Budget 2025: ಮೋದಿ ಸರ್ಕಾರದ ಬಜೆಟ್​ಗೆ ಕೌಂಟ್‌ಡೌನ್, ಇಡೀ ದೇಶದ ಚಿತ್ತ ಬಜೆಟ್​ನತ್ತ

2025ನೇ ಸಾಲಿನ ಕೇಂದ್ರ ಬಜೆಟ್ ಅಧಿವೇಶನ ರಾಷ್ಟ್ರಪತಿಗಳ ಭಾಷಣದ ಮೂಲಕ ಆರಂಭಗೊಂಡಿದೆ. ಇಂದು(ಫೆಬ್ರವರಿ 01) ಬೆಳಗ್ಗೆ 11 ಗಂಟೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್​ ಮಂಡನೆ ಮಾಡಲಿದ್ದು, ಯಾವ ಕ್ಷೇತ್ರಕ್ಕೆ ಏನೇನು ಬಂಪರ್ ಕೊಡುಗೆ ಘೋಷಣೆ ಮಾಡುತ್ತಾರೆ ಎಂದು ಇಡೀ ದೇಶವೇ ಬಜೆಟ್​ನತ್ತ ಚಿತ್ತ ನೆಟ್ಟಿದೆ. ಇನ್ನು ಈ ಬಜೆಟ್​ನ ಕ್ಷಣ ಕ್ಷಣದ ಮಾಹಿತಿಯನ್ನು ನಿಮ್ಮ ಟಿವಿ9 ಡಿಜಿಟಲ್​ ನೀಡುತ್ತಿದ್ದು, ಒಂದೇ ಕ್ಲಿಕ್​ನಲ್ಲಿ ಇಡೀ ಬಜೆಟ್​ನ ಮಾಹಿತಿಯನ್ನು ಪಡೆದುಕೊಳ್ಳಬಹುದು.

Budget 2025: ಮೋದಿ ಸರ್ಕಾರದ ಬಜೆಟ್​ಗೆ ಕೌಂಟ್‌ಡೌನ್, ಇಡೀ ದೇಶದ ಚಿತ್ತ ಬಜೆಟ್​ನತ್ತ
Union Budget 2025
Follow us
ರಮೇಶ್ ಬಿ. ಜವಳಗೇರಾ
| Updated By: ವಿವೇಕ ಬಿರಾದಾರ

Updated on:Feb 01, 2025 | 7:07 AM

ನವದೆಹಲಿ, (ಜನವರಿ 31): ಈಗಾಗಲೇ ನಿನ್ನೆಯಿಂದ (ಜನವರಿ 31) ಬಜೆಟ್ ಅಧಿವೇಶನ ಶುರುವಾಗಿದ್ದು, ಮೊದಲ ದಿನ ರಾಷ್ಟ್ರಪತಿ ದ್ರೌಪತಿ ಮುರ್ಮು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಿದ್ದಾರೆ. ಇದಾದ ನಂತರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉಭಯ ಸದನದಲ್ಲೂ ಆರ್ಥಿಕ ಸಮೀಕ್ಷಾ ವರದಿ ಮಂಡಿಸಿದ್ದು,. 2024-25 ರ ಆರ್ಥಿಕ ಸಮೀಕ್ಷೆಯ ಪ್ರಕಾರ 2025-26 ಹಣಕಾಸು ವರ್ಷದಲ್ಲಿ ಭಾರತದ GDP ಬೆಳವಣಿಗೆಯು 6.3% ಮತ್ತು 6.8% ರ ನಡುವೆ ಇರುತ್ತದೆ ಎಂದು ನಿರೀಕ್ಷಿಸಲಾಗಿದೆ. ಮುಂಬರುವ ವರ್ಷದಲ್ಲಿ ಆರ್ಥಿಕ ಬೆಳವಣಿಗೆ ನಿಧಾನವಾಗಬಹುದು ಎಂದು ಪ್ರೊಜೆಕ್ಷನ್ ಸೂಚಿಸಿದೆ. ಇದನ್ನೆಲ್ಲಾ ಬ್ಯಾಲೆನ್ಸ್ ಮಾಡುವಂತ ಇಂದು(ಫೆಬ್ರವರಿ 01)  ಬಜೆಟ್ ಮಂಡಿಸಲು ಸಜ್ಜಾಗಿದ್ದು, ಮೋದಿ ಸರ್ಕಾರದ ಲೆಕ್ಕಕ್ಕೆ ಕೌಂಟ್‌ಡೌನ್ ಶುರುವಾಗಿದೆ.

ಬಜೆಟ್ ನಿರೀಕ್ಷೆಗಳು

ಜನಸಮಾನ್ಯರು, ವೇತನದಾರರು, ಸ್ತ್ರೀ ಸಮುದಾಯ, ದೇಶದ ಮಧ್ಯಮವರ್ಗ ಉಸಿರು ಬಿಗಿ ಹಿಡಿದು ಕಾಯುತ್ತಿರೋ ಬಜೆಟ್‌ಗೆ ಕೌಂಟ್‌ಡೌನ್ ಶುರುವಾಗಿದೆ. ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಪೂರ್ಣಪ್ರಮಾಣಧ ಬಜೆಟ್‌ಗೆ ಕ್ಷಣಗಣನೆ ಶುರುವಾಗಿದೆ. ಬಡ ಮತ್ತು ಮಧ್ಯಮವರ್ಗ ರೈತರು, ವ್ಯಾಪಾರಿಗಳಿಗೆ, ವೇತನದಾರರಿಗೆ ಮೋದಿ ಭರ್ಜರಿ ಗಿಫ್ಟ್ ಕೊಡುತ್ತಾರೆಂಬ ನಿರೀಕ್ಷೆ ಇದೆ. ಈ ಸುಳಿವು ನೀಡಿರುವ ಮೋದಿ, ಐತಿಹಾಸಿಕ ಬಜೆಟ್​ ಮಂಡಿಸುತ್ತೇವೆ ಎಂದಿದ್ದಾರೆ. ಹೀಗಾಗಿ ಜನಸಾಮಾನ್ಯರಿಗೆ ಈ ಬಜೆಟ್​ನಲ್ಲಿ ಬಂಪರ್ ಸಿಗುತ್ತಾ ಎಂದು ಕಾದುಕುಳಿತಿದ್ದಾರೆ.

ಇದನ್ನೂ ಓದಿ: ಕೇಂದ್ರ ಹಣಕಾಸು ಸಚಿವೆ ನೇತೃತ್ವದ ಬಜೆಟ್ ಟೀಮ್​ನ ಪ್ರಮುಖ ಸದಸ್ಯರಿವರು…

ಇಂದಿನ ಬಜೆಟ್ ಅನ್ನ ವೇತನದಾರರ ವರ್ಗ ಉಸಿರು ಬಿಗಿ ಹಿಡಿದು ನೋಡ್ತಿದೆ. ಯಾಕಂದ್ರೆ, ತೆರಿಗೆ ವಿನಾಯಿತಿ ಮಿತಿ ಹೆಚ್ಚಾಗಬಹುದಂಬ ನಿರೀಕ್ಷೆ ಇದೆ. 80C ಅಡಿಯಲ್ಲಿ ಇರುವ ತೆರಿಗೆ ವಿನಾಯಿತಿಯನ್ನ ಒಂದೂವರೆ ಲಕ್ಷದಿಂದ ಎರಡು ಲಕ್ಷಕ್ಕೆ ಏರಿಸುವ ಸಾಧ್ಯತೆ ಇದೆ. ಹಾಗೆಯೇ ಸದ್ಯ 15ಲಕ್ಷಕ್ಕಿಂತ ಹೆಚ್ಚು ವೇತನ ಪಡೆಯುವವರು 30ರಷ್ಟು ಆದಾಯ ಪಾವತಿಸುತ್ತಿದ್ದಾರೆ. ಈ ಮಿತಿಯನ್ನ 20ಲಕ್ಷಕ್ಕೆ ಏರಿಕೆ ಮಾಡಿ, 15ರಿಂದ 20ಲಕ್ಷಕ್ಕೆ ಮತ್ತೊಂದು ಸ್ಲ್ಯಾಬ್ ನೀಡಬಹುದು ಎನ್ನಲಾಗುತ್ತಿದೆ. ಇನ್ನೂ ಹೊಸ ತೆರಿಗೆ ಪದ್ಧತಿಯಲ್ಲಿ ಸ್ಟ್ಯಾಂಡರ್ಡ್ ಡಿಡಕ್ಷನ್ 75 ಸಾವಿರ ಇದ್ದು, ಇದನ್ನ 1ಲಕ್ಷಕ್ಕೆ ಏರಿಕೆ ಮಾಡುವ ನಿರೀಕ್ಷೆ ಇದೆ. ಹಾಗೆಯೇ ಸದ್ಯ 7ಲಕ್ಷ ದಾಟಿದ್ರೆ 3ಲಕ್ಷದಿಂದಲೂ ತೆರಿಗೆ ಪಾವತಿಸುವ ಪದ್ಧತಿಯಿದೆ. ಈ ಮೀತಿಯನ್ನ 5ಲಕ್ಷಕ್ಕೆ ಹೆಚ್ಚಿಸಬಹುದು. ಈ ಮೂಲಕ ಹಳೇ ತೆರಿಗೆ ಪದ್ಧತಿಗೆ ನಿಧಾನವಾಗಿ ತಿಲಾಂಜಲಿ ಹಾಡಿ ಹೊಸ ತೆರಿಗೆ ಪದ್ಧತಿಗೆ ಉತ್ತೇಜನ ನೀಡಲು 7ಲಕ್ಷದವರೆಗೂ ಇರೋ ತೆರಿಗೆ ವಿನಾಯಿತಿಯನ್ನ 10ಲಕ್ಷಕ್ಕೆ ಹೆಚ್ಚಿಸಬೇಕೆಂಬ ಬೇಡಿಕೆ ಇದೆ.

ಕೇಂದ್ರ ಬಜೆಟ್​ ಲೈವ್​​ ಆಗಿ ಇಲ್ಲಿ ವೀಕ್ಷಿಸಿ

ಇನ್ನೂ ನಾಳಿನ ಬಜೆಟ್‌ ಮೇಲೆ ಕರ್ನಾಟಕವೂ ಬಹಳ ನಿರೀಕ್ಷೆ ಇಟ್ಟುಕೊಂಡಿದೆ. ರಾಜ್ಯಕ್ಕೆ ಬರಬೇಕಾದ ಅನುದಾನ, ವಿವಿಧ ಯೋಜನೆಗಳಡಿ ಕೇಂದ್ರ ಸರ್ಕಾರ ಉಳಿಸಿಕೊಂಡಿರುವ ಬಾಕಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಗೌರವಧನ, ರೈಲ್ವೆ ಯೋಜನೆಗಳು, ಮಹದಾಯಿ ಯೋಜನೆಗೆ ಅನುಮತಿ, ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಬೇಕೆಂಬ ಬೇಡಿಕೆ ಇದೆ. ಇದೆಲ್ಲಾ ಇಂದಿನ ಬಜೆಟ್‌ನಲ್ಲಿ ಈಡೇರುತ್ತಾ ಎನ್ನುವುದನ್ನ ಕಾದು ನೋಡಬೇಕಿದೆ.

ಇನ್ನು ಬಜೆಟ್​ನ ಕ್ಷಣ ಕ್ಷಣದ ಮಾಹಿತಿಯನ್ನು ತಿಳಿದುಕೊಳ್ಳಲು ಟಿವಿ9 ಕನ್ನಡ ಡಿಜಿಟಲ್ ಫಾಲೋ ಮಾಡಿ.​

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:00 am, Sat, 1 February 25

ಸತೀಶ್​ಗೆ ಸಿಎಂ ಆಗುವ ಆಕಾಂಕ್ಷೆ ಬಿಟ್ಟು ಬೇರೆ ಆಸೆ ಏನಾದರೂ ಉಳಿದಿದೆಯಾ?
ಸತೀಶ್​ಗೆ ಸಿಎಂ ಆಗುವ ಆಕಾಂಕ್ಷೆ ಬಿಟ್ಟು ಬೇರೆ ಆಸೆ ಏನಾದರೂ ಉಳಿದಿದೆಯಾ?
ಶತಕದ ಬಳಿಕ ಭಾವುಕರಾಗಿ ಮಾತನಾಡಿದ ರೋಹಿತ್
ಶತಕದ ಬಳಿಕ ಭಾವುಕರಾಗಿ ಮಾತನಾಡಿದ ರೋಹಿತ್
ಏರ್​ಶೋನಲ್ಲಿ ಮಿಂಚಿದ ತುಮಕೂರಿನಲ್ಲಿ ತಯಾರಾದ ಹೆಲಿಕಾಪ್ಟರ್
ಏರ್​ಶೋನಲ್ಲಿ ಮಿಂಚಿದ ತುಮಕೂರಿನಲ್ಲಿ ತಯಾರಾದ ಹೆಲಿಕಾಪ್ಟರ್
ವರಿಷ್ಠರನ್ನು ಭೇಟಿಯಾಗುವ ಅವಕಾಶ ಯತ್ನಾಳ್ ಟೀಮಿಗೆ ಈ ಬಾರಿಯೂ ಇಲ್ಲ!
ವರಿಷ್ಠರನ್ನು ಭೇಟಿಯಾಗುವ ಅವಕಾಶ ಯತ್ನಾಳ್ ಟೀಮಿಗೆ ಈ ಬಾರಿಯೂ ಇಲ್ಲ!
ಏರೋ ಶೋ-2025: ಪೊಲೀಸ್ ಸಿಬ್ಬಂದಿಗೆ ನೀಡಿದ್ದ ಊಟದಲ್ಲಿ ಮತ್ತೆ ಹುಳ ಪತ್ತೆ
ಏರೋ ಶೋ-2025: ಪೊಲೀಸ್ ಸಿಬ್ಬಂದಿಗೆ ನೀಡಿದ್ದ ಊಟದಲ್ಲಿ ಮತ್ತೆ ಹುಳ ಪತ್ತೆ
ರಾಜ್ಯ ಬಿಜೆಪಿ ಬಣ ಬಡಿದಾಟ; ಸೋಮಣ್ಣ ಎರಡೂ ತಂಡಗಳ ಜೊತೆ ಮಾತಾಡುವ ಸಾಧ್ಯತೆ
ರಾಜ್ಯ ಬಿಜೆಪಿ ಬಣ ಬಡಿದಾಟ; ಸೋಮಣ್ಣ ಎರಡೂ ತಂಡಗಳ ಜೊತೆ ಮಾತಾಡುವ ಸಾಧ್ಯತೆ
ಸುಧಾಕರ್ ಯಾವತ್ತೂ ಕಾಂಗ್ರೆಸ್ ಪಕ್ಷಕ್ಕೆ ವಾಪಸ್ಸು ಹೋಗಲ್ಲ: ಮುನಿರತ್ನ
ಸುಧಾಕರ್ ಯಾವತ್ತೂ ಕಾಂಗ್ರೆಸ್ ಪಕ್ಷಕ್ಕೆ ವಾಪಸ್ಸು ಹೋಗಲ್ಲ: ಮುನಿರತ್ನ
ಹಾವೇರಿ: ಡಾಬಾ ಬಂತು ನೋಡು ಎಂದ ಕೂಡಲೇ ಸತ್ತವ ಬದುಕಿದ!
ಹಾವೇರಿ: ಡಾಬಾ ಬಂತು ನೋಡು ಎಂದ ಕೂಡಲೇ ಸತ್ತವ ಬದುಕಿದ!
ಸ್ವಂತ ಖರ್ಚಿನಲ್ಲಿ ದೆಹಲಿ ಬರುತ್ತೇವೆ, ಸುಂಕ ವಸೂಲಿ ಎಲ್ಲಿಂದ ಬಂತು?ಯತ್ನಾಳ್
ಸ್ವಂತ ಖರ್ಚಿನಲ್ಲಿ ದೆಹಲಿ ಬರುತ್ತೇವೆ, ಸುಂಕ ವಸೂಲಿ ಎಲ್ಲಿಂದ ಬಂತು?ಯತ್ನಾಳ್
ಏರ್ ಶೋ: ಸೂರ್ಯ ಕಿರಣ್ ತಂಡದ ವೈಮಾನಿಕ ಸಾಹಸದ ವಿಡಿಯೋ ಇಲ್ಲಿದೆ ನೋಡಿ
ಏರ್ ಶೋ: ಸೂರ್ಯ ಕಿರಣ್ ತಂಡದ ವೈಮಾನಿಕ ಸಾಹಸದ ವಿಡಿಯೋ ಇಲ್ಲಿದೆ ನೋಡಿ