AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2024: ಹೆರಿಗೆ ರಜೆ, ಕೌಶಲ್ಯ ತರಬೇತಿ ಇತ್ಯಾದಿ; ಮಹಿಳಾ ಉದ್ಯೋಗಿಗಳ ಅಪೇಕ್ಷೆ ಮತ್ತು ನಿರೀಕ್ಷೆಗಳು

Women Employees and Entrepreneurs Expectations: ಉದ್ಯೋಗಸ್ಥ ಮಹಿಳೆಯರಿಗೆ ರಜಾ ದಿನಗಳ ಸಂಖ್ಯೆ ಹೆಚ್ಚಳ, ಕಡ್ಡಾಯ ಹೆರಿಗೆ ರಜೆ ಇತ್ಯಾದಿ ಸೌಲಭ್ಯಗಳನ್ನು ಬಜೆಟ್​ನಲ್ಲಿ ನೀಡಲಿ. ಹಾಗೆಯೇ, ಯುವ ಮಹಿಳೆಯರ ಕೌಶಲ್ಯ ಅಭಿವೃದ್ಧಿಗೆ ತರಬೇತಿ, ಉದ್ದಿಮೆದಾರರಿಗೆ ತೆರಿಗೆ ರಿಯಾಯಿತಿ ಇತ್ಯಾದಿ ಸವಲತ್ತುಗಳು ಸಿಗಲಿ ಎಂಬ ಕೂಗು ಕೇಳಿಬರುತ್ತಿದೆ.

Budget 2024: ಹೆರಿಗೆ ರಜೆ, ಕೌಶಲ್ಯ ತರಬೇತಿ ಇತ್ಯಾದಿ; ಮಹಿಳಾ ಉದ್ಯೋಗಿಗಳ ಅಪೇಕ್ಷೆ ಮತ್ತು ನಿರೀಕ್ಷೆಗಳು
ಮಹಿಳೆಯರು
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 29, 2024 | 12:56 PM

Share

ಇವತ್ತು ವೃತ್ತಿಪರ ಮಹಿಳೆಯರಷ್ಟೇ ಅಲ್ಲ ಕೆಲಸಕ್ಕೆ ಹೋಗುವ ಎಲ್ಲಾ ವರ್ಗದ ಮಹಿಳೆಯರೂ ಬಹಳ ಕೌಟುಂಬಿಕ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಮನೆ ಹಾಗು ಕೆಲಸ ಎರಡನ್ನೂ ಸಂಭಾಳಿಸುವ ಭಾರತ ಮಹಿಳೆಯ ಹೆಗಲಿಗೇ ಹೆಚ್ಚು ಬಿದ್ದಿರುತ್ತದೆ. ಈ ಹಿನ್ನೆಲೆಯಲ್ಲಿ ಕೆಲಸದಲ್ಲಿರುವ ಮಹಿಳೆಯರು ಸರ್ಕಾರದಿಂದಲಾದರೂ ನೆರವು ಸಿಗಬಹುದು ಎಂಬ ಸಹಜ ನಿರೀಕ್ಷೆಯಲ್ಲಿದ್ದಾರೆ. ಸ್ವತಃ ಮಹಿಳೆಯೇ ಆಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್​ನಲ್ಲಿ (Union Budget 2024) ಮಹಿಳೆಯರಿಗೆ ನೆರವಿನ ಹಸ್ತ ಚಾಚುತ್ತಾರಾ?

ಕೆಲಸಕ್ಕೆ ಹೋಗುವ ಮಹಿಳೆಯರಿಗೆ ರಜಾ ದಿನಗಳ ಸಂಖ್ಯೆ ಹೆಚ್ಚಳ, ಕಡ್ಡಾಯ ಹೆರಿಗೆ ರಜೆ ಇತ್ಯಾದಿ ಸೌಲಭ್ಯಗಳನ್ನು ಬಜೆಟ್​ನಲ್ಲಿ ನೀಡಲಿ. ಹಾಗೆಯೇ, ಯುವ ಮಹಿಳೆಯರ ಕೌಶಲ್ಯ ಅಭಿವೃದ್ಧಿಗೆ ತರಬೇತಿ, ಉದ್ದಿಮೆದಾರರಿಗೆ ತೆರಿಗೆ ರಿಯಾಯಿತಿ ಇತ್ಯಾದಿ ಸವಲತ್ತುಗಳು ಸಿಗಲಿ ಎಂಬ ಕೂಗು ಕೇಳಿಬರುತ್ತಿದೆ. ಫೆಬ್ರುವರಿ 1ರಂದು ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ.

ಇದನ್ನೂ ಓದಿ: Union Budget 2024: ಬಜೆಟ್ ಮಂಡನೆ ಬಳಿಕ ನಿರ್ಮಲಾ ಸೀತಾರಾಮನ್ ಪಾಲಾಗಲಿವೆ ಹಲವು ದಾಖಲೆಗಳು, ಇಲ್ಲಿದೆ ವಿವರ

ಹೆರಿಗೆ ರಜೆ…

ಐವತ್ತಕ್ಕೂ ಹೆಚ್ಚು ಉದ್ಯೋಗಿಗಳಿರುವ ಕಂಪನಿಗಳು ಮಹಿಳಾ ಉದ್ಯೋಗಿಗಳಿಗೆ ಆರು ತಿಂಗಳು ಪೇಯ್ಡ್ ಮ್ಯಾಟರ್ನಿಟಿ ಲೀವ್ ಅಥವಾ ಹೆರಿಗೆ ರಜೆ ಕೊಡುವುದನ್ನು ಕಡ್ಡಾಯಗೊಳಿಸಬೇಕು. ಹಾಗೆಯೇ, ಈ ರಜೆ ವಿಚಾರದಲ್ಲಿ ಸಣ್ಣ ಕಂಪನಿಗಳಿಗೆ ಸರ್ಕಾರವೇ ಧನಸಹಾಯ ನೀಡಲು ಆಲೋಚಿಸಬಹುದು ಎಂದು ಸನ್​ಶೈನ್ ಕಾರ್ಪೊರೇಟ್ ಕ್ರೆಷಸ್ ಸಂಸ್ಥೆಯ ಮುಖ್ಯಸ್ಥೆ ಸಲೋನಿ ವರ್ಮಾ ಹೇಳಿದ್ದಾರೆ.

ಬಹಳಷ್ಟು ಕಂಪನಿಗಳು ಮ್ಯಾಟರ್ನಿಟಿ ಲೀವ್ ನೀಡಬೇಕಾದೀತು ಎಂದು ಯುವ ಮಹಿಳೆಯರನ್ನು ಕೆಲಸಕ್ಕೆ ಸೇರಿಸಿಕೊಳ್ಳಲು ಹಿಂದೇಟು ಹಾಕುತ್ತವೆ. ಈ ಹಿನ್ನೆಲೆಯಲ್ಲಿ ಸರ್ಕಾರವೇ ಧನಸಹಾಯ ಮಾಡಲಿ ಎನ್ನುವ ಅನಿಸಿಕೆ ಇದೆ. ಹಾಗೆಯೇ, ಕೆಲಸಕ್ಕೆ ಹೋಗುವ ಮಹಿಳೆಯರಿಗೆ ಪೇಡ್ ಲೀವ್ ಸಂಖ್ಯೆ ಹೆಚ್ಚಿಸಬೇಕು ಎಂಬ ಕೂಗೂ ಇದೆ.

ಇದನ್ನೂ ಓದಿ: Union Budget 2024: ಬಜೆಟ್ ಪದ ಬಳಕೆ ಆರಂಭವಾಗಿದ್ದು ಹೇಗೆ? ಆಯವ್ಯಯದ ಬಗ್ಗೆ ಇಲ್ಲಿದೆ ಆಸಕ್ತಿದಾಯಕ ಮಾಹಿತಿ

ಉದ್ಯೋಗಸ್ಥೆಯರು ಮತ್ತು ಮಹಿಳಾ ಉದ್ದಿಮೆದಾರರಿಗೆ ಬಜೆಟ್ ನಿರೀಕ್ಷೆಗಳು

  • ಹನ್ನೆರಡನೇ ತರಗತಿ ಬಳಿಕ ಯುವ ಮಹಿಳೆಯರಿಗೆ ಕೌಶಲ್ಯ ತರಬೇತಿ ಒದಗಿಸುವ ಕಾರ್ಯಕ್ಕೆ ಒತ್ತು ಕೊಡಬೇಕು.
  • ಮಹಿಳಾ ಸ್ವಸಹಾಯ ಸಂಘಗಳು ಹೆಚ್ಚು ಬಲಯುತವಾಗಿ ಬೆಳೆಯಲು ಇನ್ನಷ್ಟು ಶಕ್ತಿ ತುಂಬಬೇಕು.
  • 50ಕ್ಕೂ ಹೆಚ್ಚು ಉದ್ಯೋಗಿಗಳಿರುವ ಕಂಪನಿಗಳು ಮಹಿಳಾ ಉದ್ಯೋಗಿಗಳಿಗೆ ಆರು ತಿಂಗಳು ಹೆರಿಗೆ ರಜೆ ನೀಡಬೇಕು.
  • ಮಹಿಳಾ ಉದ್ಯೋಗಿಗಳಿಗೆ ಪಾವತಿ ರಜೆಯ ಸಂಖ್ಯೆ ಹೆಚ್ಚಿಸಬೇಕು
  • ಸಣ್ಣ ಕಂಪನಿಗಳಿಗೆ ಹೆರಿಗೆ ರಜೆ ವಿಚಾರವಾಗಿ ಸರ್ಕಾರ ನೆರವು ಒದಗಿಸಬೇಕು.
  • ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆಯ ಭತ್ಯೆಯನ್ನು ಹೆಚ್ಚಿಸಬೇಕು.

ಇನ್ನಷ್ಟು ಬಜೆಟ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!