AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amazon Layoff: ಅಮೇಜಾನ್ 9,000 ಲೇ ಆಫ್; ಭಾರತದಲ್ಲಿ ಕೆಲಸ ಕಳೆದುಕೊಂಡ 500 ಮಂದಿ

500 Employees of Amazon India Lose Job: ಜಾಗತಿಕ ಇ-ಕಾಮರ್ಸ್ ದಿಗ್ಗಜ ಅಮೇಜಾನ್ 9,000 ಉದ್ಯೋಗಿಗಳನ್ನು ಲೇ ಆಫ್ ಮಾಡುತ್ತಿದ್ದು, ಅದರ ಭಾಗವಾಗಿ ಭಾರತದಲ್ಲಿ 500 ಮಂದಿ ಕೆಲಸ ಕಳೆದುಕೊಂಡಿರುವುದು ಗೊತ್ತಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ...

Amazon Layoff: ಅಮೇಜಾನ್ 9,000 ಲೇ ಆಫ್; ಭಾರತದಲ್ಲಿ ಕೆಲಸ ಕಳೆದುಕೊಂಡ 500 ಮಂದಿ
ಅಮೇಜಾನ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 16, 2023 | 11:32 AM

ನವದೆಹಲಿ: ಅಮೇಜಾನ್ ಲೇ ಆಫ್ ಭರಾಟೆಗೆ (Amazon Layoffs) ಭಾರತದಲ್ಲಿ ಅದರ ಸುಮಾರು 500 ಉದ್ಯೋಗಿಗಳು ಕೆಲಸ ಕಳೆದುಕೊಂಡಿದ್ದಾರೆ. ವಿಶ್ವದ ಇಕಾಮರ್ಸ್ ದಿಗ್ಗಜ ಅಮೇಜಾನ್ ಸಂಸ್ಥೆ 9,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುವುದಾಗಿ ಮಾರ್ಚ್ ತಿಂಗಳಲ್ಲಿ ಘೋಷಿಸಿತ್ತು. ಅದರ ಭಾಗವಾಗಿ ವಿವಿಧ ದೇಶಗಳಲ್ಲಿರುವ ಅದರ ಉದ್ಯೋಗಿಗಳನ್ನು ಲೇ ಆಫ್ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಭಾರತದಲ್ಲಿ ಅಮೇಜಾನ್​ನ ವಿವಿಧ ವಿಭಾಗಗಳಿಂದ 500 ಮಂದಿಯನ್ನು ಈಗ ಕೆಲಸದಿಂದ ತೆಗೆದಿರುವುದು ತಿಳಿದುಬಂದಿದೆ.

ವರದಿಗಳ ಪ್ರಕಾರ, ಅಮೇಜಾನ್​ನ ವೆಬ್ ಸರ್ವಿಸ್, ಮಾನವ ಸಂಪನ್ಮೂಲ ವಿಭಾಗ ಮತ್ತು ಕಸ್ಟಮರ್ ಸಪೋರ್ಟ್ ವಿಭಾಗಗಳಿಂದ ಹೆಚ್ಚಿನ ಉದ್ಯೋಗಿಗಳನ್ನು ತೆಗೆಯಲಾಗಿದೆ. ಭಾರತದಲ್ಲಿ ಅಮೇಜಾನ್​ನ ಲೇ ಆಫ್ ಇಷ್ಟಕ್ಕೆ ನಿಲ್ಲುತ್ತದೆ ಎನ್ನುವುದು ಖಾತ್ರಿ ಇಲ್ಲ. ಜಾಗತಿಕವಾಗಿ 9,000 ಜಾಬ್ ಕಟ್ ಮಾಡುತ್ತಿರುವ ಅಮೇಜಾನ್ ಸಂಸ್ಥೆ ಭಾರತದಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಕಡಿತ ಮಾಡುವ ಸಾಧ್ಯತೆ ಇಲ್ಲದಿಲ್ಲ.

ಇದನ್ನೂ ಓದಿPVR Inox: 50 ಸಿನಿಮಾ ಹಾಲ್ ಮುಚ್ಚಲಿರುವ ಪಿವಿಆರ್ ಐನಾಕ್ಸ್; ಭಾರೀ ನಷ್ಟ ಕಾರಣ- ಹಿಂದಿ ಚಿತ್ರಗಳನ್ನು ನೋಡೋರಿಲ್ಲವಾ?

ಅಮೇಜಾನ್ ಸೇರಿದಂತೆ ಜಾಗತಿಕ ಇಕಾಮರ್ಸ್ ಸಂಸ್ಥೆಗಳು ಕಳೆದ ವರ್ಷ ಹಿನ್ನಡೆ ಅನುಭವಿಸುತ್ತಿವೆ. ಕಾಮರ್ಸ್ ಕ್ಷೇತ್ರವೇ ಕುಂಠಿತಗೊಂಡಿದೆ. ಜನರು ಆನ್​ಲೈನ್ ಶಾಪಿಂಗ್ ಮಾಡುವ ಪ್ರಮಾಣ ಕಡಿಮೆ ಆಗಿದೆ. ಕೋವಿಡ್ ಮುಂಚೆ ಇದ್ದ ಸ್ಥಿತಿ ಬರುತ್ತಿದೆ. ಇದು ಅಮೇಜಾನ್ ಕಳೆದ ವರ್ಷ ಹಿನ್ನಡೆ ಕಾಣಲು ಕಾರಣವಾದರೆ, ಮುಂಬರುವ ದಿನಗಳು ಜಾಗತಿಕ ಆರ್ಥಿಕ ಹಿಂಜರಿತದ ಸ್ಥಿತಿ ಕಾಣಲಿರುವುದರಿಂದ ಅಮೇಜಾನ್​ಗೆ ಹೆಚ್ಚಿನ ಅಪಾಯ ಕಾದಿದೆ. ಈ ಹಿನ್ನೆಲೆಯಲ್ಲಿ ಅದು ತನ್ನ ಪ್ರಮುಖ ವೆಚ್ಚಗಳನ್ನು ಕಡಿಮೆ ಮಾಡುತ್ತಿದೆ. ಈ ಹಿಂದೆ ಜನವರಿಯಲ್ಲಿ 18,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕುವುದಾಗಿ ಅಮೇಜಾನ್ ಘೋಷಿಸಿತ್ತು.

ಕಾಮರ್ಸ್ ಕಂಪನಿಗಳು ಮಾತ್ರವಲ್ಲ ಗೂಗಲ್, ಮೆಟಾ, ಐಬಿಎಂ ಇತ್ಯಾದಿ ಟೆಕ್ ಕಂಪನಿಗಳು ಲೇ ಆಫ್ ಮಾಡುತ್ತಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ