AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

9 ವರ್ಷದಲ್ಲಿ “ಜನ್ ಧನ್ ಖಾತೆ”ಯ ಸದುಪಯೋಗ ಪಡೆದುಕೊಂಡ 50 ಕೋಟಿ ಜನ

Jan Dhan Accounts: ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಅತ್ಯಂತ ಜನಪ್ರಿಯ ಯೋಜನೆ ಪ್ರಧಾನ ಮಂತ್ರಿ ಜನ್ ಧನ್ ಯೋಜನೆ (ಪಿಎಂಜೆಡಿವೈ)ಯನ್ನು ಸದುಪಯೋಗ ಮಾಡಿಕೊಂಡ ದೇಶದ ಒಟ್ಟು ಜನ್ ಧನ್ ಖಾತೆಗಳ ಸಂಖ್ಯೆ 50 ಕೋಟಿ ಗಡಿ ದಾಟಿದ್ದು, ಶೇ 56ರಷ್ಟು ಖಾತೆಗಳನ್ನು ಮಹಿಳೆಯರು ಹೊಂದಿದ್ದಾರೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಹೇಳಿದೆ.

9 ವರ್ಷದಲ್ಲಿ ಜನ್ ಧನ್ ಖಾತೆಯ ಸದುಪಯೋಗ ಪಡೆದುಕೊಂಡ 50 ಕೋಟಿ ಜನ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Aug 19, 2023 | 10:21 AM

Share

ದೆಹಲಿ, ಆ.19 : ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ಮೊದಲು ತಂದ ಮತ್ತು ಅತ್ಯಂತ ಜನಪ್ರಿಯ ಯೋಜನೆ ಪ್ರಧಾನ ಮಂತ್ರಿ ಜನ್ ಧನ್ ಯೋಜನೆ (ಪಿಎಂಜೆಡಿವೈ)ಯನ್ನು ಸದುಪಯೋಗ ಮಾಡಿಕೊಂಡ ದೇಶದ ಒಟ್ಟು ಜನ್ ಧನ್ ಖಾತೆಗಳ ಸಂಖ್ಯೆ 50 ಕೋಟಿ ಗಡಿ ದಾಟಿದ್ದು, ಶೇ 56ರಷ್ಟು ಖಾತೆಗಳು ಮಹಿಳೆಯರು ಹೊಂದಿದ್ದಾರೆ ಎಂದು ಹಣಕಾಸು ಸಚಿವಾಲಯ ಶುಕ್ರವಾರ (ಆ.18) ತಿಳಿಸಿದೆ. ಈ ಪೈಕಿ ಶೇ 67ರಷ್ಟು ಖಾತೆಗಳನ್ನು ಗ್ರಾಮೀಣ ಮತ್ತು ಅರೆ ನಗರ ಪ್ರದೇಶಗಳಲ್ಲಿ ತೆರೆಯಲಾಗಿದೆ ಎಂದು ಸಚಿವಾಲಯ ವರದಿಯಲ್ಲಿ ಹೇಳಿದೆ. ಈ ಖಾತೆಗಳಲ್ಲಿನ ಒಟ್ಟು ಠೇವಣಿಗಳು ₹ 2.03 ಲಕ್ಷ ಕೋಟಿಗಿಂತ ಹೆಚ್ಚಿದ್ದು , ಸುಮಾರು 34 ಕೋಟಿ ರೂಪಾಯಿ ಪಾಸ್​​ ಬುಕ್ ಖಾತೆಗಳೊಂದಿಗೆ ಉಚಿತವಾಗಿ ನೀಡಲಾಗಿದೆ.

ಪ್ರಧಾನ ಮಂತ್ರಿ ಜನ್ ಧನ್ ಯೋಜನೆ (ಪಿಎಂಜೆಡಿವೈ) ಖಾತೆಗಳಲ್ಲಿನ ಸರಾಸರಿ ಬ್ಯಾಲೆನ್ಸ್ ₹ 4,076 ಮತ್ತು ಇವುಗಳಲ್ಲಿ 5.5 ಕೋಟಿಗೂ ಹೆಚ್ಚು ಜನರು ನೇರ ಲಾಭ ವರ್ಗಾವಣೆಯನ್ನು (ಡಿಬಿಟಿ) ಪಡೆಯುತ್ತಿದ್ದಾರೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಇನ್ನು ಆಗಸ್ಟ್ 28, 2014 ರಂದು ಪ್ರಾರಂಭವಾದ PMJDY (ಪ್ರಧಾನ ಮಂತ್ರಿ ಜನ್ ಧನ್ ಯೋಜನೆ) ದೇಶದಲ್ಲಿ ಆರ್ಥಿಕವಾಗಿ ಹಿಂದುಳಿದವರು ಮತ್ತು ಬ್ಯಾಂಕ್​​ ಖಾತೆ ಇಲ್ಲದ ಜನರಿಗೆ ಇದು ನೆರವಾಗಿದೆ, ಜತೆಗೆ ಈ ಯೋಜನೆಯನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತಂದಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಸಾಮಾನ್ಯ ಉಳಿತಾಯ ಖಾತೆಯನ್ನು ಜನ್-ಧನ್ ಖಾತೆಗೆ ಬದಲಾಯಿಸುವುದು ಹೇಗೆ?

PMJDY ಖಾತೆದಾರರಿಗೆ ಕನಿಷ್ಠ ಬ್ಯಾಲೆನ್ಸ್‌ನ (ಶೂನ್ಯ ಬ್ಯಾಲೆನ್ಸ್‌) ಅಗತ್ಯವಿಲ್ಲದೆ ಬ್ಯಾಂಕ್ ಖಾತೆಯನ್ನು ಹೊಂದುವ ಅವಕಾಶವನ್ನು ನೀಡಿತ್ತು. ₹ 2 ಲಕ್ಷದ ಅಂತರ್ನಿರ್ಮಿತ ಅಪಘಾತ ವಿಮೆಯೊಂದಿಗೆ ಉಚಿತ ರುಪೇ ಡೆಬಿಟ್ ಕಾರ್ಡ್‌ಗಳು ಮತ್ತು ₹ 10,000 ವರೆಗಿನ ಓವರ್‌ಡ್ರಾಫ್ಟ್ ಸೌಲಭ್ಯದಂತಹ ಬಹು ಪ್ರಯೋಜನಗಳನ್ನು ಇದು ನೀಡುತ್ತದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:13 am, Sat, 19 August 23

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು