AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Cylinder Price: 19 ಕೆಜಿ ವಾಣಿಜ್ಯ ಬಳಕೆ ಎಲ್​​ಪಿಜಿ ಸಿಲಿಂಡರ್​ ಬೆಲೆ ದೆಹಲಿಯಲ್ಲಿ 105 ರೂ. ಏರಿಕೆ

Commercial LPG Cylinder Price: ಜನವರಿಯಲ್ಲೂ ಕೂಡ 19 ಕೆಜಿ ಎಲ್​​ಪಿಜಿ ಸಿಲಿಂಡರ್​ ಬೆಲೆ 102.50 ರೂಪಾಯಿ ಕಡಿತಗೊಂಡಿತ್ತು. ಅಲ್ಲಿಯವರೆಗೂ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆ ಸತತವಾಗಿ ಏರಿಕೆಯಾಗುತ್ತಿತ್ತು.

LPG Cylinder Price: 19 ಕೆಜಿ ವಾಣಿಜ್ಯ ಬಳಕೆ ಎಲ್​​ಪಿಜಿ ಸಿಲಿಂಡರ್​ ಬೆಲೆ ದೆಹಲಿಯಲ್ಲಿ 105 ರೂ. ಏರಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 01, 2022 | 8:16 AM

Share

19 ಕೆಜಿ ತೂಕದ ವಾಣಿಜ್ಯ ಬಳಕೆ ಎಲ್​ಪಿಜಿ ಸಿಲಿಂಡರ್​ ಬೆಲೆ (LPG Cylinder Price)ಇಂದು ದೆಹಲಿಯಲ್ಲಿ 105 ರೂಪಾಯಿ ಏರಿಕೆಯಾಗಿದೆ. ಹೀಗಾಗಿ ರಾಷ್ಟ್ರರಾಜಧಾನಿಯಲ್ಲಿ ಇನ್ನು ಮುಂದೆ ಕಮರ್ಷಿಯಲ್​ ಎಲ್​​ಪಿಜಿ ಸಿಲಿಂಡರ್​ ಬೆಲೆ 2012 ರೂಪಾಯಿ. ಇದರೊಂದಿಗೆ 5 ಕೆಜಿ ತೂಕದ ಗ್ಯಾಸ್​ ಸಿಲಿಂಡರ್​ ಬೆಲೆ 27ರೂಪಾಯಿ ಹೆಚ್ಚಾಗಿದ್ದು, ದೆಹಲಿಯಲ್ಲಿ 5ಕೆಜಿ ಸಿಲಿಂಡರ್​ ಬೆಲೆ 569ರೂ.ಗೆ ಏರಿಕೆಯಾಗಿದೆ. 19 ಕೆಜಿ ತೂಕದ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆಯನ್ನು ಫೆಬ್ರವರಿಯಲ್ಲಿ ರಾಷ್ಟ್ರೀಯ ತೈಲು ಮಾರುಕಟ್ಟೆ ಕಂಪನಿಗಳು 91.50ರಷ್ಟು ಕಡಿತಗೊಳಿಸಿದ್ದವು.

ಜನವರಿಯಲ್ಲೂ ಕೂಡ 19 ಕೆಜಿ ಎಲ್​​ಪಿಜಿ ಸಿಲಿಂಡರ್​ ಬೆಲೆ 102.50 ರೂಪಾಯಿ ಕಡಿತಗೊಂಡಿತ್ತು. ಅಲ್ಲಿಯವರೆಗೂ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆ ಸತತವಾಗಿ ಏರಿಕೆಯಾಗುತ್ತಿತ್ತು. ಹೀಗಾಗಿ ರೆಸ್ಟೋರೆಂಟ್​ಗಳು, ಹೋಟೆಲ್​​ಗಳು, ಉಪಾಹಾರ ಗೃಹಗಳ ಮಾಲೀಕರಿಗೆ ಕೊಂಚ ಹೊರೆ ತಗ್ಗಿತ್ತು. ಆದರೆ ಇಂದು ಮತ್ತೆ ದೆಹಲಿಯಲ್ಲಿ 105 ರೂ. ಏರಿಕೆಯಾಗಿದ್ದು, ವಿವಿಧ ಮಹಾನಗರಗಳಲ್ಲೂ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಲಿದೆ.

ಡಿಸೆಂಬರ್​​ನಲ್ಲಿ ದೆಹಲಿಯಲ್ಲಿ 19 ಕೆಜಿ ಎಲ್​​ಪಿಜಿ ಸಿಲಿಂಡರ್​ ಬೆಲೆ 100 ರೂಪಾಯಿ ಏರಿಕೆಯಾಗುವ ಮೂಲಕ 2101 ರೂಪಾಯಿ ಆಗಿತ್ತು. 2012-13ರಲ್ಲಿ ಒಮ್ಮೆ ಈ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆ 2200ರೂಪಾಯಿ ತಲುಪಿದ ಮೇಲೆ ಇದೇ ಅತ್ಯಂತ ಹೆಚ್ಚು ಎಂದು ಪರಿಗಣಿಸಲಾಗಿತ್ತು. 2021ರ ಜನವರಿ ಮತ್ತು ಫೆಬ್ರವರಿಯಲ್ಲಿ ಇಳಿಕೆಯಾಗಿತ್ತು.  ಆದರೀಗ ಮತ್ತೆ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್​ ಬೆಲೆ 2000 ರೂಪಾಯಿ ಗಡಿ ದಾಟಿದೆ.

ಇದನ್ನೂ ಓದಿ: Petrol Diesel Rate Today:​ ಬೆಂಗಳೂರು ಸಹಿತ ಇತರ ನಗರಗಳ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ಇಲ್ಲಿ ಪರಿಶೀಲಿಸಿ

Published On - 8:06 am, Tue, 1 March 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ