AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Cylinder Price: ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆಯಲ್ಲಿ ಮತ್ತೆ 100 ರೂ.ಏರಿಕೆ; ಗ್ರಾಹಕರಿಗೆ ತಲೆನೋವಾದ ಬೆಲೆ ಹೆಚ್ಚಳ

Commercial Cylinder Price: 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್​ ಬೆಲೆ ಕಳೆದ ಕೆಲವು ತಿಂಗಳುಗಳಿಂದಲೂ ಏರಿಕೆಯಾಗುತ್ತಿದೆ. ನವೆಂಬರ್​ನಲ್ಲಿ 266 ರೂಪಾಯಿ ಹೆಚ್ಚಾಗಿತ್ತು.

LPG Cylinder Price: ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆಯಲ್ಲಿ ಮತ್ತೆ 100 ರೂ.ಏರಿಕೆ; ಗ್ರಾಹಕರಿಗೆ ತಲೆನೋವಾದ ಬೆಲೆ ಹೆಚ್ಚಳ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Dec 01, 2021 | 10:32 AM

Share

LPG Gas Cylinder Price | ಡಿಸೆಂಬರ್ ತಿಂಗಳ ಮೊದಲ ದಿನವಾದ ಇಂದು ಪೆಟ್ರೋಲಿಯಂ ಕಂಪನಿಗಳು ಸಾಮಾನ್ಯ ಜನರಿಗೆ ಮತ್ತೊಂದು  ಶಾಕ್​ ನೀಡಿವೆ. 19 ಕೆಜಿ ತೂಕದ ಕಮರ್ಷಿಯಲ್​​ ಸಿಲಿಂಡರ್​ ಬೆಲೆಯನ್ನು 100 ರೂಪಾಯಿಗಳಷ್ಟು ಹೆಚ್ಚಿಸಿವೆ.. ಇನ್ನು ಮುಂದೆ ಹೋಟೆಲ್​​, ರೆಸ್ಟೋರೆಂಟ್​ಗಳಲ್ಲಿ ಕೂಡ ಆಹಾರ, ಪಾನೀಯಗಳು ದುಬಾರಿಯಾಗಲಿವೆ. ಈಗಿನ ಬೆಲೆ ಏರಿಕೆಯೊಂದಿಗೆ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ದೆಹಲಿಯಲ್ಲಿ 2101 ರೂಪಾಯಿಗೆ ತಲುಪಿದೆ. ನವೆಂಬರ್​ನಲ್ಲಿ ಇಲ್ಲಿ ಕಮರ್ಷಿಯಲ್ ಸಿಲಿಂಡರ್​ ಬೆಲೆ 2000.50 ರೂ.ಇತ್ತು. ಸದ್ಯದ ಸಮಾಧಾನವೆಂದರೆ ಗೃಹಬಳಕೆಯ ಅಂದರೆ 14.2 ಕೆಜಿ ಸಿಲಿಂಡರ್​​ ಬೆಲೆಯಲ್ಲಿ ಯಾವುದೇ ಏರಿಕೆ ಆಗಿಲ್ಲ. ಆದರೆ 19 ಕೆಜಿ ಸಿಲಿಂಡರ್​ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವುದು ರೆಸ್ಟೋರೆಂಟ್​, ಹೋಟೆಲ್​ ಮಾಲೀಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. 

19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್​ ಬೆಲೆ ಕಳೆದ ಕೆಲವು ತಿಂಗಳುಗಳಿಂದಲೂ ಏರಿಕೆಯಾಗುತ್ತಿದೆ. ನವೆಂಬರ್​ನಲ್ಲಿ 266 ರೂಪಾಯಿ ಹೆಚ್ಚಾಗಿತ್ತು. ಈ ಬಾರಿ 100 ರೂಪಾಯಿ ಏರಿಕೆಯಾಗಿದೆ. ಈ ಮೂಲಕ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್​ ಬೆಲೆ 2101 ರೂ.ಆಗಿದ್ದು, ಕೋಲ್ಕತ್ತದಲ್ಲಿ 2177 ರೂ., ಮುಂಬೈನಲ್ಲಿ 2051 ರೂ., ಚೆನ್ನೈನಲ್ಲಿ 2234 ರೂ.ರಷ್ಟಾಗಿದೆ. ಸದ್ಯಕ್ಕೆ ಗೃಹ ಬಳಕೆಯ ಸಿಲಿಂಡರ್​ ಬೆಲೆ ಏರದೆ ಇದ್ದರೂ, ಮುಂದಿನ ದಿನಗಳಲ್ಲಿ ಅದೂ ಕೂಡ ಹೆಚ್ಚಾಗಲಿದೆ.

ಸದ್ಯ ಪೆಟ್ರೋಲ್​-ಡೀಸೆಲ್​, ಸಿಲಿಂಡರ್​ ಗ್ಯಾಸ್​ ಅಷ್ಟೇ ಅಲ್ಲದೆ ದಿನನಿತ್ಯದ ಬಳಕೆಯ ವಸ್ತುಗಳ ಬೆಲೆಯಲ್ಲೂ ಏರಿಕೆಯಾಗಿದೆ. ಇನ್ನು ಪೆಟ್ರೋಲ್​-ಡೀಸೆಲ್​ ಮೇಲಿನ ಸುಂಕ ಕಡಿಮೆ ಮಾಡಿದ್ದರಿಂದ ಸ್ವಲ್ಪಮಟ್ಟಿಗೆ ಹೊರೆ ಕಡಿಮೆಯಾಗಿದೆ. ಹಾಗೇ, ಸಿಲಿಂಡರ್ ಬೆಲೆಯನ್ನೂ ಇಳಿಸಲು ಮೋದಿ ಸರ್ಕಾರ ಮುಂದಾಗಬೇಕು ಎಂಬುದು ಗ್ರಾಹಕರ ಆಗ್ರಹವಾಗಿದೆ.

ಇದನ್ನೂ ಓದಿ: Viral Video: ಅಪರಿಚಿತ ವ್ಯಕ್ತಿ ನೀಡಿದ ಚಾಕಲೇಟ್​ಗೆ ಮಕ್ಕಳ ಪ್ರತಿಕ್ರಿಯೆ ಹೇಗಿತ್ತು ಗೊತ್ತಾ? ವಿಡಿಯೋ ನೋಡಿ

Published On - 9:55 am, Wed, 1 December 21

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ