GST Council Meeting: ಹಲವು ವಸ್ತುಗಳ ಜಿಎಸ್​ಟಿ ಭಾರ ಇಳಿಸಿದ ನಿರ್ಮಲಾ ಸೀತಾರಾಮನ್; ಇಲ್ಲಿದೆ ವಿವರ

ಆನ್​ಲೈನ್ ಗೇಮಿಂಗ್, ಕುದುರೆ ರೇಸ್ ಹಾಗೂ ಕ್ಯಾಸಿನೋಗಳ ಮೇಲಿನ ತೆರಿಗೆಯ ಸ್ಲ್ಯಾಬ್ ಅನ್ನು ಶೇ 28ಕ್ಕೆ ಹೆಚ್ಚಿಸಲಾಗಿದೆ. ಕ್ಯಾನ್ಸರ್ ಔಷಧಕ್ಕೆ ಜಿಎಸ್​ಟಿಯಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ.

GST Council Meeting: ಹಲವು ವಸ್ತುಗಳ ಜಿಎಸ್​ಟಿ ಭಾರ ಇಳಿಸಿದ ನಿರ್ಮಲಾ ಸೀತಾರಾಮನ್; ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Follow us
|

Updated on:Jul 11, 2023 | 9:09 PM

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ ಮಂಡಳಿಯ 50ನೇ ಸಭೆಯಲ್ಲಿ (GST Council Meeting) ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಹಲವು ವಸ್ತುಗಳ ತೆರಿಗೆಯಲ್ಲಿ ಭಾರಿ ಇಳಿಕೆ ಮಾಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ, ಬೇಯಿಸದ / ಕರಿಯದ ಸ್ನ್ಯಾಕ್ಸ್​ ಪೊಟ್ಟಣದ (Uncooked/Unfried Extruded Snack Pallets) ಮೇಲಿನ ತೆರಿಗೆಯ ಸ್ಲ್ಯಾಬ್​ ಅನ್ನು ಶೇ 18ರಿಂದ ಶೇ 5ಕ್ಕೆ ಇಳಿಕೆ ಮಾಡಲಾಗಿದೆ. ಕ್ಯಾನ್ಸರ್ ಔಷಧಕ್ಕೆ (Cancer Drug) ಜಿಎಸ್​​ಟಿಯಿಂದ ಸಂಪೂರ್ಣ ವಿನಾಯಿತಿ ಘೋಷಿಸಲಾಗಿದೆ.

ಅದೇ ರೀತಿ, ಮೀನಿನ ಎಣ್ಣೆಯಿಂದ ತಯಾರಿಸಿದ ಪೇಸ್ಟ್, ಕೃತಕ ಆಭರಣ ತಯಾರಿಯಲ್ಲಿ ಬಳಸುವ ಜರಿ ದಾರದ ಮೇಲಿನ ಜಿಎಸ್​​ಟಿ ಸ್ಲ್ಯಾಬ್​ ಅನ್ನೂ ಶೇ 18ರಿಂದ ಶೇ 5ಕ್ಕೆ ಇಳಿಕೆ ಮಾಡಲಾಗಿದೆ. ಆದರೆ ಆನ್​ಲೈನ್ ಗೇಮಿಂಗ್, ಕುದುರೆ ರೇಸ್ ಹಾಗೂ ಕ್ಯಾಸಿನೋಗಳ ಮೇಲಿನ ತೆರಿಗೆಯ ಸ್ಲ್ಯಾಬ್ ಅನ್ನು ಶೇ 28ಕ್ಕೆ ಹೆಚ್ಚಿಸಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.

ಖಾಸಗಿ ಸಂಸ್ಥೆಗಳ ಉಪಗ್ರಹ ಉಡಾವಣೆಗೂ ಜಿಎಸ್​ಟಿ ವಿನಾಯಿತಿ

ಖಾಸಗಿ ಸಂಸ್ಥೆಗಳ ಉಪಗ್ರಹ ಉಡಾವಣಾ ಸೇವೆಗಳಿಗೂ ಜಿಎಸ್​ಟಿ ತೆರಿಗೆ ವಿನಾಯಿತಿ ನೀಡಲಾಗಿದೆ ಎಂದು ಹಣಕಾಸು ಸಚಿವೆ ಮಾಹಿತಿ ನೀಡಿದರು. ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿನ ಚಟುವಟಿಕೆಗಳಿಗೆ ಉತ್ತೇಜನ ನೀಡುವ ದೃಷ್ಟಿಯಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ.

ಸಿನಿಮಾ ಥಿಯೇಟರ್​​ಗಳಲ್ಲಿಆಹಾರ, ಪಾನೀಯಗಳ ಮೇಲೆ ಶೇ 5 ಜಿಎಸ್​ಟಿ

ಸಿನಿಮಾ ಥಿಯೇಟರ್​​ಗಳಲ್ಲಿ ಮಾರಾಟ ಮಾಡಲಾಗುವ ಆಹಾರ, ಪಾನೀಯಗಳ ಮೇಲೆ ಶೇ 18ರ ಜಿಎಸ್​ಟಿ ವಿಧಿಸುಗುತ್ತಿಲ್ಲ. ಶೇ 5ರಷ್ಟು ಮಾತ್ರವೇ ಜಿಎಸ್​ಟಿ ವಿಧಿಸಲಾಗುತ್ತಿದೆ ಎಂದು ಆದಾಯ ಕಾರ್ಯದರ್ಶಿ ಸಂಜಯ್ ಮಲ್ಹೋತ್ರಾ ಸ್ಪಷ್ಟನೆ ನೀಡಿದರು. ಜಿಎಸ್​ಟಿ ಮಂಡಳಿ ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಹಣಕಾಸು ಅಕ್ರಮ ವರ್ಗಾವಣೆ ತಡೆ ಕಾಯ್ದೆಗೂ (PMLA) ಜಿಎಸ್​ಟಿ ನಿಯಮಕ್ಕೂ ಸಂಬಂಧವಿಲ್ಲ. ಜಿಎಸ್​​ಟಿಎನ್​ ಮಾಹಿತಿಯನ್ನು ಪಿಎಂಎಲ್​ಎ ಅಡಿ ತರುವ ಅಧಿಸೂಚನೆ ತನಿಖಾ ಸಂಸ್ಥೆಗಳನ್ನು ಬಲಪಡಿಸುವ ಕ್ರಮವಷ್ಟೇ. ತನಿಖಾ ಸಂಸ್ಥೆಗಳಿಗೆ ತೆರಿಗೆ ವಂಚನೆಯ ಮಾಹಿತಿ ಈ ಹಿಂದೆ ದೊರೆಯುತ್ತಿರಲಿಲ್ಲ ಎಂದು ತಿಳಿಸಿದರು.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:35 pm, Tue, 11 July 23

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ