೆಟ್ ಅನ್ನ ವೇತನದಾರರ ವರ್ಗ ಉಸಿರು ಬಿಗಿ ಹಿಡಿದು ನೋಡ್ತಿದೆ. ಯಾಕಂದ್ರೆ, ತೆರಿಗೆ ವಿನಾಯಿತಿ ಮಿತಿ ಹೆಚ್ಚಾಗಬಹುದಂಬ ನಿರೀಕ್ಷೆ ಇದೆ. 80C ಅಡಿಯಲ್ಲಿ ಇರುವ ತೆರಿಗೆ ವಿನಾಯಿತಿಯನ್ನ ಒಂದೂವರೆ ಲಕ್ಷದಿಂದ ಎರಡು ಲಕ್ಷಕ್ಕೆ ಏರಿಸುವ ಸಾಧ್ಯತೆ ಇದೆ. ಹಾಗೆಯೇ ಸದ್ಯ 15ಲಕ್ಷಕ್ಕಿಂತ ಹೆಚ್ಚು ವೇತನ ಪಡೆಯುವವರು 30ರಷ್ಟು ಆದಾಯ ಪಾವತಿಸುತ್ತಿದ್ದಾರೆ. ಈ ಮಿತಿಯನ್ನ 20ಲಕ್ಷಕ್ಕೆ ಏರಿಕೆ ಮಾಡಿ, 15ರಿಂದ 20ಲಕ್ಷಕ್ಕೆ ಮತ್ತೊಂದು ಸ್ಲ್ಯಾಬ್ ನೀಡಬಹುದು ಎನ್ನಲಾಗುತ್ತಿದೆ. ಇನ್ನೂ ಹೊಸ ತೆರಿಗೆ ಪದ್ಧತಿಯಲ್ಲಿ ಸ್ಟ್ಯಾಂಡರ್ಡ್ ಡಿಡಕ್ಷನ್ 75 ಸಾವಿರ ಇದ್ದು, ಇದನ್ನ 1ಲಕ್ಷಕ್ಕೆ ಏರಿಕೆ ಮಾಡುವ ನಿರೀಕ್ಷೆ ಇದೆ. ಹಾಗೆಯೇ ಸದ್ಯ 7ಲಕ್ಷ ದಾಟಿದ್ರೆ 3ಲಕ್ಷದಿಂದಲೂ ತೆರಿಗೆ ಪಾವತಿಸುವ ಪದ್ಧತಿಯಿದೆ. ಈ ಮೀತಿಯನ್ನ 5ಲಕ್ಷಕ್ಕೆ ಹೆಚ್ಚಿಸಬಹುದು. ಈ ಮೂಲಕ ಹಳೇ ತೆರಿಗೆ ಪದ್ಧತಿಗೆ ನಿಧಾನವಾಗಿ ತಿಲಾಂಜಲಿ ಹಾಡಿ ಹೊಸ ತೆರಿಗೆ ಪದ್ಧತಿಗೆ ಉತ್ತೇಜನ ನೀಡಲು 7ಲಕ್ಷದವರೆಗೂ ಇರೋ ತೆರಿಗೆ ವಿನಾಯಿತಿಯನ್ನ 10ಲಕ್ಷಕ್ಕೆ ಹೆಚ್ಚಿಸಬೇಕೆಂಬ ಬೇಡಿಕೆ ಇದೆ.

ಕೇಂದ್ರ ಬಜೆಟ್​ ಲೈವ್​​ ಆಗಿ ಇಲ್ಲಿ ವೀಕ್ಷಿಸಿ

ಇನ್ನೂ ನಾಳಿನ ಬಜೆಟ್‌ ಮೇಲೆ ಕರ್ನಾಟಕವೂ ಬಹಳ ನಿರೀಕ್ಷೆ ಇಟ್ಟುಕೊಂಡಿದೆ. ರಾಜ್ಯಕ್ಕೆ ಬರಬೇಕಾದ ಅನುದಾನ, ವಿವಿಧ ಯೋಜನೆಗಳಡಿ ಕೇಂದ್ರ ಸರ್ಕಾರ ಉಳಿಸಿಕೊಂಡಿರುವ ಬಾಕಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಗೌರವಧನ, ರೈಲ್ವೆ ಯೋಜನೆಗಳು, ಮಹದಾಯಿ ಯೋಜನೆಗೆ ಅನುಮತಿ, ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಬೇಕೆಂಬ ಬೇಡಿಕೆ ಇದೆ. ಇದೆಲ್ಲಾ ಇಂದಿನ ಬಜೆಟ್‌ನಲ್ಲಿ ಈಡೇರುತ್ತಾ ಎನ್ನುವುದನ್ನ ಕಾದು ನೋಡಬೇಕಿದೆ.

ಇನ್ನು ಬಜೆಟ್​ನ ಕ್ಷಣ ಕ್ಷಣದ ಮಾಹಿತಿಯನ್ನು ತಿಳಿದುಕೊಳ್ಳಲು ಟಿವಿ9 ಕನ್ನಡ ಡಿಜಿಟಲ್ ಫಾಲೋ ಮಾಡಿ.​

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:00 am, Sat, 1 February 25

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ