AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Cylinder Price: 19 ಕೆಜಿ ವಾಣಿಜ್ಯ ಬಳಕೆ ಎಲ್​​ಪಿಜಿ ಸಿಲಿಂಡರ್​ ಬೆಲೆ ದೆಹಲಿಯಲ್ಲಿ 105 ರೂ. ಏರಿಕೆ

Commercial LPG Cylinder Price: ಜನವರಿಯಲ್ಲೂ ಕೂಡ 19 ಕೆಜಿ ಎಲ್​​ಪಿಜಿ ಸಿಲಿಂಡರ್​ ಬೆಲೆ 102.50 ರೂಪಾಯಿ ಕಡಿತಗೊಂಡಿತ್ತು. ಅಲ್ಲಿಯವರೆಗೂ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆ ಸತತವಾಗಿ ಏರಿಕೆಯಾಗುತ್ತಿತ್ತು.

LPG Cylinder Price: 19 ಕೆಜಿ ವಾಣಿಜ್ಯ ಬಳಕೆ ಎಲ್​​ಪಿಜಿ ಸಿಲಿಂಡರ್​ ಬೆಲೆ ದೆಹಲಿಯಲ್ಲಿ 105 ರೂ. ಏರಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 01, 2022 | 8:16 AM

Share

19 ಕೆಜಿ ತೂಕದ ವಾಣಿಜ್ಯ ಬಳಕೆ ಎಲ್​ಪಿಜಿ ಸಿಲಿಂಡರ್​ ಬೆಲೆ (LPG Cylinder Price)ಇಂದು ದೆಹಲಿಯಲ್ಲಿ 105 ರೂಪಾಯಿ ಏರಿಕೆಯಾಗಿದೆ. ಹೀಗಾಗಿ ರಾಷ್ಟ್ರರಾಜಧಾನಿಯಲ್ಲಿ ಇನ್ನು ಮುಂದೆ ಕಮರ್ಷಿಯಲ್​ ಎಲ್​​ಪಿಜಿ ಸಿಲಿಂಡರ್​ ಬೆಲೆ 2012 ರೂಪಾಯಿ. ಇದರೊಂದಿಗೆ 5 ಕೆಜಿ ತೂಕದ ಗ್ಯಾಸ್​ ಸಿಲಿಂಡರ್​ ಬೆಲೆ 27ರೂಪಾಯಿ ಹೆಚ್ಚಾಗಿದ್ದು, ದೆಹಲಿಯಲ್ಲಿ 5ಕೆಜಿ ಸಿಲಿಂಡರ್​ ಬೆಲೆ 569ರೂ.ಗೆ ಏರಿಕೆಯಾಗಿದೆ. 19 ಕೆಜಿ ತೂಕದ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆಯನ್ನು ಫೆಬ್ರವರಿಯಲ್ಲಿ ರಾಷ್ಟ್ರೀಯ ತೈಲು ಮಾರುಕಟ್ಟೆ ಕಂಪನಿಗಳು 91.50ರಷ್ಟು ಕಡಿತಗೊಳಿಸಿದ್ದವು.

ಜನವರಿಯಲ್ಲೂ ಕೂಡ 19 ಕೆಜಿ ಎಲ್​​ಪಿಜಿ ಸಿಲಿಂಡರ್​ ಬೆಲೆ 102.50 ರೂಪಾಯಿ ಕಡಿತಗೊಂಡಿತ್ತು. ಅಲ್ಲಿಯವರೆಗೂ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆ ಸತತವಾಗಿ ಏರಿಕೆಯಾಗುತ್ತಿತ್ತು. ಹೀಗಾಗಿ ರೆಸ್ಟೋರೆಂಟ್​ಗಳು, ಹೋಟೆಲ್​​ಗಳು, ಉಪಾಹಾರ ಗೃಹಗಳ ಮಾಲೀಕರಿಗೆ ಕೊಂಚ ಹೊರೆ ತಗ್ಗಿತ್ತು. ಆದರೆ ಇಂದು ಮತ್ತೆ ದೆಹಲಿಯಲ್ಲಿ 105 ರೂ. ಏರಿಕೆಯಾಗಿದ್ದು, ವಿವಿಧ ಮಹಾನಗರಗಳಲ್ಲೂ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಲಿದೆ.

ಡಿಸೆಂಬರ್​​ನಲ್ಲಿ ದೆಹಲಿಯಲ್ಲಿ 19 ಕೆಜಿ ಎಲ್​​ಪಿಜಿ ಸಿಲಿಂಡರ್​ ಬೆಲೆ 100 ರೂಪಾಯಿ ಏರಿಕೆಯಾಗುವ ಮೂಲಕ 2101 ರೂಪಾಯಿ ಆಗಿತ್ತು. 2012-13ರಲ್ಲಿ ಒಮ್ಮೆ ಈ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆ 2200ರೂಪಾಯಿ ತಲುಪಿದ ಮೇಲೆ ಇದೇ ಅತ್ಯಂತ ಹೆಚ್ಚು ಎಂದು ಪರಿಗಣಿಸಲಾಗಿತ್ತು. 2021ರ ಜನವರಿ ಮತ್ತು ಫೆಬ್ರವರಿಯಲ್ಲಿ ಇಳಿಕೆಯಾಗಿತ್ತು.  ಆದರೀಗ ಮತ್ತೆ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್​ ಬೆಲೆ 2000 ರೂಪಾಯಿ ಗಡಿ ದಾಟಿದೆ.

ಇದನ್ನೂ ಓದಿ: Petrol Diesel Rate Today:​ ಬೆಂಗಳೂರು ಸಹಿತ ಇತರ ನಗರಗಳ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ಇಲ್ಲಿ ಪರಿಶೀಲಿಸಿ

Published On - 8:06 am, Tue, 1 March 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ