AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Union Budget 2025: ಸ್ಟಾರ್ಟ್‌ಅಪ್ ಕಂಪನಿಗಳಿಗೆ ಭರ್ಜರಿ ಗಿಫ್ಟ್, 20 ಕೋಟಿ ರೂ. ವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ

ಎಂಟನೇ ಬಾರಿ ಬಜೆಟ್​​ ಮಂಡನೆ ಮಾಡುತ್ತಿರುವ ನಿರ್ಮಲಾ ಸೀತಾರಾಮನ್ ಅವರು ಈ ಬಾರಿ ಸ್ಟಾರ್ಟ್‌ಅಪ್ ಕಂಪನಿಗಳಿಗೆ ಭರ್ಜರಿ ಕೊಡುಗೆ ಘೋಷಣೆ ಮಾಡಿದ್ದಾರೆ. ಮೇಕ್ ಇನ್ ಇಂಡಿಯಾ ಯೋಜನೆ ಅಡಿ ಭಾರತವನ್ನು ಜಗತ್ತಿನಲ್ಲೇ ಮುಂಚೂಣಿಯ ಉತ್ಪಾದನಾ ಹಬ್ ಆಗಿ ಮಾಡುವ ಉದ್ದೇಶದೊಂದಿಗೆ, ಸ್ಟಾರ್ಟ್‌ಅಪ್ ಕಂಪನಿಗಳಿಗೆ 20 ಕೋಟಿ ರೂ. ವರೆಗೆ ಕಡಿಮೆ ಬಡ್ಡಿ ಸಾಲ ಘೋಷಿಸಲಾಗಿದೆ.

Union Budget 2025: ಸ್ಟಾರ್ಟ್‌ಅಪ್ ಕಂಪನಿಗಳಿಗೆ ಭರ್ಜರಿ ಗಿಫ್ಟ್, 20 ಕೋಟಿ ರೂ. ವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Feb 01, 2025 | 11:47 AM

Share

ನವದೆಹಲಿ, ಫೆಬ್ರವರಿ 1: ಸ್ಟಾರ್ಟ್‌ಅಪ್ ಕಂಪನಿಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದರು. ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಮಂಡಿಸಿದ ಅವರು, ಸ್ಟಾರ್ಟ್‌ಅಪ್ ಕಂಪನಿಗಳಿಗೆ 10 ಕೋಟಿ ರೂಪಾಯಿಯಿಂದ 20 ಕೋಟಿ ರೂ. ವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗವುದು ಎಂದರು.

ಮೇಕ್ ಇನ್ ಇಂಡಿಯಾ ಯೋಜನೆ ಅಡಿ ಉತ್ಪಾದನೆ ಹೆಚ್ಚಿಸುವುದಕ್ಕಾಗಿ ಮೈಕ್ರೋ ಕಂಪನಿಗಳಿಗೆ 5 ಲಕ್ಷ ರೂ.ವರೆಗೆ ಕ್ರೆಡಿಟ್​​ ಕಾರ್ಡ್ ನೀಡಲಾಗುವುದು. ಮೊದಲ ಹಂತದಲ್ಲಿ 10 ಲಕ್ಷ ಕಾರ್ಡ್ ವಿತರಣೆಯ ಗುರಿ ಹೊಂದಲಾಗಿದೆ. ಇಷ್ಟೇ ಅಲ್ಲದೆ, ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರಿಗೆ ಉತ್ತೇಜಿಸಲು ಹೊಸ ಯೋಜನೆ ಜಾರಿಗೆ ತರಲಾಗುವುದು. ಇದರಿಂದ 22 ಲಕ್ಷ ಉದ್ದಿಮೆದಾರರಿಗೆ ಅನುಕೂಲವಾಗಲಿದೆ.

ಚರ್ಮೋದ್ಯಮವನ್ನು ಉತ್ತೇಜಿಸಲು ರಫ್ತು ಹೆಚ್ಚಿಸುವಲ್ಲಿ ಗಮನ ಹರಿಸಲಾಗುವುದು. ಈ ಮೂಲಕ ಮೇಕ್ ಇನ್ ಇಂಡಿಯಾ ಬ್ರ್ಯಾಂಡ್ ನಿರ್ಮಾಣದ ಗುರಿ ಹೊಂದಲಾಗಿದೆ. ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರಿಗೆ ಉತ್ತೇಜಿಸಲು ಹೊಸ ಯೋಜನೆ ಜಾರಿಗೆ ತರಲಾಗವುದು ಎಂದು ಬಜೆಟ್​​ನಲ್ಲಿ ಘೋಷಿಸಲಾಯಿತು.

ಬಜೆಟ್ ಲೈವ್ ಅಪ್​ಡೇಟ್​ಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದಲ್ಲದೆ, ಮೊದಲ ಬಾರಿ ಉದ್ಯಮ ಆರಂಭಿಸುವ 5 ಲಕ್ಷ ಎಸ್‌ಸಿ, ಎಸ್‌ಟಿ ಮತ್ತು ಮಹಿಳೆಯರಿಗೆ ಹೊಸ ಯೋಜನೆಯನ್ನು ಪ್ರಾರಂಭಿಸಲಾಗುವುದು. ಅಲ್ಲಿ ಅವರಿಗೆ 2 ಕೋಟಿ ರೂಪಾಯಿ ವರೆಗಿನ ಸಾಲವನ್ನು ನೀಡಲಾಗುತ್ತದೆ ಎಂದು ಅವರು ಘೋಷಿಸಿದರು.

ದೇಶದಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಂಖ್ಯೆ ಸುಮಾರು 1 ಕೋಟಿ ಇದ್ದು, 5.7 ಕೋಟಿ ಜನರು ಅವುಗಳೊಂದಿಗೆ ಸಂಬಂಧ ಹೊಂದಿದ್ದಾರೆ. ಭಾರತವನ್ನು ವಿಶ್ವದಲ್ಲೇ ಅಗ್ರ ಪಂಕ್ತಿಯ ಉತ್ಪಾದನಾ ಕೇಂದ್ರವನ್ನಾಗಿ ಮಾಡಲು ಇದು ಸಹಕಾರಿಯಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ಬಜೆಟ್ ಸಂಬಂಧಿತ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ