AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Cylinder Price: 19 ಕೆಜಿ ವಾಣಿಜ್ಯ ಬಳಕೆ ಎಲ್​​ಪಿಜಿ ಸಿಲಿಂಡರ್​ ಬೆಲೆ ದೆಹಲಿಯಲ್ಲಿ 105 ರೂ. ಏರಿಕೆ

Commercial LPG Cylinder Price: ಜನವರಿಯಲ್ಲೂ ಕೂಡ 19 ಕೆಜಿ ಎಲ್​​ಪಿಜಿ ಸಿಲಿಂಡರ್​ ಬೆಲೆ 102.50 ರೂಪಾಯಿ ಕಡಿತಗೊಂಡಿತ್ತು. ಅಲ್ಲಿಯವರೆಗೂ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆ ಸತತವಾಗಿ ಏರಿಕೆಯಾಗುತ್ತಿತ್ತು.

LPG Cylinder Price: 19 ಕೆಜಿ ವಾಣಿಜ್ಯ ಬಳಕೆ ಎಲ್​​ಪಿಜಿ ಸಿಲಿಂಡರ್​ ಬೆಲೆ ದೆಹಲಿಯಲ್ಲಿ 105 ರೂ. ಏರಿಕೆ
ಸಾಂದರ್ಭಿಕ ಚಿತ್ರ
TV9 Web
| Updated By: Lakshmi Hegde|

Updated on:Mar 01, 2022 | 8:16 AM

Share

19 ಕೆಜಿ ತೂಕದ ವಾಣಿಜ್ಯ ಬಳಕೆ ಎಲ್​ಪಿಜಿ ಸಿಲಿಂಡರ್​ ಬೆಲೆ (LPG Cylinder Price)ಇಂದು ದೆಹಲಿಯಲ್ಲಿ 105 ರೂಪಾಯಿ ಏರಿಕೆಯಾಗಿದೆ. ಹೀಗಾಗಿ ರಾಷ್ಟ್ರರಾಜಧಾನಿಯಲ್ಲಿ ಇನ್ನು ಮುಂದೆ ಕಮರ್ಷಿಯಲ್​ ಎಲ್​​ಪಿಜಿ ಸಿಲಿಂಡರ್​ ಬೆಲೆ 2012 ರೂಪಾಯಿ. ಇದರೊಂದಿಗೆ 5 ಕೆಜಿ ತೂಕದ ಗ್ಯಾಸ್​ ಸಿಲಿಂಡರ್​ ಬೆಲೆ 27ರೂಪಾಯಿ ಹೆಚ್ಚಾಗಿದ್ದು, ದೆಹಲಿಯಲ್ಲಿ 5ಕೆಜಿ ಸಿಲಿಂಡರ್​ ಬೆಲೆ 569ರೂ.ಗೆ ಏರಿಕೆಯಾಗಿದೆ. 19 ಕೆಜಿ ತೂಕದ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆಯನ್ನು ಫೆಬ್ರವರಿಯಲ್ಲಿ ರಾಷ್ಟ್ರೀಯ ತೈಲು ಮಾರುಕಟ್ಟೆ ಕಂಪನಿಗಳು 91.50ರಷ್ಟು ಕಡಿತಗೊಳಿಸಿದ್ದವು.

ಜನವರಿಯಲ್ಲೂ ಕೂಡ 19 ಕೆಜಿ ಎಲ್​​ಪಿಜಿ ಸಿಲಿಂಡರ್​ ಬೆಲೆ 102.50 ರೂಪಾಯಿ ಕಡಿತಗೊಂಡಿತ್ತು. ಅಲ್ಲಿಯವರೆಗೂ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆ ಸತತವಾಗಿ ಏರಿಕೆಯಾಗುತ್ತಿತ್ತು. ಹೀಗಾಗಿ ರೆಸ್ಟೋರೆಂಟ್​ಗಳು, ಹೋಟೆಲ್​​ಗಳು, ಉಪಾಹಾರ ಗೃಹಗಳ ಮಾಲೀಕರಿಗೆ ಕೊಂಚ ಹೊರೆ ತಗ್ಗಿತ್ತು. ಆದರೆ ಇಂದು ಮತ್ತೆ ದೆಹಲಿಯಲ್ಲಿ 105 ರೂ. ಏರಿಕೆಯಾಗಿದ್ದು, ವಿವಿಧ ಮಹಾನಗರಗಳಲ್ಲೂ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಲಿದೆ.

ಡಿಸೆಂಬರ್​​ನಲ್ಲಿ ದೆಹಲಿಯಲ್ಲಿ 19 ಕೆಜಿ ಎಲ್​​ಪಿಜಿ ಸಿಲಿಂಡರ್​ ಬೆಲೆ 100 ರೂಪಾಯಿ ಏರಿಕೆಯಾಗುವ ಮೂಲಕ 2101 ರೂಪಾಯಿ ಆಗಿತ್ತು. 2012-13ರಲ್ಲಿ ಒಮ್ಮೆ ಈ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆ 2200ರೂಪಾಯಿ ತಲುಪಿದ ಮೇಲೆ ಇದೇ ಅತ್ಯಂತ ಹೆಚ್ಚು ಎಂದು ಪರಿಗಣಿಸಲಾಗಿತ್ತು. 2021ರ ಜನವರಿ ಮತ್ತು ಫೆಬ್ರವರಿಯಲ್ಲಿ ಇಳಿಕೆಯಾಗಿತ್ತು.  ಆದರೀಗ ಮತ್ತೆ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್​ ಬೆಲೆ 2000 ರೂಪಾಯಿ ಗಡಿ ದಾಟಿದೆ.

ಇದನ್ನೂ ಓದಿ: Petrol Diesel Rate Today:​ ಬೆಂಗಳೂರು ಸಹಿತ ಇತರ ನಗರಗಳ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ಇಲ್ಲಿ ಪರಿಶೀಲಿಸಿ

Published On - 8:06 am, Tue, 1 March 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!