Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Cylinder Price: ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆಯಲ್ಲಿ ಮತ್ತೆ 100 ರೂ.ಏರಿಕೆ; ಗ್ರಾಹಕರಿಗೆ ತಲೆನೋವಾದ ಬೆಲೆ ಹೆಚ್ಚಳ

Commercial Cylinder Price: 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್​ ಬೆಲೆ ಕಳೆದ ಕೆಲವು ತಿಂಗಳುಗಳಿಂದಲೂ ಏರಿಕೆಯಾಗುತ್ತಿದೆ. ನವೆಂಬರ್​ನಲ್ಲಿ 266 ರೂಪಾಯಿ ಹೆಚ್ಚಾಗಿತ್ತು.

LPG Cylinder Price: ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆಯಲ್ಲಿ ಮತ್ತೆ 100 ರೂ.ಏರಿಕೆ; ಗ್ರಾಹಕರಿಗೆ ತಲೆನೋವಾದ ಬೆಲೆ ಹೆಚ್ಚಳ
ಸಾಂಕೇತಿಕ ಚಿತ್ರ
Follow us
TV9 Web
| Updated By: Digi Tech Desk

Updated on:Dec 01, 2021 | 10:32 AM

LPG Gas Cylinder Price | ಡಿಸೆಂಬರ್ ತಿಂಗಳ ಮೊದಲ ದಿನವಾದ ಇಂದು ಪೆಟ್ರೋಲಿಯಂ ಕಂಪನಿಗಳು ಸಾಮಾನ್ಯ ಜನರಿಗೆ ಮತ್ತೊಂದು  ಶಾಕ್​ ನೀಡಿವೆ. 19 ಕೆಜಿ ತೂಕದ ಕಮರ್ಷಿಯಲ್​​ ಸಿಲಿಂಡರ್​ ಬೆಲೆಯನ್ನು 100 ರೂಪಾಯಿಗಳಷ್ಟು ಹೆಚ್ಚಿಸಿವೆ.. ಇನ್ನು ಮುಂದೆ ಹೋಟೆಲ್​​, ರೆಸ್ಟೋರೆಂಟ್​ಗಳಲ್ಲಿ ಕೂಡ ಆಹಾರ, ಪಾನೀಯಗಳು ದುಬಾರಿಯಾಗಲಿವೆ. ಈಗಿನ ಬೆಲೆ ಏರಿಕೆಯೊಂದಿಗೆ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ದೆಹಲಿಯಲ್ಲಿ 2101 ರೂಪಾಯಿಗೆ ತಲುಪಿದೆ. ನವೆಂಬರ್​ನಲ್ಲಿ ಇಲ್ಲಿ ಕಮರ್ಷಿಯಲ್ ಸಿಲಿಂಡರ್​ ಬೆಲೆ 2000.50 ರೂ.ಇತ್ತು. ಸದ್ಯದ ಸಮಾಧಾನವೆಂದರೆ ಗೃಹಬಳಕೆಯ ಅಂದರೆ 14.2 ಕೆಜಿ ಸಿಲಿಂಡರ್​​ ಬೆಲೆಯಲ್ಲಿ ಯಾವುದೇ ಏರಿಕೆ ಆಗಿಲ್ಲ. ಆದರೆ 19 ಕೆಜಿ ಸಿಲಿಂಡರ್​ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವುದು ರೆಸ್ಟೋರೆಂಟ್​, ಹೋಟೆಲ್​ ಮಾಲೀಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. 

19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್​ ಬೆಲೆ ಕಳೆದ ಕೆಲವು ತಿಂಗಳುಗಳಿಂದಲೂ ಏರಿಕೆಯಾಗುತ್ತಿದೆ. ನವೆಂಬರ್​ನಲ್ಲಿ 266 ರೂಪಾಯಿ ಹೆಚ್ಚಾಗಿತ್ತು. ಈ ಬಾರಿ 100 ರೂಪಾಯಿ ಏರಿಕೆಯಾಗಿದೆ. ಈ ಮೂಲಕ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್​ ಬೆಲೆ 2101 ರೂ.ಆಗಿದ್ದು, ಕೋಲ್ಕತ್ತದಲ್ಲಿ 2177 ರೂ., ಮುಂಬೈನಲ್ಲಿ 2051 ರೂ., ಚೆನ್ನೈನಲ್ಲಿ 2234 ರೂ.ರಷ್ಟಾಗಿದೆ. ಸದ್ಯಕ್ಕೆ ಗೃಹ ಬಳಕೆಯ ಸಿಲಿಂಡರ್​ ಬೆಲೆ ಏರದೆ ಇದ್ದರೂ, ಮುಂದಿನ ದಿನಗಳಲ್ಲಿ ಅದೂ ಕೂಡ ಹೆಚ್ಚಾಗಲಿದೆ.

ಸದ್ಯ ಪೆಟ್ರೋಲ್​-ಡೀಸೆಲ್​, ಸಿಲಿಂಡರ್​ ಗ್ಯಾಸ್​ ಅಷ್ಟೇ ಅಲ್ಲದೆ ದಿನನಿತ್ಯದ ಬಳಕೆಯ ವಸ್ತುಗಳ ಬೆಲೆಯಲ್ಲೂ ಏರಿಕೆಯಾಗಿದೆ. ಇನ್ನು ಪೆಟ್ರೋಲ್​-ಡೀಸೆಲ್​ ಮೇಲಿನ ಸುಂಕ ಕಡಿಮೆ ಮಾಡಿದ್ದರಿಂದ ಸ್ವಲ್ಪಮಟ್ಟಿಗೆ ಹೊರೆ ಕಡಿಮೆಯಾಗಿದೆ. ಹಾಗೇ, ಸಿಲಿಂಡರ್ ಬೆಲೆಯನ್ನೂ ಇಳಿಸಲು ಮೋದಿ ಸರ್ಕಾರ ಮುಂದಾಗಬೇಕು ಎಂಬುದು ಗ್ರಾಹಕರ ಆಗ್ರಹವಾಗಿದೆ.

ಇದನ್ನೂ ಓದಿ: Viral Video: ಅಪರಿಚಿತ ವ್ಯಕ್ತಿ ನೀಡಿದ ಚಾಕಲೇಟ್​ಗೆ ಮಕ್ಕಳ ಪ್ರತಿಕ್ರಿಯೆ ಹೇಗಿತ್ತು ಗೊತ್ತಾ? ವಿಡಿಯೋ ನೋಡಿ

Published On - 9:55 am, Wed, 1 December 21

ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ