AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Cylinder Price: 19 ಕೆಜಿ ವಾಣಿಜ್ಯ ಬಳಕೆ ಎಲ್​​ಪಿಜಿ ಸಿಲಿಂಡರ್​ ಬೆಲೆ ದೆಹಲಿಯಲ್ಲಿ 105 ರೂ. ಏರಿಕೆ

Commercial LPG Cylinder Price: ಜನವರಿಯಲ್ಲೂ ಕೂಡ 19 ಕೆಜಿ ಎಲ್​​ಪಿಜಿ ಸಿಲಿಂಡರ್​ ಬೆಲೆ 102.50 ರೂಪಾಯಿ ಕಡಿತಗೊಂಡಿತ್ತು. ಅಲ್ಲಿಯವರೆಗೂ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆ ಸತತವಾಗಿ ಏರಿಕೆಯಾಗುತ್ತಿತ್ತು.

LPG Cylinder Price: 19 ಕೆಜಿ ವಾಣಿಜ್ಯ ಬಳಕೆ ಎಲ್​​ಪಿಜಿ ಸಿಲಿಂಡರ್​ ಬೆಲೆ ದೆಹಲಿಯಲ್ಲಿ 105 ರೂ. ಏರಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 01, 2022 | 8:16 AM

Share

19 ಕೆಜಿ ತೂಕದ ವಾಣಿಜ್ಯ ಬಳಕೆ ಎಲ್​ಪಿಜಿ ಸಿಲಿಂಡರ್​ ಬೆಲೆ (LPG Cylinder Price)ಇಂದು ದೆಹಲಿಯಲ್ಲಿ 105 ರೂಪಾಯಿ ಏರಿಕೆಯಾಗಿದೆ. ಹೀಗಾಗಿ ರಾಷ್ಟ್ರರಾಜಧಾನಿಯಲ್ಲಿ ಇನ್ನು ಮುಂದೆ ಕಮರ್ಷಿಯಲ್​ ಎಲ್​​ಪಿಜಿ ಸಿಲಿಂಡರ್​ ಬೆಲೆ 2012 ರೂಪಾಯಿ. ಇದರೊಂದಿಗೆ 5 ಕೆಜಿ ತೂಕದ ಗ್ಯಾಸ್​ ಸಿಲಿಂಡರ್​ ಬೆಲೆ 27ರೂಪಾಯಿ ಹೆಚ್ಚಾಗಿದ್ದು, ದೆಹಲಿಯಲ್ಲಿ 5ಕೆಜಿ ಸಿಲಿಂಡರ್​ ಬೆಲೆ 569ರೂ.ಗೆ ಏರಿಕೆಯಾಗಿದೆ. 19 ಕೆಜಿ ತೂಕದ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆಯನ್ನು ಫೆಬ್ರವರಿಯಲ್ಲಿ ರಾಷ್ಟ್ರೀಯ ತೈಲು ಮಾರುಕಟ್ಟೆ ಕಂಪನಿಗಳು 91.50ರಷ್ಟು ಕಡಿತಗೊಳಿಸಿದ್ದವು.

ಜನವರಿಯಲ್ಲೂ ಕೂಡ 19 ಕೆಜಿ ಎಲ್​​ಪಿಜಿ ಸಿಲಿಂಡರ್​ ಬೆಲೆ 102.50 ರೂಪಾಯಿ ಕಡಿತಗೊಂಡಿತ್ತು. ಅಲ್ಲಿಯವರೆಗೂ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆ ಸತತವಾಗಿ ಏರಿಕೆಯಾಗುತ್ತಿತ್ತು. ಹೀಗಾಗಿ ರೆಸ್ಟೋರೆಂಟ್​ಗಳು, ಹೋಟೆಲ್​​ಗಳು, ಉಪಾಹಾರ ಗೃಹಗಳ ಮಾಲೀಕರಿಗೆ ಕೊಂಚ ಹೊರೆ ತಗ್ಗಿತ್ತು. ಆದರೆ ಇಂದು ಮತ್ತೆ ದೆಹಲಿಯಲ್ಲಿ 105 ರೂ. ಏರಿಕೆಯಾಗಿದ್ದು, ವಿವಿಧ ಮಹಾನಗರಗಳಲ್ಲೂ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಲಿದೆ.

ಡಿಸೆಂಬರ್​​ನಲ್ಲಿ ದೆಹಲಿಯಲ್ಲಿ 19 ಕೆಜಿ ಎಲ್​​ಪಿಜಿ ಸಿಲಿಂಡರ್​ ಬೆಲೆ 100 ರೂಪಾಯಿ ಏರಿಕೆಯಾಗುವ ಮೂಲಕ 2101 ರೂಪಾಯಿ ಆಗಿತ್ತು. 2012-13ರಲ್ಲಿ ಒಮ್ಮೆ ಈ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆ 2200ರೂಪಾಯಿ ತಲುಪಿದ ಮೇಲೆ ಇದೇ ಅತ್ಯಂತ ಹೆಚ್ಚು ಎಂದು ಪರಿಗಣಿಸಲಾಗಿತ್ತು. 2021ರ ಜನವರಿ ಮತ್ತು ಫೆಬ್ರವರಿಯಲ್ಲಿ ಇಳಿಕೆಯಾಗಿತ್ತು.  ಆದರೀಗ ಮತ್ತೆ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್​ ಬೆಲೆ 2000 ರೂಪಾಯಿ ಗಡಿ ದಾಟಿದೆ.

ಇದನ್ನೂ ಓದಿ: Petrol Diesel Rate Today:​ ಬೆಂಗಳೂರು ಸಹಿತ ಇತರ ನಗರಗಳ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ಇಲ್ಲಿ ಪರಿಶೀಲಿಸಿ

Published On - 8:06 am, Tue, 1 March 22

Follow Us
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ