AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Cylinder Price: 19 ಕೆಜಿ ವಾಣಿಜ್ಯ ಬಳಕೆ ಎಲ್​​ಪಿಜಿ ಸಿಲಿಂಡರ್​ ಬೆಲೆ ದೆಹಲಿಯಲ್ಲಿ 105 ರೂ. ಏರಿಕೆ

Commercial LPG Cylinder Price: ಜನವರಿಯಲ್ಲೂ ಕೂಡ 19 ಕೆಜಿ ಎಲ್​​ಪಿಜಿ ಸಿಲಿಂಡರ್​ ಬೆಲೆ 102.50 ರೂಪಾಯಿ ಕಡಿತಗೊಂಡಿತ್ತು. ಅಲ್ಲಿಯವರೆಗೂ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆ ಸತತವಾಗಿ ಏರಿಕೆಯಾಗುತ್ತಿತ್ತು.

LPG Cylinder Price: 19 ಕೆಜಿ ವಾಣಿಜ್ಯ ಬಳಕೆ ಎಲ್​​ಪಿಜಿ ಸಿಲಿಂಡರ್​ ಬೆಲೆ ದೆಹಲಿಯಲ್ಲಿ 105 ರೂ. ಏರಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 01, 2022 | 8:16 AM

Share

19 ಕೆಜಿ ತೂಕದ ವಾಣಿಜ್ಯ ಬಳಕೆ ಎಲ್​ಪಿಜಿ ಸಿಲಿಂಡರ್​ ಬೆಲೆ (LPG Cylinder Price)ಇಂದು ದೆಹಲಿಯಲ್ಲಿ 105 ರೂಪಾಯಿ ಏರಿಕೆಯಾಗಿದೆ. ಹೀಗಾಗಿ ರಾಷ್ಟ್ರರಾಜಧಾನಿಯಲ್ಲಿ ಇನ್ನು ಮುಂದೆ ಕಮರ್ಷಿಯಲ್​ ಎಲ್​​ಪಿಜಿ ಸಿಲಿಂಡರ್​ ಬೆಲೆ 2012 ರೂಪಾಯಿ. ಇದರೊಂದಿಗೆ 5 ಕೆಜಿ ತೂಕದ ಗ್ಯಾಸ್​ ಸಿಲಿಂಡರ್​ ಬೆಲೆ 27ರೂಪಾಯಿ ಹೆಚ್ಚಾಗಿದ್ದು, ದೆಹಲಿಯಲ್ಲಿ 5ಕೆಜಿ ಸಿಲಿಂಡರ್​ ಬೆಲೆ 569ರೂ.ಗೆ ಏರಿಕೆಯಾಗಿದೆ. 19 ಕೆಜಿ ತೂಕದ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆಯನ್ನು ಫೆಬ್ರವರಿಯಲ್ಲಿ ರಾಷ್ಟ್ರೀಯ ತೈಲು ಮಾರುಕಟ್ಟೆ ಕಂಪನಿಗಳು 91.50ರಷ್ಟು ಕಡಿತಗೊಳಿಸಿದ್ದವು.

ಜನವರಿಯಲ್ಲೂ ಕೂಡ 19 ಕೆಜಿ ಎಲ್​​ಪಿಜಿ ಸಿಲಿಂಡರ್​ ಬೆಲೆ 102.50 ರೂಪಾಯಿ ಕಡಿತಗೊಂಡಿತ್ತು. ಅಲ್ಲಿಯವರೆಗೂ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆ ಸತತವಾಗಿ ಏರಿಕೆಯಾಗುತ್ತಿತ್ತು. ಹೀಗಾಗಿ ರೆಸ್ಟೋರೆಂಟ್​ಗಳು, ಹೋಟೆಲ್​​ಗಳು, ಉಪಾಹಾರ ಗೃಹಗಳ ಮಾಲೀಕರಿಗೆ ಕೊಂಚ ಹೊರೆ ತಗ್ಗಿತ್ತು. ಆದರೆ ಇಂದು ಮತ್ತೆ ದೆಹಲಿಯಲ್ಲಿ 105 ರೂ. ಏರಿಕೆಯಾಗಿದ್ದು, ವಿವಿಧ ಮಹಾನಗರಗಳಲ್ಲೂ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಲಿದೆ.

ಡಿಸೆಂಬರ್​​ನಲ್ಲಿ ದೆಹಲಿಯಲ್ಲಿ 19 ಕೆಜಿ ಎಲ್​​ಪಿಜಿ ಸಿಲಿಂಡರ್​ ಬೆಲೆ 100 ರೂಪಾಯಿ ಏರಿಕೆಯಾಗುವ ಮೂಲಕ 2101 ರೂಪಾಯಿ ಆಗಿತ್ತು. 2012-13ರಲ್ಲಿ ಒಮ್ಮೆ ಈ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆ 2200ರೂಪಾಯಿ ತಲುಪಿದ ಮೇಲೆ ಇದೇ ಅತ್ಯಂತ ಹೆಚ್ಚು ಎಂದು ಪರಿಗಣಿಸಲಾಗಿತ್ತು. 2021ರ ಜನವರಿ ಮತ್ತು ಫೆಬ್ರವರಿಯಲ್ಲಿ ಇಳಿಕೆಯಾಗಿತ್ತು.  ಆದರೀಗ ಮತ್ತೆ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್​ ಬೆಲೆ 2000 ರೂಪಾಯಿ ಗಡಿ ದಾಟಿದೆ.

ಇದನ್ನೂ ಓದಿ: Petrol Diesel Rate Today:​ ಬೆಂಗಳೂರು ಸಹಿತ ಇತರ ನಗರಗಳ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ಇಲ್ಲಿ ಪರಿಶೀಲಿಸಿ

Published On - 8:06 am, Tue, 1 March 22

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು