Sign In

By signing in or creating an account, you agree with Associated Broadcasting Company's Terms & Conditions and Privacy Policy.

Union Budget 2025: ಆದಾಯ ತೆರಿಗೆಗೆ ಹೊಸ ಕಾನೂನು, ಮುಂದಿನ ವಾರ ಮಸೂದೆ ಮಂಡನೆ; ನಿರ್ಮಲಾ ಸೀತಾರಾಮನ್ ಘೋಷಣೆ

ಬಜೆಟ್ 2025 ರ ಅತಿದೊಡ್ಡ ಘೋಷಣೆಯನ್ನು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಮಾಡಿದ್ದಾರೆ. ಬಜೆಟ್ ಭಾಷಣದಲ್ಲಿ, ದೇಶದಲ್ಲಿ ಹೊಸ ಆದಾಯ ತೆರಿಗೆ ಕಾನೂನು ಮಾಡಲಾಗುವುದು, ಇದಕ್ಕಾಗಿ ಮುಂದಿನ ವಾರದಲ್ಲಿ ಹೊಸ ಮಸೂದೆಯನ್ನು ತರಲಾಗುವುದು ಎಂದು ಹೇಳಿದರು. ಈ ಮಸೂದೆ ಯಾಕಾಗಿ, ವಿಶೇಷತೆ ಏನು? ಇಲ್ಲಿದೆ ವಿವರ.

Union Budget 2025: ಆದಾಯ ತೆರಿಗೆಗೆ ಹೊಸ ಕಾನೂನು, ಮುಂದಿನ ವಾರ ಮಸೂದೆ ಮಂಡನೆ; ನಿರ್ಮಲಾ ಸೀತಾರಾಮನ್ ಘೋಷಣೆ
ಆದಾಯ ತೆರಿಗೆಗೆ ಹೊಸ ಕಾನೂನು
Follow us
Ganapathi Sharma
|

Updated on:Feb 01, 2025 | 12:24 PM

ನವದೆಹಲಿ, ಫೆಬ್ರವರಿ 1: ಆದಾಯ ತೆರಿಗೆ ಪಾವತಿ ಸರಳೀಕರಣಗೊಳಿಸುವ ನಿಟ್ಟಿನಲ್ಲಿ ಹೊಸ ಆದಾಯ ತೆರಿಗೆ ಕಾನೂನು ರೂಪಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ. ಇದಕ್ಕಾಗಿ ಸರ್ಕಾರ ಮುಂದಿನ ವಾರ ಹೊಸ ಮಸೂದೆ ಮಂಡನೆ ಮಾಡಲಿದೆ ಎಂದು ಅವರು ತಿಳಿಸಿದರು.

1961ರ ಆದಾಯ ತೆರಿಗೆ ಕಾಯಿದೆ ಪ್ರಸ್ತುತ ದೇಶದಲ್ಲಿ ಜಾರಿಯಲ್ಲಿದೆ. 2020 ರ ಬಜೆಟ್‌ನಲ್ಲಿ, ಸರ್ಕಾರವು ಈ ಕಾನೂನಿನ ಅಡಿಯಲ್ಲಿ ಹೊಸ ತೆರಿಗೆ ಪದ್ಧತಿಯನ್ನು ಜಾರಿಗೆ ತಂದಿತ್ತು. ಆದರೆ 2024 ರ ಜುಲೈಯಲ್ಲಿ ಮಂಡಿಸಿದ ಬಜೆಟ್‌ನಲ್ಲಿ, ದೇಶದಲ್ಲಿ ಆದಾಯ ತೆರಿಗೆ ಕಾನೂನನ್ನು ಬದಲಾಯಿಸುವ ಅಗತ್ಯವಿದೆ ಎಂದು ಸರ್ಕಾರ ಸ್ಪಷ್ಟವಾಗಿ ಹೇಳಿತ್ತು. ಇದಕ್ಕಾಗಿ ಪರಿಶೀಲನಾ ಸಮಿತಿ ರಚಿಸಲಾಗಿತ್ತು.

ಈಗ ಅದರ ಆಧಾರದ ಮೇಲೆ, ಸರ್ಕಾರವು ಹೊಸ ಮಸೂದೆಯನ್ನು ತರಲು ಘೋಷಿಸಿದೆ.

ಹೊಸ ಆದಾಯ ತೆರಿಗೆ ಮಸೂದೆಯಲ್ಲಿ ಏನೇನಿರಲಿದೆ?

ಹೊಸ ಆದಾಯ ತೆರಿಗೆ ಮಸೂದೆಯಲ್ಲಿ ಏನಿರಲಿದೆ ಎಂಬುದರ ಕುರಿತು ಬಜೆಟ್‌ನಲ್ಲಿ ಯಾವುದೇ ನಿರ್ದಿಷ್ಟ, ಸ್ಪಷ್ಟ ಘೋಷಣೆ ಮಾಡಲಾಗಿಲ್ಲ. ಆದರೆ ಸರ್ಕಾರವು ಬಜೆಟ್‌ನಲ್ಲಿ ಗುರುತಿಸಿರುವ ಆರು ಪ್ರಮುಖ ಕ್ಷೇತ್ರಗಳಲ್ಲಿ ಇದೂ ಒಂದು ಪ್ರಮುಖ ಸುಧಾರಣೆ ಎಂದು ಉಲ್ಲೇಖಿಸಲಾಗಿದೆ. ಆರ್ಥಿಕ ಸಮೀಕ್ಷೆಯಲ್ಲೂ ದೇಶದಲ್ಲಿ ತೆರಿಗೆ ವ್ಯವಸ್ಥೆಯನ್ನು ಸರಳೀಕರಿಸುವ ಬಗ್ಗೆ ಪ್ರಸ್ತಾಪಿಸಲಾಗಿತ್ತು. ಖಂಡಿತವಾಗಿಯೂ ಸರ್ಕಾರವು ಹೊಸ ಕಾನೂನಿನಲ್ಲಿ ತೆರಿಗೆಗಳನ್ನು ಸರಳಗೊಳಿಸಬಹುದು ಎಂಬ ನಿರೀಕ್ಷೆ ಇದೆ.

ಬಜೆಟ್ ಲೈವ್ ಅಪ್​ಡೇಟ್​ಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೊಸ ಆದಾಯ ತೆರಿಗೆ ಕಾನೂನು ‘ನ್ಯಾಯ’ ನೀಡಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇದು ಈಗಿರುವ ಬಿಲ್‌ಗಿಂತ ಸರಳವಾಗಿರುತ್ತದೆ. ಇದರಿಂದ ವ್ಯಾಜ್ಯಗಳು ಕಡಿಮೆಯಾಗಲಿವ ಎಂದು ಅವರು ಹೇಳಿದ್ದಾರೆ.

ಬಜೆಟ್ ಸಂಬಂಧಿತ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:24 pm, Sat, 1 February 25

ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ
Video: ತ್ರಿವೇಣಿ ಸಂಗಮದಲ್ಲಿ ತಾನು ಮುಳುಗೇಳುವ ಬದಲು ಮೊಬೈಲ್ ಮುಳುಗಿಸಿದ ಯು
Video: ತ್ರಿವೇಣಿ ಸಂಗಮದಲ್ಲಿ ತಾನು ಮುಳುಗೇಳುವ ಬದಲು ಮೊಬೈಲ್ ಮುಳುಗಿಸಿದ ಯು
ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ
ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ
ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ
ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ
Video: ಮದುವೆ ಮನೆಗೆ ಕುದುರೆ ಮೇಲೆ ಬಂದ ವರ, ಅಲ್ಲೇ ಕುಸಿದು ಸಾವು
Video: ಮದುವೆ ಮನೆಗೆ ಕುದುರೆ ಮೇಲೆ ಬಂದ ವರ, ಅಲ್ಲೇ ಕುಸಿದು ಸಾವು
ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ
ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ
ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?
ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?
ಧನಂಜಯ ಕಟ್ಟಿದ ತಾಳಿ ಕಣ್ಣಿಗೆ ಒತ್ತಿಕೊಂಡ ಧನ್ಯತಾ; ಇದು ಭಾವುಕ ಕ್ಷಣ
ಧನಂಜಯ ಕಟ್ಟಿದ ತಾಳಿ ಕಣ್ಣಿಗೆ ಒತ್ತಿಕೊಂಡ ಧನ್ಯತಾ; ಇದು ಭಾವುಕ ಕ್ಷಣ
ಮೆರಿಕದಿಂದ ಅಮೃತಸರಕ್ಕೆ ಬಂದಿಳಿದ 116 ಅಕ್ರಮ ವಲಸಿಗರನ್ನು ಹೊತ್ತ ವಿಮಾನ
ಮೆರಿಕದಿಂದ ಅಮೃತಸರಕ್ಕೆ ಬಂದಿಳಿದ 116 ಅಕ್ರಮ ವಲಸಿಗರನ್ನು ಹೊತ್ತ ವಿಮಾನ