GST Collection: ಫೆಬ್ರವರಿ ತಿಂಗಳ ಜಿಎಸ್​ಟಿ ಸಂಗ್ರಹ 1,33,026 ಕೋಟಿ; ಮೊದಲ ಬಾರಿ 10 ಸಾವಿರ ಕೋಟಿ ದಾಟಿದ ಸೆಸ್

2022ರ ಫೆಬ್ರವರಿ ತಿಂಗಳಲ್ಲಿ ಸರ್ಕಾರಕ್ಕೆ 1.33 ಲಕ್ಷ ಕೋಟಿ ರೂಪಾಯಿ ಜಿಎಸ್​ಟಿ ಆದಾಯ ಸಂಗ್ರಹ ಆಗಿದೆ. ಆ ಬಗ್ಗೆ ವಿವರವಾದ ಮಾಹಿತಿ ಈ ವರದಿಯಲ್ಲಿದೆ.

GST Collection: ಫೆಬ್ರವರಿ ತಿಂಗಳ ಜಿಎಸ್​ಟಿ ಸಂಗ್ರಹ 1,33,026 ಕೋಟಿ; ಮೊದಲ ಬಾರಿ 10 ಸಾವಿರ ಕೋಟಿ ದಾಟಿದ ಸೆಸ್
ಸಾಂದರ್ಭಿಕ ಚಿತ್ರ
Follow us
| Updated By: Srinivas Mata

Updated on: Mar 01, 2022 | 1:47 PM

2022ರ ಫೆಬ್ರವರಿ ತಿಂಗಳಲ್ಲಿ ಸಂಗ್ರಹಿಸಲಾದ ಒಟ್ಟು ಜಿಎಸ್​ಟಿ (GST) ಆದಾಯವು ರೂ. 1,33,026 ಕೋಟಿಗಳಾಗಿದ್ದು, ಇದರಲ್ಲಿ ಸಿಜಿಎಸ್​ಟಿ (CGST) ರೂ. 24,435 ಕೋಟಿ, ಎಸ್​ಜಿಎಸ್​ಟಿ (SGST) ರೂ. 30,779 ಕೋಟಿ, ಐಜಿಎಸ್​ಟಿ (IGST) ರೂ. 67,471 ಕೋಟಿ (ಸರಕುಗಳ ಆಮದಿನ ಮೇಲೆ ಸಂಗ್ರಹಿಸಲಾದ ರೂ. 33,837 ಕೋಟಿ ಸೇರಿದಂತೆ) ಮತ್ತು ಸೆಸ್ ರೂ. 10,340 ಕೋಟಿ (ಸರಕುಗಳ ಆಮದಿನ ಮೇಲೆ ಸಂಗ್ರಹಿಸಲಾದ ರೂ. 638 ಕೋಟಿ ಸೇರಿದಂತೆ) ಒಳಗೊಂಡಿದೆ. ಸರ್ಕಾರವು ಐಜಿಎಸ್‌ಟಿಯಿಂದ ಸಿಜಿಎಸ್‌ಟಿಗೆ ರೂ. 26,347 ಕೋಟಿ ಮತ್ತು ಎಸ್‌ಜಿಎಸ್‌ಟಿಗೆ ರೂ. 21,909 ಕೋಟಿ ಇತ್ಯರ್ಥ ಮಾಡಿದೆ. ನಿಯಮಿತ ಇತ್ಯರ್ಥದ ನಂತರ 2022ರ ಫೆಬ್ರವರಿಯಲ್ಲಿ ಕೇಂದ್ರ ಮತ್ತು ರಾಜ್ಯಗಳ ಒಟ್ಟು ಆದಾಯವು ಸಿಜಿಎಸ್​ಟಿ ಗಾಗಿ ರೂ. 50,782 ಕೋಟಿ ಮತ್ತು ಎಸ್​ಜಿಎಸ್​ಟಿಗಾಗಿ ರೂ. 52,688 ಕೋಟಿ ಆಗಿದೆ.

2022ರ ಫೆಬ್ರವರಿ ಆದಾಯವು ಕಳೆದ ವರ್ಷದ ಇದೇ ತಿಂಗಳ ಜಿಎಸ್​ಟಿ ಆದಾಯಕ್ಕಿಂತ ಶೇ 18ರಷ್ಟು ಹೆಚ್ಚಾಗಿದೆ ಮತ್ತು 2020ರ ಫೆಬ್ರವರಿಯಲ್ಲಿನ ಜಿಎಸ್​ಟಿ ಆದಾಯಕ್ಕಿಂತ ಶೇ 26ರಷ್ಟು ಹೆಚ್ಚಾಗಿದೆ. ತಿಂಗಳ ಅವಧಿಯಲ್ಲಿ ಸರಕುಗಳ ಆಮದುಗಳಿಂದ ಆದಾಯವು ಶೇ 38ರಷ್ಟು ಹೆಚ್ಚಾಗಿದೆ ಮತ್ತು ಆದಾಯಗಳು ದೇಶೀಯ ವಹಿವಾಟಿನಿಂದ (ಸೇವೆಗಳ ಆಮದು ಸೇರಿದಂತೆ) ಕಳೆದ ವರ್ಷದ ಇದೇ ತಿಂಗಳಲ್ಲಿ ಈ ಮೂಲಗಳಿಂದ ಬಂದ ಆದಾಯಕ್ಕಿಂತ ಶೇ 12ರಷ್ಟು ಹೆಚ್ಚಾಗಿದೆ.

ಫೆಬ್ರವರಿಯಲ್ಲಿ 28-ದಿನಗಳಿದ್ದು, ಸಾಮಾನ್ಯವಾಗಿ ಜನವರಿಗಿಂತ ಕಡಿಮೆ ಆದಾಯವನ್ನು ಹೊಂದಿದೆ. 2022ರ ಫೆಬ್ರವರಿಯಲ್ಲಿನ ಈ ಹೆಚ್ಚಿನ ಬೆಳವಣಿಗೆಯನ್ನು ಭಾಗಶಃ ಲಾಕ್‌ಡೌನ್‌ಗಳು, ವಾರಾಂತ್ಯ ಮತ್ತು ರಾತ್ರಿ ಕರ್ಫ್ಯೂಗಳು ಹಾಗೂ ಜನವರಿ 20ರ ಸುಮಾರಿಗೆ ಉತ್ತುಂಗಕ್ಕೇರಿದ ಓಮಿಕ್ರಾನ್ ಅಲೆಯಿಂದ ವಿವಿಧ ರಾಜ್ಯಗಳು ಜಾರಿಗೊಳಿಸಿದ ವಿವಿಧ ನಿರ್ಬಂಧಗಳ ಸಂದರ್ಭದಲ್ಲಿಯೂ ನೋಡಬೇಕಾಗುತ್ತದೆ.

ಇದು ಐದನೇ ಬಾರಿಗೆ ಜಿಎಸ್‌ಟಿ ಸಂಗ್ರಹ ರೂ. 1.30 ಲಕ್ಷ ಕೋಟಿ ದಾಟಿದೆ. ಜಿಎಸ್‌ಟಿ ಜಾರಿ ಆದಾಗಿನಿಂದ ಮೊದಲ ಬಾರಿಗೆ ಸೆಸ್ ಸಂಗ್ರಹವು ರೂ. 10,000 ಕೋಟಿ ಗಡಿ ದಾಟಿದ್ದು, ಇದು ಕೆಲವು ಪ್ರಮುಖ ವಲಯಗಳ ಚೇತರಿಕೆಯನ್ನು ಸೂಚಿಸುತ್ತದೆ, ವಿಶೇಷವಾಗಿ ವಾಹನ ಮಾರಾಟವನ್ನು ತೋರಿಸುತ್ತದೆ.

ಇದನ್ನೂ ಓದಿ: GST: ಜನವರಿಯಲ್ಲಿ ಒಟ್ಟು ಜಿಎಸ್​ಟಿ ಸಂಗ್ರಹ ರೂ. 1,38,394 ಕೋಟಿ; ಕಳೆದ ವರ್ಷಕ್ಕಿಂತ ಶೇ 15ರಷ್ಟು ಹೆಚ್ಚು

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್