AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Cylinder Price: ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆಯಲ್ಲಿ ಮತ್ತೆ 100 ರೂ.ಏರಿಕೆ; ಗ್ರಾಹಕರಿಗೆ ತಲೆನೋವಾದ ಬೆಲೆ ಹೆಚ್ಚಳ

Commercial Cylinder Price: 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್​ ಬೆಲೆ ಕಳೆದ ಕೆಲವು ತಿಂಗಳುಗಳಿಂದಲೂ ಏರಿಕೆಯಾಗುತ್ತಿದೆ. ನವೆಂಬರ್​ನಲ್ಲಿ 266 ರೂಪಾಯಿ ಹೆಚ್ಚಾಗಿತ್ತು.

LPG Cylinder Price: ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆಯಲ್ಲಿ ಮತ್ತೆ 100 ರೂ.ಏರಿಕೆ; ಗ್ರಾಹಕರಿಗೆ ತಲೆನೋವಾದ ಬೆಲೆ ಹೆಚ್ಚಳ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Dec 01, 2021 | 10:32 AM

Share

LPG Gas Cylinder Price | ಡಿಸೆಂಬರ್ ತಿಂಗಳ ಮೊದಲ ದಿನವಾದ ಇಂದು ಪೆಟ್ರೋಲಿಯಂ ಕಂಪನಿಗಳು ಸಾಮಾನ್ಯ ಜನರಿಗೆ ಮತ್ತೊಂದು  ಶಾಕ್​ ನೀಡಿವೆ. 19 ಕೆಜಿ ತೂಕದ ಕಮರ್ಷಿಯಲ್​​ ಸಿಲಿಂಡರ್​ ಬೆಲೆಯನ್ನು 100 ರೂಪಾಯಿಗಳಷ್ಟು ಹೆಚ್ಚಿಸಿವೆ.. ಇನ್ನು ಮುಂದೆ ಹೋಟೆಲ್​​, ರೆಸ್ಟೋರೆಂಟ್​ಗಳಲ್ಲಿ ಕೂಡ ಆಹಾರ, ಪಾನೀಯಗಳು ದುಬಾರಿಯಾಗಲಿವೆ. ಈಗಿನ ಬೆಲೆ ಏರಿಕೆಯೊಂದಿಗೆ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ದೆಹಲಿಯಲ್ಲಿ 2101 ರೂಪಾಯಿಗೆ ತಲುಪಿದೆ. ನವೆಂಬರ್​ನಲ್ಲಿ ಇಲ್ಲಿ ಕಮರ್ಷಿಯಲ್ ಸಿಲಿಂಡರ್​ ಬೆಲೆ 2000.50 ರೂ.ಇತ್ತು. ಸದ್ಯದ ಸಮಾಧಾನವೆಂದರೆ ಗೃಹಬಳಕೆಯ ಅಂದರೆ 14.2 ಕೆಜಿ ಸಿಲಿಂಡರ್​​ ಬೆಲೆಯಲ್ಲಿ ಯಾವುದೇ ಏರಿಕೆ ಆಗಿಲ್ಲ. ಆದರೆ 19 ಕೆಜಿ ಸಿಲಿಂಡರ್​ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವುದು ರೆಸ್ಟೋರೆಂಟ್​, ಹೋಟೆಲ್​ ಮಾಲೀಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. 

19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್​ ಬೆಲೆ ಕಳೆದ ಕೆಲವು ತಿಂಗಳುಗಳಿಂದಲೂ ಏರಿಕೆಯಾಗುತ್ತಿದೆ. ನವೆಂಬರ್​ನಲ್ಲಿ 266 ರೂಪಾಯಿ ಹೆಚ್ಚಾಗಿತ್ತು. ಈ ಬಾರಿ 100 ರೂಪಾಯಿ ಏರಿಕೆಯಾಗಿದೆ. ಈ ಮೂಲಕ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್​ ಬೆಲೆ 2101 ರೂ.ಆಗಿದ್ದು, ಕೋಲ್ಕತ್ತದಲ್ಲಿ 2177 ರೂ., ಮುಂಬೈನಲ್ಲಿ 2051 ರೂ., ಚೆನ್ನೈನಲ್ಲಿ 2234 ರೂ.ರಷ್ಟಾಗಿದೆ. ಸದ್ಯಕ್ಕೆ ಗೃಹ ಬಳಕೆಯ ಸಿಲಿಂಡರ್​ ಬೆಲೆ ಏರದೆ ಇದ್ದರೂ, ಮುಂದಿನ ದಿನಗಳಲ್ಲಿ ಅದೂ ಕೂಡ ಹೆಚ್ಚಾಗಲಿದೆ.

ಸದ್ಯ ಪೆಟ್ರೋಲ್​-ಡೀಸೆಲ್​, ಸಿಲಿಂಡರ್​ ಗ್ಯಾಸ್​ ಅಷ್ಟೇ ಅಲ್ಲದೆ ದಿನನಿತ್ಯದ ಬಳಕೆಯ ವಸ್ತುಗಳ ಬೆಲೆಯಲ್ಲೂ ಏರಿಕೆಯಾಗಿದೆ. ಇನ್ನು ಪೆಟ್ರೋಲ್​-ಡೀಸೆಲ್​ ಮೇಲಿನ ಸುಂಕ ಕಡಿಮೆ ಮಾಡಿದ್ದರಿಂದ ಸ್ವಲ್ಪಮಟ್ಟಿಗೆ ಹೊರೆ ಕಡಿಮೆಯಾಗಿದೆ. ಹಾಗೇ, ಸಿಲಿಂಡರ್ ಬೆಲೆಯನ್ನೂ ಇಳಿಸಲು ಮೋದಿ ಸರ್ಕಾರ ಮುಂದಾಗಬೇಕು ಎಂಬುದು ಗ್ರಾಹಕರ ಆಗ್ರಹವಾಗಿದೆ.

ಇದನ್ನೂ ಓದಿ: Viral Video: ಅಪರಿಚಿತ ವ್ಯಕ್ತಿ ನೀಡಿದ ಚಾಕಲೇಟ್​ಗೆ ಮಕ್ಕಳ ಪ್ರತಿಕ್ರಿಯೆ ಹೇಗಿತ್ತು ಗೊತ್ತಾ? ವಿಡಿಯೋ ನೋಡಿ

Published On - 9:55 am, Wed, 1 December 21

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ